ನಳಿನ್ ಪ್ರಚೋದನಾತ್ಮಕ ಭಾಷಣದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ : ಪೊಲೀಸ್ ಕಮೀಷನರ್

ಮಂಗಳೂರು, ಜ.3 : ಮಂಗಳೂರು ಸಂಸದ ನಳಿನ್ ರ ಪ್ರಚೋದನಾತ್ಮಕ ಭಾಷಣದ ಬಗ್ಗೆನ್ಯಾಯಲಯಕ್ಕೆ ಮಾಹಿತಿ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಎಂ ಚಂದ್ರಶೇಖರ್ ಹೇಳಿದ್ದಾರೆ.
ಈ ಪ್ರಕರಣದ ಬಗ್ಗೆ ಈಗಾಗಲೇ ದೂರು ದಾಖಲಾಗಿದ್ದು , ಐಪಿಸಿ ಸೆಕ್ಷನ್ 506 ರಡಿ ಪ್ರಕರಣ ದಾಖಲಿಸಲಾಗಿದೆ.ನ್ಯಾಯಲಯದ ನಿರ್ದೇಶನ ದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಯಾವ ರಾಜಕೀಯ ಒತ್ತಡಕ್ಕೆ ಬಗ್ಗುವುದಿಲ್ಲ ಎಂದು ಕಮೀಷನರ್ ಸ್ಪಷ್ಟಪಡಿಸಿದ್ದಾರೆ.
ಜ. 1 ರಂದು ಕಾರ್ತಿಕ್ ರಾಜ್ ಕೊಲೆ ಪ್ರಕರಣದ ತ್ವರಿತ ತನಿಖೆಗೆ ಆಗ್ರಹಿಸಿ ಕೊಣಾಜೆಯಲ್ಲಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ‘ ಕೊಲೆಗಾರರನ್ನು 10 ದಿನಗಳೊಳಗೆ ಬಂಧಿಸದಿದ್ದರೆ ಜಿಲ್ಲೆಗೆ ಬೆಂಕಿ ಬೀಳುವ ಸಾಧ್ಯತೆ ಇದೆ ‘ ಎಂಬ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆಯ ವಿರುದ್ಧ ನಾನಾ ಕಡೆಯಿಂದಲೂ ಪ್ರತಿಭಟನೆ , ದೂರುಗಳು ದಾಖಲಾದ ನಂತರ ಎಚ್ಚೆತ್ತ ಸಂಸದರು ಬಳಿಕ ತನ್ನ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು .





