Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 80ರ ವೃದ್ಧೆಗೆ ಅಮಾನುಷ ಲೈಂಗಿಕ ಕಿರುಕುಳ,...

80ರ ವೃದ್ಧೆಗೆ ಅಮಾನುಷ ಲೈಂಗಿಕ ಕಿರುಕುಳ, ಬರ್ಬರ ಹತ್ಯೆ

ಇನ್ನೊಂದು ನಿರ್ಭಯ!

ವಾರ್ತಾಭಾರತಿವಾರ್ತಾಭಾರತಿ6 Jan 2017 3:18 PM IST
share
80ರ ವೃದ್ಧೆಗೆ ಅಮಾನುಷ ಲೈಂಗಿಕ ಕಿರುಕುಳ, ಬರ್ಬರ ಹತ್ಯೆ

ಚಂಡೀಗಢ, ಜ.6: ಅಮಾನುಷ ಲೈಂಗಿಕ ದೌರ್ಜನ್ಯ ನಡೆಸಿ 80 ವರ್ಷದ ವಯೋವೃದ್ಧೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಹರ್ಯಾಣದ ಸೋನಿಪತ್ ಜಿಲ್ಲೆಯ ಬಾತ್ ಗಾಂವ್ ಹಳ್ಳಿಯಿಂದ ಬುಧವಾರ ವರದಿಯಾಗಿದೆ.

ಅಪರಿಚಿತ ದುಷ್ಕರ್ಮಿಗಳು ಸಂತ್ರಸ್ತೆಯ ಗುದದ್ವಾರದೊಳಗೆ ಟಾಯ್ಲೆಟ್ ಶುಚಿಗೊಳಿಸುವ ದ್ರವ ಹಾರ್ಪಿಕ್ ಇದರ ಪ್ಲಾಸ್ಟಿಕ್ ಬಾಟಲಿಯೊಂದನ್ನು ತುರುಕಿಸಿ ಆಕೆ ತೀವ್ರ ರಕ್ತಸ್ರಾವದಿದ ಸಾವಿಗೀಡಾಗುವಂತೆ ಮಾಡಿದ್ದಾರೆ. ಅತ್ಯಾಚಾರ ನಡೆಸಿದ ಕುರುಹುಗಳು ಸದ್ಯಕ್ಕೆ ಪತ್ತೆಯಾಗಿಲ್ಲವಾದರೂ ಲೈಂಗಿಕ ಹಲ್ಲೆ ನಡೆದಿರಬಹುದಾದ ಸಾಧ್ಯತೆಗಳನ್ನು ಪೊಲೀಸರು ಅಲ್ಲಗಳೆದಿಲ್ಲ.

ವೃದ್ಧೆಯ ಮೃತದೇಹದ ಪೋಸ್ಟ್ ಮಾರ್ಟಂ ನಡೆಸಿದ ವೈದ್ಯರು ತಾವು ಇಂತಹ ಅಮಾನುಷ ಲೈಂಗಿಕ ಕಿರುಕುಳ ಪ್ರಕರಣ ನೋಡಿಲ್ಲ ಹಾಗೂ ಇದು ತಮಗೆ ಡಿಸೆಂಬರ್ 2012ರ ನಿರ್ಭಯಾ ಪ್ರಕರಣವನ್ನು ನೆನಪಿಸುತ್ತದೆ ಎಂದಿದ್ದಾರೆ.

