Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 41 ಕೋ.ರೂ.ನ ಚಿನ್ನಾಭರಣ ಕಳವು

41 ಕೋ.ರೂ.ನ ಚಿನ್ನಾಭರಣ ಕಳವು

ನ್ಯೂಯಾರ್ಕ್‌ನಲ್ಲಿ ಕಳ್ಳರಿಗೆ ಹ್ಯಾಪಿ ನ್ಯೂ ಇಯರ್!

ವಾರ್ತಾಭಾರತಿವಾರ್ತಾಭಾರತಿ3 Jan 2017 4:57 PM IST
share
41 ಕೋ.ರೂ.ನ ಚಿನ್ನಾಭರಣ ಕಳವು

ನ್ಯೂಯಾರ್ಕ್,ಜ.3: ಇಲ್ಲಿಯ ಟೈಮ್ಸ್ ಸ್ಕ್ವೇರ್‌ನಲ್ಲಿ ಹೊಸವರ್ಷವನ್ನು ಸ್ವಾಗತಿಸಲು ಸಾವಿರಾರು ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ ಮೂವರು ಕಳ್ಳರು ಮಾತ್ರ ಅಲ್ಲಿಯ ಅಂಗಡಿಯೊಂದಕ್ಕೆ ನುಗ್ಗಿ 41 ಕೋ.ರೂ.ವೌಲ್ಯದ ಚಿನ್ನಾಭರಣಗಳನ್ನು ದೋಚುವ ಮೂಲಕ ‘ಹ್ಯಾಪಿ ನ್ಯೂ ಇಯರ್ ’ಆಚರಿಸಿದ್ದಾರೆ.

ಇದೊಂದು ಯೋಜಿತ ಕೃತ್ಯವಾಗಿದ್ದು,ಒಳಗಿನವರ ಕೈವಾಡವಿರುವಂತೆ ಕಂಡು ಬರುತ್ತಿದೆ. ಶನಿವಾರ ಮಧ್ಯರಾತ್ರಿ ಹೊಸವರ್ಷ ಕಾಲಿಟ್ಟು ಸರಿಯಾಗಿ ಒಂದು ನಿಮಿಷಕ್ಕೆ ಟೈಮ್ಸ್ ಸ್ಕ್ವೇರ್‌ನ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಮೂವರು ಮುಸುಕುಧಾರಿ ಕಳ್ಳರು ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಆ ಸಂದರ್ಭ ಸುಮಾರು 20 ಲಕ್ಷ ಜನರು ಅಲ್ಲಿ ವರ್ಷಾಚರಣೆಗೆ ಸೇರಿದ್ದು, ಭದ್ರತೆಗೆ ನಿಯೋಜಿತ 7,000 ಪೊಲೀಸರು ಜನರನ್ನು ನಿಯಂತ್ರಿಸುತ್ತ ವ್ಯಸ್ತರಾಗಿರುತ್ತಾರೆ ಎಂದು ಸರಿಯಾಗಿಯೇ ಊಹಿಸಿದ್ದ ಕಳ್ಳರು ನಿರಾಯಾಸವಾಗಿ ತಮ್ಮ ಕೆಲಸವನ್ನು ಮುಗಿಸಿಕೊಂಡು ಪರಾರಿಯಾಗಿದ್ದಾರೆ.

ತನ್ನ ಅಪರೂಪದ ಹಳದಿ ಮತ್ತು ಗುಲಾಬಿ ವರ್ಣಗಳ ವಜ್ರಗಳ ಸಂಗ್ರಹಕ್ಕಾಗಿ ಖ್ಯಾತವಾಗಿರುವ ಈ ಗ್ರೆಗ್ ರುಥ್ ಚಿನ್ನಾಭರಣಗಳ ಮಳಿಗೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಮುಸುಕುಧಾರಿ ಕಳ್ಳರು ಸೆರೆಯಾಗಿದ್ದಾರೆ.

  ಕಟ್ಟಡದ ಆರನೇ ಮಹಡಿಯಲ್ಲಿರುವ ಮಳಿಗೆಗೆ ನುಗ್ಗಿದ ಕಳ್ಳರು ನಾಲ್ಕು ತಿಜೋರಿಗಳಿದ್ದ ಕೋಣೆಯ ಬೀಗವನ್ನು ಮುರಿದಿದ್ದಾರೆ. ತಿಜೋರಿಯ ಬೀಗವನ್ನು ಸಂಖ್ಯೆಗಳನ್ನು ಒತ್ತುವ ಮೂಲಕವೇ ತೆರೆಯಬಹುದಾಗಿದ್ದು, ಈ ಸಂಖ್ಯೆಗಳ ಜೋಡಣೆ ಕಳ್ಳರಿಗೆ ಚೆನ್ನಾಗಿ ತಿಳಿದಿರುವಂತಿದೆ. ಎರಡು ತಿಜೋರಿಗಳನ್ನು ಸುಲಭವಾಗಿಯೇ ತೆರೆದು 41 ಕೋ.ರೂ.ಗಳ ಚಿನ್ನಾಭರಣಗಳನ್ನು ಹೊತ್ತೊಯ್ದಿದ್ದಾರೆ. ಉಳಿದ ಎರಡು ತಿಜೋರಿಗಳ ಸುದ್ದಿಗೆ ಹೋಗಿಲ್ಲ. ಹೀಗಾಗಿ ಸುಮಾರು 70 ಲ.ಡಾ.ವೌಲ್ಯದ ಆಭರಣಗಳು ಸುರಕ್ಷಿತವಾಗಿವೆ.

ಈ ಮೂವರೂ ಫೋನ್‌ನಲ್ಲಿ ಮಾತನಾಡುತ್ತಿದ್ದ ದೃಶ್ಯ ಕ್ಯಾಮೆರಾದಲ್ಲಿ ಮೂಡಿದೆ. ಹೀಗಾಗಿ ನಾಲ್ಕನೆಯ ವ್ಯಕ್ತಿ ಈ ಕಳ್ಳತನದಲ್ಲಿ ಭಾಗಿಯಾಗಿರಬಹುದು ಮತ್ತು ಕಳ್ಳರು ಆತನ ಬಳಿ ತಿಜೋರಿಯ ಬೀಗದ ಸಂಖ್ಯೆಗಳನ್ನು ಕೇಳುತ್ತಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X