Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಿಂಚಿನ ಶತಕ ಸಿಡಿಸಿ ಬ್ರಾಡ್ಮನ್...

ಮಿಂಚಿನ ಶತಕ ಸಿಡಿಸಿ ಬ್ರಾಡ್ಮನ್ ಕ್ಲಬ್‌ಗೆ ಸೇರಿದ ವಾರ್ನರ್

ವಾರ್ತಾಭಾರತಿವಾರ್ತಾಭಾರತಿ3 Jan 2017 12:48 PM IST
share
ಮಿಂಚಿನ ಶತಕ ಸಿಡಿಸಿ ಬ್ರಾಡ್ಮನ್ ಕ್ಲಬ್‌ಗೆ ಸೇರಿದ ವಾರ್ನರ್

ಸಿಡ್ನಿ, ಜ.3: ಆಸ್ಟ್ರೇಲಿಯ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಪಾಕಿಸ್ತಾನ ವಿರುದ್ಧ ಮಂಗಳವಾರ ಇಲ್ಲಿ ಆರಂಭವಾದ ಮೂರನೆ ಟೆಸ್ಟ್ ಪಂದ್ಯದಲ್ಲಿ ಮಿಂಚಿನ ವೇಗದಲ್ಲಿ ಶತಕ ಬಾರಿಸಿದರು. ಈ ಮೂಲಕ ಆಸ್ಟ್ರೇಲಿಯದ ದಂತಕತೆ ಸರ್ ಡೊನಾಲ್ಡ್ ಬ್ರಾಡ್ಮನ್ ಕ್ಲಬ್‌ಗೆ ಸೇರ್ಪಡೆಯಾದರು.

ಎಡಗೈ ಬ್ಯಾಟ್ಸ್‌ಮನ್ ವಾರ್ನರ್ ಭೋಜನ ವಿರಾಮಕ್ಕೆ ಮೊದಲೇ ಕೇವಲ117 ನಿಮಿಷದಲ್ಲಿ 78 ಎಸೆತಗಳಲ್ಲಿ 18ನೆ ಟೆಸ್ಟ್ ಶತಕ ಬಾರಿಸಿದರು. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೂರನೆ ಬಾರಿ ಶತಕ ಪೂರೈಸಿದರು. ವಾರ್ನರ್ 17 ಬೌಂಡರಿಗಳನ್ನು ಬಾರಿಸಿ ಮೂರಂಕೆ ತಲುಪಿದರು. ಆಸ್ಟ್ರೇಲಿಯದಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭೋಜನ ವಿರಾಮಕ್ಕೆ ಮೊದಲೇ ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ವಾರ್ನರ್.

ಬ್ರಾಡ್ಮನ್ 1930ರಲ್ಲಿ ಲೀಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭೋಜನ ವಿರಾಮಕ್ಕೆ ಮೊದಲೇ 105 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಪಂದ್ಯದಲ್ಲಿ ಅವರು ಒಟ್ಟು 334 ರನ್ ಗಳಿಸಿದ್ದರು. ಆಸೀಸ್‌ನ ಇನ್ನೋರ್ವ ಮಾಜಿ ಆಟಗಾರ ವಿಕ್ಟರ್ ಟ್ರಂಪರ್ ಮ್ಯಾಂಚೆಸ್ಟರ್‌ನಲ್ಲಿ 1902ರಲ್ಲಿ ನಡೆದ ಪಂದ್ಯದಲ್ಲಿ 103 ರನ್ ಗಳಿಸಿದ್ದರು.

ಪಾಕಿಸ್ತಾನ ಮಜೀದ್ ಖಾನ್(108) 1976ರಲ್ಲಿ ಕರಾಚಿಯಲ್ಲಿ ನ್ಯೂಝಿಲೆಂಡ್‌ನ ವಿರುದ್ಧದ ಟೆಸ್ಟ್‌ನಲ್ಲಿ ಭೋಜನ ವಿರಾಮಕ್ಕೆ ಮೊದಲು ಶತಕ ಬಾರಿಸಿದ್ದರು. ಮಜೀದ್ ಬಳಿಕ ಈ ಸಾಧನೆ ಮಾಡಿದ ಮೊದಲಿಗ ವಾರ್ನರ್.

‘‘ಕ್ರಿಕೆಟ್‌ನ ಶ್ರೇಷ್ಠ ಆಟಗಾರರ ಕ್ಲಬ್‌ಗೆ ಸೇರಿದ್ದು ಮಹಾಗೌರವ. ಇಂತಹ ಪ್ರದರ್ಶನವನ್ನು ಮುಂದುವರಿಸುವ ವಿಶ್ವಾಸ ನನಗಿದೆ’’ ಎಂದು ವಾರ್ನರ್ ಹೇಳಿದ್ದಾರೆ.

ವಾರ್ನರ್ ಎಸ್‌ಸಿಜಿಯಲ್ಲಿ ಎರಡನೆ ಬಾರಿ ವೇಗದ ಟೆಸ್ಟ್ ಶತಕ ಬಾರಿಸಿದರು. ವೆಸ್ಟ್‌ಇಂಡೀಸ್ ವಿರುದ್ಧ ಈ ಹಿಂದೆ ನಡೆದಿದ್ದ ಪಂದ್ಯದಲ್ಲಿ 82 ಎಸೆತಗಳಲ್ಲಿ ಶತಕ ಬಾರಿಸಿದರು.

ವಾರ್ನರ್ ಲಂಚ್ ವಿರಾಮದ ಬಳಿಕ ರಿಯಾಝ್‌ಗೆ ವಿಕೆಟ್ ಒಪ್ಪಿಸಿದರು. 95 ಎಸೆತಗಳಲ್ಲಿ 113 ರನ್ ಗಳಿಸಿದ ವಾರ್ನರ್ 17 ಬೌಂಡರಿಗಳನ್ನು ಬಾರಿಸಿದ್ದರು. ಉಪ ನಾಯಕ ವಾರ್ನರ್ 60 ಟೆಸ್ಟ್‌ಗಳಲ್ಲಿ 49.11ರ ಸರಾಸರಿಯಲ್ಲಿ 5,206 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X