Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸದ್ದಾಂ ಆಡಳಿತದಲ್ಲಿ ಇರಾಕ್‌ನಲ್ಲಿ...

ಸದ್ದಾಂ ಆಡಳಿತದಲ್ಲಿ ಇರಾಕ್‌ನಲ್ಲಿ ಇರಲಿಲ್ಲ ರಾಸಾಯನಿಕ ಅಸ್ತ್ರಗಳು: ಸಿಐಎ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ5 Jan 2017 8:46 PM IST
share
ಸದ್ದಾಂ ಆಡಳಿತದಲ್ಲಿ ಇರಾಕ್‌ನಲ್ಲಿ ಇರಲಿಲ್ಲ ರಾಸಾಯನಿಕ ಅಸ್ತ್ರಗಳು: ಸಿಐಎ ಅಧಿಕಾರಿ

ವಾಶಿಂಗ್ಟನ್, ಜ. 5: ಸಾಮೂಹಿಕ ವಿನಾಶದ ಅಸ್ತ್ರಗಳನ್ನು ಇರಾಕ್‌ನ ಮಾಜಿ ಅಧ್ಯಕ್ಷ ಸದ್ದಾಂ ಹುಸೈನ್ ಅಭಿವೃದ್ಧಿಪಡಿಸಿರಲಿಲ್ಲ ಎನ್ನುವುದು ಆಗಲೇ ಸ್ಪಷ್ಟವಾಗಿತ್ತು ಎಂಬುದಾಗಿ 2003ರಲ್ಲಿ ಸದ್ದಾಂರನ್ನು ವಿಚಾರಣೆಗೆ ಗುರಿಪಡಿಸಿದ ಮಾಜಿ ಸಿಐಎ ವಿಶ್ಲೇಷಕ ಜಾನ್ ನಿಕ್ಸನ್ ಹೇಳಿದ್ದಾರೆ.

ಇರಾಕ್ ಸಾಮೂಹಿಕ ವಿನಾಶದ ಅಸ್ತ್ರಗಳನ್ನು ಹೊಂದಿದೆ ಎಂಬ ಕಾರಣ ನೀಡಿ ಅಮೆರಿಕವು ಆ ದೇಶದ ಮೇಲೆ 2003ರಲ್ಲಿ ಯುದ್ಧ ನಡೆಸಿತ್ತು. ಆ ವರ್ಷದ ಡಿಸೆಂಬರ್‌ನಲ್ಲಿ ಗುಹೆಯೊಂದರಲ್ಲಿ ಅಡಗಿದ್ದ ಸದ್ದಾಂರನ್ನು ಅಮೆರಿಕದ ಪಡೆಗಳು ಸೆರೆಹಿಡಿದವು.

ಸದ್ದಾಂರನ್ನು ವಿಚಾರಣೆಗೆ ಗುರಿಪಡಿಸುವ ಹೊಣೆಯನ್ನು ನಿಕ್ಸನ್‌ಗೆ ವಹಿಸಲಾಗಿತ್ತು.
ಸದ್ದಾಂ ಸಾಮೂಹಿಕ ವಿನಾಶದ ಅಸ್ತ್ರಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಎನ್ನುವುದಕ್ಕೆ ಯಾವುದಾದರೂ ಪುರಾವೆ ಇದೆಯೇ ಎನ್ನುವುದನ್ನು ತಿಳಿಯಲು ಶ್ವೇತಭವನ ತುದಿಗಾಲಲ್ಲಿ ನಿಂತಿತ್ತು ಎಂದು ಅವರು ಹೇಳುತ್ತಾರೆ.

