Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭತ್ತೆಗೆ ಬ್ಯಾಂಕ್ ಕಾರ್ಮಿಕರ ಆಗ್ರಹ

ಭತ್ತೆಗೆ ಬ್ಯಾಂಕ್ ಕಾರ್ಮಿಕರ ಆಗ್ರಹ

ನೋಟ್ ಬ್ಯಾನ್ ಅವಧಿಯಲ್ಲಿ ಹೆಚ್ಚುವರಿ ದುಡಿಮೆ

ವಾರ್ತಾಭಾರತಿವಾರ್ತಾಭಾರತಿ2 Jan 2017 11:43 PM IST
share

ಹೊಸದಿಲ್ಲಿ,ಜ.2: ನಗದು ಅಮಾನ್ಯತೆ ಪ್ರಕ್ರಿಯೆಯ ಅವಧಿಯಲ್ಲಿ ಕಠಿಣ ಪರಿಶ್ರಮ ದೊಂದಿಗೆ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಬ್ಯಾಂಕ್ ಉದ್ಯೋಗಿಗಳನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿದ ಬೆನ್ನಲ್ಲೇ ಬ್ಯಾಂಕ್ ಒಕ್ಕೂಟವೊಂದು, ಡಿಸೆಂಬರ್ 30ರಂದು ಕೊನೆಗೊಂಡ 50 ದಿನಗಳಲ್ಲಿ ಬ್ಯಾಂಕ್ ಸಿಬ್ಬಂದಿಯ ಹೆಚ್ಚುವರಿ ತಾಸುಗಳ ದುಡಿಮೆಗೆ ಓವರ್‌ಟೈಮ್ ಭತ್ತೆ ನೀಡಬೇಕೆಂದು ಸೋಮವಾರ ಆಗ್ರಹಿಸಿದೆ.

 ಭಾರತೀಯ ಮಜ್ದೂರ್ ಸಂಘದ ಸಹಸಂಸ್ಥೆಯಾಗಿರುವ ರಾಷ್ಟ್ರೀಯ ಬ್ಯಾಂಕ್ ಕಾರ್ಮಿಕರ ಸಂಘಟನೆ (ಎನ್‌ಒಬಿಡಬ್ಲು) ಪ್ರಧಾನಿಗೆ ಬರೆದ ಪತ್ರದಲ್ಲಿ ಈ ಬೇಡಿಕೆಯಿಟ್ಟಿದೆ. ‘‘ಕಳೆದ 50 ದಿನಗಳಲ್ಲಿ ಬ್ಯಾಂಕ್ ಉದ್ಯೋಗಿಗಳು ಪ್ರತಿದಿನ 12ರಿಂದ 18 ತಾಸುಗಳವರೆಗೆ ದುಡಿದಿದ್ದಾರೆ. ಕೆಲವು ಬ್ಯಾಂಕ್‌ಗಳು ಮಾತ್ರ ಹೆಚ್ಚುವರಿ ದುಡಿಮೆಗಾಗಿ ಓವರ್‌ಟೈಮ್ ಭತ್ತೆಯನ್ನು ನೀಡುವ ಬಗ್ಗೆ ಪರಿಶೀಲಿಸುತ್ತಿವೆ. ಹೆಚ್ಚುವರಿ ತಾಸುಗಳ ದುಡಿಮೆಗಾಗಿ ಎಲ್ಲಾ ಬ್ಯಾಂಕ್‌ಗಳ ಉದ್ಯೋಗಿಗಳಿಗೆ ಓವರ್‌ಟೈಮ್ ಭತ್ತೆ ನೀಡುವುದನ್ನು ಪರಿಗಣಿಸಬೇಕೆಂದು ದಯ ವಿಟ್ಟು ಬ್ಯಾಂಕ್‌ಗಳ ಆಡಳಿತವರ್ಗಕ್ಕೆ ಸಲಹೆ ನೀಡಬೇಕು’’ ಎಂದು ಪತ್ರದಲ್ಲಿ ತಿಳಿಸಲಾಗಿದೆ.
 ಬ್ಯಾಂಕ್ ನೇಮಕಾತಿ ಪ್ರಕ್ರಿಯೆಗಳನ್ನು ಚುರುಕುಗೊಳಿಸುವಂತೆಯೂ ಪತ್ರವು ಆಗ್ರಹಿಸಿದೆ ಮತ್ತು ಸರಕಾರದ ಎಲ್ಲಾ ಯೋಜನೆಗಳನ್ನು ಜಾರಿಗೊಳಿಸುವುದಕ್ಕೆ ಬ್ಯಾಂಕ್‌ಗಳಲ್ಲಿ ಸಿಬ್ಬಂದಿಯ ಕೊರತೆ ತೀವ್ರವಾಗಿದೆಯೆಂದು ಅದು ಪ್ರಧಾನಿಯ ಗಮನಸೆಳೆದಿದೆ. ಈ ವರ್ಷದ ನವೆಂಬರ್‌ನಲ್ಲಿ ವೇತನ ಪರಿಷ್ಕರಣೆಯ ಸಂದರ್ಭದಲ್ಲಿ ಬ್ಯಾಂಕ್ ಉದ್ಯೋಗಿಗಳ ವೇತನದಲ್ಲಿ ತೃಪ್ತಿಕರವಾದ ಏರಿಕೆಯನ್ನು ಮಾಡುವಂತೆಯೂ ಎನ್‌ಒಬಿಡಬ್ಲು ಉಪಾಧ್ಯಕ್ಷ ಅಶ್ವನಿ ರಾಣಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.
ಡಿಸೆಂಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ನೋಟು ಅಮಾನ್ಯತೆ ಪ್ರಕ್ರಿಯೆಯ ಅವಧಿಯಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ ಬ್ಯಾಂಕ್ ಉದ್ಯೋಗಿಗಳು ಹಗಲು ರಾತ್ರಿಯೆನ್ನದೆ ಸಾರ್ವಜನಿಕರಿಗೆ ಸೇವೆ ಸಲ್ಲಿಸಿದ್ದರು. ಅಂಚೆಕಚೇರಿ ಸಿಬ್ಬಂದಿ, ಬ್ಯಾಂಕಿಂಗ್ ಪ್ರತಿನಿಧಿಗಳು ಕೂಡಾ ಅಸಾಧಾರಣವಾದ ಸೇವೆ ಸಲ್ಲಿಸಿದ್ದರೆಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X