Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ :...

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ : ಬಿಎಸ್‌ಪಿ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ5 Jan 2017 7:20 PM IST
share
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ : ಬಿಎಸ್‌ಪಿ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ

ಲಕ್ನೊ, ಜ.5: ಉಳಿದ ಪಕ್ಷಗಳನ್ನು ಹಿಂದಿಕ್ಕಿ , ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ತನ್ನ 100 ಮಂದಿ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಬಹುಜನ ಸಮಾಜವಾದಿ ಪಕ್ಷ(ಬಿಎಸ್‌ಪಿ) ಬಿಡುಗಡೆ ಮಾಡಿದ್ದು, ಇದರಲ್ಲಿ ಮೂರನೇ ಒಂದಂಶಕ್ಕಿಂತಲೂ ಹೆಚ್ಚಿನ ಅಭ್ಯರ್ಥಿಗಳು ಮುಸ್ಲಿಂ ಸಮುದಾಯದವರು.

 ರಾಜ್ಯದಲ್ಲಿರುವ ಮತದಾರರ ಪೈಕಿ ಸುಮಾರು ಶೇ.20ರಷ್ಟು ಮುಸ್ಲಿಂ ಮತದಾರರು ಎಂಬುದನ್ನು ಗಮನದಲ್ಲಿಟ್ಟುಕೊಂಡು ಪ್ರಥಮ ಪಟ್ಟಿಯಲ್ಲಿ ಆ ಸಮುದಾಯಕ್ಕೆ ಸೇರಿದ 36 ಮಂದಿಗೆ ಟಿಕೆಟ್ ನೀಡಲಾಗಿದೆ. ಇತರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಬಿಎಸ್‌ಪಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ರಾಜ್ಯ ವಿಧಾನಸಭೆಯ 403 ಸೀಟುಗಳಿಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ ಮತ್ತು ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪಕ್ಷದ ಅಧಿನಾಯಕಿ ಮಾಯಾವತಿ ಈಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

 ದಲಿತರಿಗೆ 87, ಮುಸ್ಲಿಮರಿಗೆ 97, ಇತರ ಹಿಂದುಳಿದ ವರ್ಗಕ್ಕೆ 106, ಬ್ರಾಹ್ಮಣರಿಗೆ 66, ಕ್ಷತ್ರಿಯರಿಗೆ 36, ಕಯಾಸ್ತಾ, ವೈಷ್ಯ ಮತ್ತು ಪಂಜಾಬಿಗಳಿಗೆ 11 ಸೀಟು - ಇದು ಬಿಎಸ್‌ಪಿ ನಿಗದಿಪಡಿಸಿರುವ ಜಾತೀವಾರು ಸೀಟಿನ ಲೆಕ್ಕಾಚಾ.

  ಮೋದಿ ಸರಕಾರ ಮುಸ್ಲಿಮರ ವಿಷಯದಲ್ಲಿ ತಾರತಮ್ಯದ ಧೋರಣೆ ತಳೆದಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ಗೆ ನೆಲೆಯಿಲ್ಲ ಮತ್ತು ಸಮಾಜವಾದಿ ಪಕ್ಷದೊಳಗೇ ಭಿನ್ನಮತ ಭುಗಿಲೆದ್ದಿರುವ ಕಾರಣ ಮುಸ್ಲಿಮರು ತಮ್ಮ ಮತವನ್ನು ಹಾಳುಮಾಡದೆ ಬಿಎಸ್‌ಪಿಗೆ ನೀಡಬೇಕು. ಹೀಗಾದರೆ ಮಾತ್ರ ಬಿಜೆಪಿಯನ್ನು ದೂರ ಉಳಿಸಲು ಸಾಧ್ಯ ಎಂದವರು ಮತದಾರರಿಗೆ ಕರೆ ನೀಡಿದ್ದಾರೆ. ಅಲ್ಪಸಂಖ್ಯಾತರು ಕನಿಷ್ಠ 125 ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಕಾರಣ ಮುಸ್ಲಿಮರ ಮತಗಳು ವಿಭಜನೆಯಾದರೆ ಅದು ಬಿಜೆಪಿಗೆ ನೆರವಾಗುತ್ತದೆ ಎಂದ ಮಾಯಾವತಿ, ಬಿಎಸ್‌ಪಿ ಜಾತ್ಯಾಧರಿತ ಪಕ್ಷ ಎಂದು ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ. ರಾಜ್ಯದಲ್ಲಿ ನಾಲ್ಕು ಬಾರಿ ಆಡಳಿತ ನಡೆಸಿದ ಬಿಎಸ್‌ಪಿ, ದಲಿತರೂ ಸೇರಿದಂತೆ ಎಲ್ಲಾ ಜಾತಿಯವರ ಅಭ್ಯುದಯಕ್ಕೆ ದುಡಿದಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X