ಆದರೆ, ಸದ್ದಾಂ ಮತ್ತು ಅವರ ಸಲಹಾಕಾರರನ್ನು ವಿಚಾರಿಸಿದ ಬಳಿಕ ಹಾಗೂ ತನಿಖೆ ನಡೆಸಿದ ಬಳಿಕ, ಇರಾಕ್‌ನ ಪರಮಾಣು ಅಸ್ತ್ರ ಕಾರ್ಯಕ್ರಮವು ವರ್ಷಗಳ ಮೊದಲೇ ನಿಂತಿತ್ತು ಎಂಬ ನಿರ್ಧಾರಕ್ಕೆ ಬರಬೇಕಾಯಿತು ಎಂದು ನಿಕ್ಸನ್ ಬಿಬಿಸಿಗೆ ಹೇಳಿದರು.

ಈ ತೀರ್ಮಾನದ ಹಿನ್ನೆಲೆಯಲ್ಲಿ, ತನ್ನ ತಂಡ ತನ್ನ ಕೆಲಸದಲ್ಲಿ ವಿಫಲವಾಗಿದೆ ಎಂಬುದಾಗಿ ಅಮೆರಿಕದ ಆಡಳಿತ ಪರಿಗಣಿಸಿತು ಎಂದು ನಿಕ್ಸನ್ ನುಡಿದರು.
ಅದಕ್ಕೆ ಪ್ರತೀಕಾರವೆಂಬಂತೆ, ಆಗಿನ ಅಧ್ಯಕ್ಷ ಜಾರ್ಜ್ ಡಬ್ಲು. ಬುಶ್‌ರನ್ನು ಸಂದರ್ಶಿಸಲು ತನಗೆ 2008ರವರೆಗೂ ಅವಕಾಶ ನಿರಾಕರಿಸಲಾಯಿತು. ಈ ನಡುವೆ, 2006ರಲ್ಲಿ ಸದ್ದಾಂರನ್ನು ಗಲ್ಲಿಗೇರಿಸಲಾಗಿತ್ತು.ನಿಕ್ಸನ್ 2011ರಲ್ಲಿ ಸಿಐಎಯನ್ನು ತೊರೆದರು.


ಬುಶ್‌ರನ್ನು ವಾಸ್ತವದಿಂದ ದೂರವಿಡಲಾಗಿತ್ತು :

ಬುಶ್‌ರನ್ನು ವಾಸ್ತವದಿಂದ ದೂರವಿಡಲಾಗಿತ್ತು ಹಾಗೂ ಅವರ ಸಲಹೆಗಾರರು ‘ಕೋಲೆ ಬಸವ’ರಾಗಿದ್ದರು ಎಂದು ನಿಕ್ಸನ್ ಕೆಂಡ ಕಾರಿದರು. ‘‘ಸಿಐಎಯಲ್ಲಿರುವ ನಾವು ಹೇಳುವ ಮಾತುಗಳಿಗೆ ಬೆಲೆಯಿದೆ ಹಾಗೂ ಅಧ್ಯಕ್ಷರು ಕೇಳುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ, ನಾವು ಹೇಳುವುದಕ್ಕೆ ಏನೂ ಬೆಲೆಯಿಲ್ಲ, ರಾಜಕೀಯವು ಬೇಹುಗಾರಿಕೆಯನ್ನು ಹಿಮ್ಮೆಟ್ಟಿಸುತ್ತದೆ’’ ಎಂದರು.

ಸದ್ದಾಂ ಪತನದ ಬಳಿಕ ಇರಾಕ್‌ನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ತನಗೆ ನಾಚಿಕೆಯಾಗುತ್ತದೆ ಎಂದು ಅವರು ನುಡಿದರು.

ಇರಾಕ್ ಮೇಲೆ ಅಮೆರಿಕ ನೇತೃತ್ವದ ದಾಳಿ ನಡೆದ ಬಳಿಕ ಆ ದೇಶದಲ್ಲಿ ಏನಾಗುತ್ತದೆ ಎಂಬುದನ್ನು ಯೋಚಿಸುವ ಗೋಜಿಗೆ ಬುಶ್ ಆಡಳಿತ ಹೋಗಲಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X