Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಖಿಲೇಶ್ ಪರವಾಗಿ ರಕ್ತದಲ್ಲಿ ಪತ್ರ ಬರೆದ...

ಅಖಿಲೇಶ್ ಪರವಾಗಿ ರಕ್ತದಲ್ಲಿ ಪತ್ರ ಬರೆದ ಬಾಲಕಿ

ವಾರ್ತಾಭಾರತಿವಾರ್ತಾಭಾರತಿ6 Jan 2017 5:07 PM IST
share
ಅಖಿಲೇಶ್ ಪರವಾಗಿ ರಕ್ತದಲ್ಲಿ ಪತ್ರ ಬರೆದ ಬಾಲಕಿ

ಘಾಝಿಯಾಬಾದ್,ಜ.6: ಸಮಾಜವಾದಿ ಪಕ್ಷದ ಚುನಾವಣಾ ಚಿಹ್ನೆಯಾಗಿರುವ ಸೈಕಲ್‌ನ್ನು ತನ್ನ ಆದರ್ಶವಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ ಅವರಿಗೇ ನೀಡುವಂತೆ ಇಲ್ಲಿಯ 15ರ ಹರೆಯದ ಬಾಲಕಿಯೋರ್ವಳು ಚುನಾವಣಾ ಆಯೋಗಕ್ಕೆ ತನ್ನ ರಕ್ತದಲ್ಲಿ ಪತ್ರವನ್ನು ಬರೆದಿದ್ದಾಳೆ.

10ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿ ಮತ್ತು ಆಕೆಯ ತಮ್ಮ ಪತ್ರವನ್ನು ಬರೆಯಲು ಸಿರಿಂಜ್ ಬಳಸಿ ತಮ್ಮ ದೇಹದಿಂದ ರಕ್ತವನ್ನು ತೆಗೆದಿದ್ದರು ಎಂದು ಈ ಮಕ್ಕಳ ತಂದೆ ಹೇಳಿದ್ದಾರೆ. ಪತ್ರವನ್ನು ಪೋಸ್ಟ್ ಮಾಡಲು ಮಕ್ಕಳು ಯತ್ನಿಸಿದ್ದರಾದರೂ ತಂದೆ ಅದನ್ನು ತಡೆದಿದ್ದಾರೆ.

ರಾಜಕೀಯ ಘಟನೆಗಳಿಂದ ಆಕರ್ಷಿತರಾಗದಂತೆ ಮತ್ತು ತಮ್ಮ ಓದಿನ ಕಡೆ ಗಮನ ಹರಿಸುವಂತೆ ತಾನು ಮಕ್ಕಳಿಗೆ ಬುದ್ಧಿ ಹೇಳಿದ್ದೇನೆ ಎಂದವರು ತಿಳಿಸಿದರು.

ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಎಸ್‌ಪಿ ಎರಡು ಹೋಳುಗಳಾಗಿದ್ದು, ಸೈಕಲ್ ಚಿಹ್ನೆಗಾಗಿ ಅಖಿಲೇಶ್ ಮತ್ತು ಅವರ ತಂದೆ ಮುಲಾಯಂ ಸಿಂಗ್ ಯಾದವ ಅವರ ಬಣಗಳು ಕಿತ್ತಾಟ ನಡೆಸುತ್ತಿವೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ತಮಗೇ ನೀಡಬೇಕು ಎಂದು ಕೋರಿ ಇವೆರಡೂ ಬಣಗಳು ಚುನಾವಣಾ ಆಯೋಗಕ್ಕೆ ಅರ್ಜಿಗಳನ್ನು ಸಲ್ಲಿಸಿವೆ.

 ಅಖಿಲೇಶರ ‘ಸಮಾಜವಾದಿ ಲ್ಯಾಪ್‌ಟಾಪ್ ಯೋಜನೆ ’ಬಗ್ಗೆ ಓದಿದ ನಂತರ ತನ್ನ ಮಕ್ಕಳು ಅವರನ್ನು ಇಷ್ಟಪಡತೊಡಗಿದ್ದರು ಎಂದು ತಂದೆ ಹೇಳಿದರು. ಈ ಯೋಜನೆ ಯಡಿ ಉತ್ತರ ಪ್ರದೇಶದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿದೆ.

ಅವರು ಉಚಿತ ಲ್ಯಾಪ್‌ಟಾಪ್ ಬಯಸಿದ್ದರು ಮತ್ತು ಅಖಿಲೇಶ್‌ರ ಗಮನ ಸೆಳೆಯಲು ಮುಂದಾಗಿದ್ದರು. ಯಾವುದೋ ವಿಷಯದಲ್ಲಿ ಸ್ಥಳೀಯ ಅಧಿಕಾರಿಗಳ ಗಮನವನ್ನು ಸೆಳೆಯಲು ವ್ಯಕ್ತಿಯೋರ್ವ ರಕ್ತದಲ್ಲಿ ಪತ್ರವೊಂದನ್ನು ಬರೆದಿದ್ದ ಎಂಬ ಸುದ್ದಿಯನ್ನು ಓದಿದ್ದ ಮಕ್ಕಳು ತಾವೂ ಹಾಗೆ ಮಾಡಲು ನಿರ್ಧರಿಸಿದ್ದರು ಎಂದರು.

ಮಕ್ಕಳು ಅಖಿಲೇಶ್ ಮತ್ತು ಎಸ್‌ಪಿ ಚಿಹ್ನೆಯ ಕುರಿತು ಕವನಗಳನ್ನು ರಚಿಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಅವುಗಳನ್ನು ಹಾಡಿದ್ದರು. ಪಕ್ಷದ ಆಡಳಿತವನ್ನು ಅಖಿಲೇಶ್‌ಗೆ ಒಪ್ಪಿಸುವಂತೆ ಮುಲಾಯಂ ಸಿಂಗ್ ಅವರನ್ನು ಉದ್ದೇಶಿಸಿಯೂ ಪತ್ರವನ್ನು ಬರೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X