Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿರ್ಮಾಣ ಹಂತದ ಕಟ್ಟಡಗಳಿಗೆ ಮನಪಾ ದಾಳಿ :...

ನಿರ್ಮಾಣ ಹಂತದ ಕಟ್ಟಡಗಳಿಗೆ ಮನಪಾ ದಾಳಿ : 2 ಕಟ್ಟಡಗಳ ಲೈಸೆನ್ಸ್ ಅಮಾನತು

ವಾರ್ತಾಭಾರತಿವಾರ್ತಾಭಾರತಿ4 Jan 2017 7:44 PM IST
share
ನಿರ್ಮಾಣ ಹಂತದ ಕಟ್ಟಡಗಳಿಗೆ ಮನಪಾ ದಾಳಿ :   2 ಕಟ್ಟಡಗಳ ಲೈಸೆನ್ಸ್ ಅಮಾನತು

ಮಂಗಳೂರು, ಜ.4: ಸುರಕ್ಷೆ ಮತ್ತು ಶುಚಿತ್ವ ಕಾಪಾಡದ ಆರೋಪದ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸವಿತಾ ಸನಿಲ್ ನೇತೃತ್ವದ ತಂಡ ನಗರದ ನೆಲ್ಲಿಕಾಯಿ ರಸ್ತೆ ಬಳಿಯ ಖಾಸಗಿ ವಾಣಿಜ್ಯ ಸಂಕೀರ್ಣ ಹಾಗೂ ದೇರೆಬೈಲ್ ಸಮೀಪದ ಅಪಾರ್ಟ್‌ಮೆಂಟ್‌ವೊಂದಕ್ಕೆ ಬುಧವಾರ ದಾಳಿ ನಡೆಸಿ ಈ ಎರಡು ಕಟ್ಟಡಗಳ ಲೈಸೆನ್ಸ್ ಅಮಾನತುಪಡಿಸಿ ತಲಾ 15 ಸಾವಿರ ರೂ. ದಂಡ ವಿಧಿಸಿದೆ.

ಮಲೇರಿಯಾ-ಡೆಂಗ್ ಜ್ವರದ ಹಿನ್ನೆಲೆಯಲ್ಲಿ ಪಾಲಿಕೆ ಆರೋಗ್ಯ ಮತ್ತು ನಗರ ಯೋಜನಾ ಇಲಾಖೆ ಜಂಟಿ ದಾಳಿ ನಡೆಸಿ ಶುಚಿತ್ವ ಕಾಪಾಡದ ಕಟ್ಟಡಗಳ ಮಾಲಕರಿಗೆ ಬಿಸಿ ಮುಟ್ಟಿಸಿದೆ.

ಸ್ಟೇಟ್‌ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯ ನಾಲ್ಕು ಮಹಡಿಯ ಕಟ್ಟಡದಲ್ಲಿ ನೆಲ ಅಂತಸ್ತಿನಲ್ಲೇ ಕೊಚ್ಚೆ ನೀರು ನಿಂತು ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿರುವುದು ಕಂಡು ಬಂತು. ಕಟ್ಟಡ ಮಾಲಕರಿಗೆ ಐದು ಬಾರಿ ನೋಟಿಸ್ ಜಾರಿಗೊಳಿಸಿದ್ದರೂ ಶುಚಿತ್ವ ಬಗ್ಗೆ ಗಮನ ಕೊಡದ ಕಾರಣ ಕಟ್ಟಡದ ಪರವಾನಿಗೆ ಅಮಾನತು ಮಾಡುವಂತೆ ಸಹಾಯಕ ನಗರ ಯೋಜನಾಧಿಕಾರಿ ಮಂಜುನಾಥ ಸ್ವಾಮಿಗೆ ಸೂಚಿಸಿದರು.

ದೇರೆಬೈಲ್‌ನ 12 ಮಹಡಿಯ ಅಪಾರ್ಟ್‌ಮೆಂಟ್‌ನ ಮೇಲ್ತಂತಸ್ತಿನಲ್ಲಿ ನೀರು ನಿಂತು ಸೊಳ್ಳೆ ಉತ್ಪನ್ನದ ತಾಣವಾಗಿತ್ತು. ಈ ಅಪಾರ್ಟ್‌ಮೆಂಟ್‌ನಲ್ಲಿ ಯಾವುದೇ ಸುರಕ್ಷಾ ಕ್ರಮವಿಲ್ಲದೆ ಹೊರ ರಾಜ್ಯದ ಕಾರ್ಮಿಕರು 12 ಮಹಡಿ ಎತ್ತರದ ಕಟ್ಟಡಕ್ಕೆ ಪೈಂಟ್ ಬಳಿಯುವುದು ಕಂಡು ಬಂತು.

2016 ಸಾಲಿನಲ್ಲಿ ಶುಚಿತ್ವ ಪಾಲಿಸದ 152 ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಇದರಲ್ಲಿ 42 ಮಂದಿಗೆ 1.80 ಲಕ್ಷ ರೂ. ದಂಡ ವಿಧಿಸಲಾಗಿದೆ. ಇನ್ನೂ 2 ಲಕ್ಷ ರೂ. ದಂಡ ಸಂಗ್ರಹಿಸಲು ಬಾಕಿ ಉಳಿದಿದೆ ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಸನಿಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X