ವೃದ್ಧೆಯ ರಕ್ತಸಿಕ್ತ ಮೃತದೇಹ ಬುಧವಾರ ಬೆಳಗ್ಗೆ ಆಕೆಯ ಮನೆಯ ನೆಲ ಅಂತಸ್ತಿನಲ್ಲಿರುವ ಮಂಚದ ಮೇಲೆ ಪತ್ತೆಯಾಗಿತ್ತು. ಆಕೆಯನ್ನು ಸೋನಿಪತ್ ಸಿವಿಲ್ ಆಸ್ಪತ್ರೆಗೆ ಸಾಗಿಸಿದ ನಂತರವಷ್ಟೇ ಆಕೆಯ ಗುದದ್ವಾರದೊಳಗೆ ಪ್ಲಾಸಿಕ್ ಬಾಟಲಿ ತುರುಕಿಸಿರುವುದು ಪತ್ತೆಯಾಗಿತ್ತು. ಬಾಟಲಿಯನ್ನು ತುರುಕಿಸಿದ ರಭಸಕ್ಕೆ ವೃದ್ಧೆಯ ಸಣ್ಣ ಮತ್ತು ದೊಡ್ಡ ಕರುಳು ಕೂಡ ಹಾನಿಗೀಡಾಗಿತ್ತು. ಆಂತರಿಕ ರಕ್ತಸ್ರಾವದಿಂದ ಆಕೆಯ ಶ್ವಾಸಕೋಶದೊಳಗೂ ರಕ್ತ ಹರಿದು ಆಕೆ ಉಸಿರುಗಟ್ಟಿ ಸಾವಿಗೀಡಾಗಿರಬೇಕೆಂದು ಶಂಕಿಸಲಾಗಿದೆ.

ಕೊಲೆಗೀಡಾದ ವೃದ್ಧೆ ನೆಲ ಅಂತಸ್ತಿನಲ್ಲಿ ವಾಸವಾಗಿದ್ದರೆ, ಆಕೆಯ ಇಬ್ಬರು ಪುತ್ರರಲ್ಲಿ ಒಬ್ಬರು ತಮ್ಮ ಕುಟುಂಬದೊಂದಿಗೆ ಮೊದಲನೆ ಅಂತಸ್ತಿನಲ್ಲಿ ವಾಸವಾಗಿದ್ದಾರೆ. ಆಕೆಯ ಪುತ್ರ ಜೈ ಭಗವಾನ್ ಸಣ್ಣ ರೈತನಾಗಿದ್ದು, 10 ಎಕರೆ ಭೂಮಿಯನ್ನು ಲೀಸ್ ಮೇಲೆ ಪಡೆದು ಅಲ್ಲಿ ಸಾಗುವಳಿ ನಡೆಸುತ್ತಿದ್ದಾರೆ. ಈ ಕುಟುಂಬ ಹಿಂದುಳಿದ ವರ್ಗಕ್ಕೆ ಸೇರಿದೆ.

ಕೊಲೆಗಾರ ಮನೆಯೊಳಗೆ ಹೇಗೆ ಪ್ರವೇಶಿಸಿದನೆಂದು ಇನ್ನಷ್ಟೇ ತಿಳಿಯಬೇಕಿದ್ದು, ಜೈ ಭಗವಾನ್ ಅವರೇ ತಮ್ಮ ತಾಯಿ ಕೊಲೆಯಾಗಿ ಬಿದ್ದಿರುವುದನ್ನು ನೋಡಿದವರಲ್ಲಿ ಮೊದಲಿಗರಾಗಿದ್ದರು.

ಹರ್ಯಾಣದಿಂದ ಇತ್ತೀಚಿಗಿನ ವರ್ಷಗಳಲ್ಲಿ ವರದಿಯಾದ ಅಮಾನುಷ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದು ಎರಡನೆಯದಾಗಿದೆ. ಫೆಬ್ರವರಿ 1 2015ರಂದು ರೋಹ್ಟಕ್ ನಿಂದ ನಾಪತ್ತೆಯಾಗಿದ್ದ 28 ವರ್ಷದ ನೇಪಾಳಿ ಯುವತಿಯೊಬ್ಬಳ ಮೃತದೇಹ ಫೆಬ್ರವರಿ 4ರಂದು ಪತ್ತೆಯಾದಾಗ ಆಕೆಯ ಮೇಲಿನ ದೌರ್ಜನ್ಯ ಬೆಳಕಿಗೆ ಬಂದಿತ್ತು. ಆಕೆಯ ಖಾಸಗಿ ಭಾಗಗಳೊಳಗೆ ಕಾಂಡೋಂ ಮತ್ತು ಬೆತ್ತವೊಂದನ್ನುದುಷ್ಕರ್ಮಿಗಳು ತುರುಕಿಸಿ ಕೊಲೆಗೈದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X