Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಚುನಾವಣೆ ಮೇಲೆ ರಶ್ಯ ಸೈಬರ್ ದಾಳಿ...

ಅಮೆರಿಕ ಚುನಾವಣೆ ಮೇಲೆ ರಶ್ಯ ಸೈಬರ್ ದಾಳಿ ನಡೆಸಿದ್ದು ಹೌದು

ಅಮೆರಿಕದ ಗುಪ್ತಚರ ಸಂಸ್ಥೆಗಳಿಂದ ಖಚಿತ ಪುರಾವೆ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ5 Jan 2017 8:28 PM IST
share
ಅಮೆರಿಕ ಚುನಾವಣೆ ಮೇಲೆ ರಶ್ಯ ಸೈಬರ್ ದಾಳಿ ನಡೆಸಿದ್ದು ಹೌದು

ವಾಶಿಂಗ್ಟನ್, ಜ. 5: ಡೆಮಾಕ್ರಟಿಕ್ ಪಕ್ಷದ ರಾಷ್ಟ್ರೀಯ ಸಮಿತಿಯಿಂದ ಕದ್ದ ಮಾಹಿತಿಗಳನ್ನು ರಶ್ಯವು ತೃತೀಯ ಸಂಸ್ಥೆಯೊಂದರ ಮೂಲಕ ವಿಕಿಲೀಕ್ಸ್‌ಗೆ ಒದಗಿಸಿದೆ ಎನ್ನುವುದನ್ನು ಸಾಬೀತುಪಡಿಸುವ ಪುರಾವೆಗಳನ್ನು ಅಮೆರಿಕದ ಗುಪ್ತಚರ ಸಂಸ್ಥೆಗಳು ಸಂಗ್ರಹಿಸಿವೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ನವೆಂಬರ್ 8ರಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಹಿಲರಿ ಕ್ಲಿಂಟನ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನೆಲೆಸಿತ್ತು. ಹಿಲರಿ ತನ್ನ ಎದುರಾಳಿಯನ್ನು ಸೋಲಿಸಿ ಅಧ್ಯಕ್ಷ ಬರಾಕ್ ಒಬಾಮಗೆ ಉತ್ತರಾಧಿಕಾರಿಯಾಗಲಿದ್ದಾರೆ ಎಂಬುದಾಗಿ ವ್ಯಾಪಕವಾಗಿ ಭಾವಿಸಲಾಗಿತ್ತು. ಆದರೆ, ಚುನಾವಣೆಯು ಆಘಾತಕಾರಿ ಫಲಿತಾಂಶವನ್ನು ನೀಡಿದ್ದು, ಟ್ರಂಪ್ ಜಯಭೇರಿ ಭಾರಿಸಿದ್ದರು.

ಸೈಬರ್ ದಾಳಿಯ ನೇತೃತ್ವವನ್ನು ರಶ್ಯದ ಗುಪ್ತಚರ ಸಂಸ್ಥೆಗಳು ವಹಿಸಿದ್ದವು ಎಂಬ ನಿರ್ಧಾರಕ್ಕೆ ತಿಂಗಳುಗಳ ಹಿಂದೆಯೇ ಅಮೆರಿಕದ ಅಧಿಕಾರಿಗಳು ಬಂದಿದ್ದರು. ಆದರೆ, ಕದ್ದ ಮಾಹಿತಿಯ ಪ್ರಸಾರದಲ್ಲಿ ರಶ್ಯದ ಪಾತ್ರವನ್ನು ಸಾಬೀತುಪಡಿಸುವ ಪುರಾವೆಗಳು ಅವರ ಬಳಿ ಇರಲಿಲ್ಲ. ಕದ್ದ ಮಾಹಿತಿಯನ್ನು ರಶ್ಯವು ಡೆಮಾಕ್ರಟಿಕ್ ಅಭ್ಯರ್ಥಿಯ ವಿರುದ್ಧವಾಗಿ ಬಳಸಿಕೊಂಡಿತ್ತು.

ಹೆಚ್ಚುವರಿ ಗುಪ್ತಚರ ಮಾಹಿತಿ ಹೊರಬಿದ್ದ ಹೊತ್ತುಗಾರಿಕೆ ಗಮನಾರ್ಹವಾಗಿದೆ. ಯಾಕೆಂದರೆ, ಸೈಬರ್ ದಾಳಿಗೆ ಪ್ರತಿಕ್ರಿಯಿಸುವಲ್ಲಿ ಅಮೆರಿಕ ವಿಳಂಬಿಸುತ್ತಿರುವ ಬಗ್ಗೆ ಅಧ್ಯಕ್ಷ ಒಬಾಮ ತನ್ನದೇ ಪಕ್ಷದಿಂದ ಟೀಕೆಗೆ ಗುರಿಯಾಗಿದ್ದರು.

 ಪ್ರಮುಖ ರಿಪಬ್ಲಿಕನ್ನರು ಸೇರಿದಂತೆ, ಅಮೆರಿಕದ ಸೆನೆಟ್ ಮತ್ತು ಹೌಸ್ ನಾಯಕರು ಈ ವಿಷಯದ ಬಗ್ಗೆ ತನಿಖೆಯಾಗಬೇಕೆಂದು ಆಗ್ರಹಿಸಿದ್ದರು.
ರಶ್ಯದ ಸೈಬರ್ ದಾಳಿಯ ಕುರಿತ ಅಮೆರಿಕನ್ ಗುಪ್ತಚರ ಸಂಸ್ಥೆಗಳ ವರದಿಯನ್ನು ಒಬಾಮಗೆ ಗುರುವಾರ ಮತ್ತು ಟ್ರಂಪ್‌ಗೆ ಶುಕ್ರವಾರ ಸಲ್ಲಿಸಲಾಗುವುದು. ಆದರೆ, ವರದಿಯ ಅಂಶಗಳ ಬಗ್ಗೆ ಬುಧವಾರ ಭಾರೀ ಚರ್ಚೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X