Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಗರಾಡಳಿತ ಸಂಸ್ಥೆಗಳಲ್ಲಿ ಇ-ಪಾವತಿಗಳಿಗೆ...

ನಗರಾಡಳಿತ ಸಂಸ್ಥೆಗಳಲ್ಲಿ ಇ-ಪಾವತಿಗಳಿಗೆ ನಗದು ರಿಯಾಯಿತಿ ನೀಡಿ : ರಾಜ್ಯಗಳಿಗೆ ಕೇಂದ್ರದ ಸಲಹೆ

ವಾರ್ತಾಭಾರತಿವಾರ್ತಾಭಾರತಿ4 Jan 2017 8:49 PM IST
share
ನಗರಾಡಳಿತ ಸಂಸ್ಥೆಗಳಲ್ಲಿ ಇ-ಪಾವತಿಗಳಿಗೆ ನಗದು ರಿಯಾಯಿತಿ ನೀಡಿ : ರಾಜ್ಯಗಳಿಗೆ ಕೇಂದ್ರದ ಸಲಹೆ

ಹೊಸದಿಲ್ಲಿ, ಜ.4: ನಗರಾಡಳಿತ ಸಂಸ್ಥೆಗಳಿಗೆ ಸಾರ್ವಜನಿಕರು ಮಾಡುವ ಇ-ಪಾವತಿಗಳಿಗೆ ಹೆಚ್ಚುವರಿ ಶುಲ್ಕಗಳನ್ನು ವಿಧಿಸದಂತೆ ನೋಡಿಕೊಳ್ಳಬೇಕೆಂದು ಕೇಂದ್ರವು ರಾಜ್ಯ ಸರಕಾರಗಳಿಗೆ ಬುಧವಾರ ಸೂಚನೆ ನೀಡಿದೆ. ವಿದ್ಯುತ್,ಟೆಲಿಫೋನ್, ನೀರು ಮತ್ತಿತರ ಸೇವಾಬಿಲ್‌ಗಳಿಗೆ ಮಾಡಲಾಗುವ ಡಿಜಿಟಲ್ ಪಾವತಿಗಳಇಗೆ ನಗದು ರಿಯಾಯಿತಿಯಂತಹ ಪ್ರೋತ್ಸಾಹಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಪರಿಶೀಲಿಸುವಂತೆಯೂ ಅದು ಸಲಹೆ ನೀಡಿದೆ.

ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ರಾಜ್ಯ ನಗರಾಭಿವೃದ್ಧಿ ಸಚಿವರುಗಳಿಗೆ ಬರೆದಿರುವ ಪತ್ರದಲ್ಲಿ, ‘‘ ರಾಜ್ಯದ ಎಲ್ಲಾ ನಗರಾಡಳಿತ ಸಂಸ್ಥೆಗಳು ತಮ್ಮ ಪಾವತಿಗಳು ಹಾಗೂ ಸ್ವೀಕೃತಿಗಳಿಗಾಗಿ ಇಲೆಕ್ಟ್ರಾನಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವಂತೆ ಅವುಗಳನ್ನು ಪ್ರೇರೇಪಿಸಬೇಕಾಗಿದೆ’’ ಎಂದು ತಿಳಿಸಿದ್ದಾರೆ.

ಜಾಗೃತಿ ಶಿಬಿರಗಳನ್ನು ಆಯೋಜಿಸುವ ಮೂಲಕ ಹಾಗೂ ಖಾತೆಗಳನ್ನು ತೆರೆಯುವ ಮೂಲಕ ನಗದುರಹಿತ ಆರ್ಥಿಕತೆಯನ್ನು ಉತ್ತೇಜಿಸುವಲ್ಲಿ ನಗರಾಡಳಿತ ಸಂಸ್ಥೆಗಳು ಅತ್ಯಂತ ಮಹತ್ವದ ಹಾಗೂ ಪ್ರೇರಣಾದಾಯಕ ಪಾತ್ರವನ್ನು ನಿರ್ವಹಿಸಬಲ್ಲದು ಎಂದು ಹೇಳಿದ್ದಾರೆ.

ವಿವಿಧ ಇ-ಪಾವತಿ ವ್ಯವಸ್ಥೆಗಳ ಮೂಲಕ ಸಾರ್ವಜನಿಕ ಸೇವೆಗಳ ಬಿಲ್‌ಗಳನ್ನು ಪಾವತಿಸುವವರಿಗೆ ಶೇ.1ರಷ್ಟು ನಗದು ಮರುಪಾವತಿಯನ್ನು ನೀಡುವಂತಹ ಉತ್ತೇಜಕ ಕ್ರಮಗಳನ್ನು ಆರಂಭಿಸುವ ಬಗ್ಗೆ ಪರಿಶೀಲಿಸುವಂತೆಯೂ ನಾಯ್ಡು ಸಲಹೆ ನೀಡಿದ್ದಾರೆ.
ತೆರಿಗೆಗಳು, ಶುಲ್ಕಗಳು, ಲೈಸೆನ್ಸ್ ಶುಲ್ಕ, ಭೋಗ್ಯ (ಲೀಸ್), ಬಾಡಿಗೆ ಸಂಗ್ರಹದಂತಹ ಆರ್ಥಿಕ ವ್ಯವಹಾರಗಳಲ್ಲಿ ಶೇ.100ರಷ್ಟು ಇ-ಪಾವತಿ ವ್ಯವಸ್ಥೆಯನ್ನು ನಗರಾಡಳಿತ ಸಂಸ್ಥೆಗಳು ಜಾರಿಗೆ ತರಬಹುದೆಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X