ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
ಮುಂಡಗೋಡ, ಜ.4: ಎರಡು ವರ್ಷದ ಮಗು ಆಟವಾಡುತ್ತಾ ನೀರಿನ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮಣಿಕಂಟ ಮಹಾಬಲೇಶ್ವರಗಿರಿ ಗೋಸಾವಿ ಮೃತಪಟ್ಟ ಬಾಲಕನಾಗಿದ್ದಾನೆ.
ಮನೆಯ ಅಂಗಳದಲ್ಲಿ ಮಗು ಆಟವಾಡುತ್ತಿದೆ ಎಂದು ತಿಳಿದಿದ್ದ ಪೋಷಕರಿಗೆ ಹೊಂಡದಲ್ಲಿ ಮಗು ಬಿದ್ದಿರುವುದು ಗಮನಕ್ಕೆ ಬಂದಿಲ್ಲ. ಗ್ರಾಮಸ್ಥರು ಪೋಷಕರ ಗಮನಕ್ಕೆ ತಂದಿದ್ದಾರೆ. ಹೊಂಡದಿಂದ ಹೊರತೆಗೆದಾಗ ಮಗುವಿನ ಉಸಿರಾಟ ನಡೆಯುತ್ತಿತ್ತು ಎಂದು ಹೇಳಲಾಗಿದ್ದು, ಶೀಘ್ರ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಾಲಕನ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ಹೇಳಲಾಗಿದೆ.
ಈ ಕುರಿತು ಮೃತನ ತಂದೆ ಆಕಸ್ಮಿಕ ಸಾವು ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ
Next Story





