Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ಭಾರತ್ ಸ್ಕೌಟ್ಸ್ ಮತ್ತು...

ಪುತ್ತೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಮಟ್ಟದ ವಾರ್ಷಿಕ ಮೇಳ

ವಾರ್ತಾಭಾರತಿವಾರ್ತಾಭಾರತಿ6 Jan 2017 6:08 PM IST
share
ಪುತ್ತೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಮಟ್ಟದ ವಾರ್ಷಿಕ ಮೇಳ

ಪುತ್ತೂರು, ಜ.6 : ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ನಡೆಯಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಮಟ್ಟದ 2 ದಿನಗಳ ವಾರ್ಷಿಕ ಮೇಳದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು. 

ಮೇಳವನ್ನು ರೋವರ್ ಕಮೀಷನರ್ ಆಗಿರುವ ವಿವೇಕಾನಂದ ಕಾಲೇಜ್‌ನ ನಿವೃತ್ತ ಪ್ರಾಂಶುಪಾಲ ಡಾ. ಎಚ್. ಮಾಧವ ಭಟ್ ಅವರು ಉದ್ಘಾಟಿಸಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಇಂತಹ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ತಮ್ಮ ಬದುಕನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ರೆ. ವಿಜಯ ಹಾರ್ವಿನ್ ಮಾತನಾಡಿ , ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ನಡುವೆ ಮನಸು ಕಟ್ಟುವ ಕೆಲಸ ಮಾಡಲು ಪ್ರೇರಣೆಯಾಗಿದೆ. ವೈಯಕ್ತಿಕ ಬದಲಾವಣೆಯೊಂದಿಗೆ ಜಗತ್ತಿಗೆ ಮಾನವೀಯತೆಯನ್ನು ಬಿತ್ತುವ ಮನೋಸ್ಥಿತಿ ನಮ್ಮದಾಗಬೇಕಾಗಿದೆ. ಎಲ್ಲರ ಸಹಕಾರದಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಮೇಳ ಯಶಸ್ವಿಯಾಗಲಿದೆ ಎಂದರು.

ತಾಲೂಕು ನೋಡೆಲ್ ಅಧಿಕಾರಿ ಸುಂದರ ಗೌಡ ಮಾತನಾಡಿ,  ಸ್ವಚ್ಚ ಸಮೃದ್ಧ ಭಾರತ ನಿರ್ಮಿಸುವಲ್ಲಿ, ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಲ್ಲಿ, ಸಾಹಸಮಯ ಬದುಕು ಕಟ್ಟುವಲ್ಲಿ, ವ್ಯಕ್ತಿತ್ವ ವಿಕಸನಗೊಳ್ಳುವಲ್ಲಿ ಹಾಗೂ ಮಾರಕ ಪಿಡುಗುಗಳ ವಿರುದ್ದ ಚಿಂತನೆ ನಡೆಸುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಲಿದೆ ಎಂದರು.

ಲಿಟ್ಲ್ ಫ್ಲವರ್ ಶಾಲೆಯ ಮ್ಯಾನೇಜರ್ ಸಿ. ಲೊಯಲಿನ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಅರ್ಚನಾ ಪ್ರಕಾಶ್, ಬೆಥನಿ ಶಾಲಾ ಮುಖ್ಯಗುರು ಸಿ. ಅಮೆರಿಟಾ, ಶಿಕ್ಷಣ ಇಲಾಖೆಯ ಇಸಿಒ ತನುಜಾ, ಸಿಆರ್‌ಪಿ ಶಾಲಿನಿ, ಶಾಲಾ ಮುಖ್ಯಗುರು ಲಿಲ್ಲೀ ಡಿ’ಸೋಜ, ಗೈಡ್ಸ್ ಸಹಾಯಕ ಲೀಡರ್ ಟ್ರೈನರ್ ಸುನಿತಾ ಎಂ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜ್ಯಪಾಲರಿಂದ ಗೋಲ್ಡನ್ ಆ್ಯರೋ ಅವಾರ್ಡ್ ಗೌರವ ಪದಕ ಪಡೆದ ವಿವೇಕಾನಂದ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳಾದ ಸಂಹಿತಾ ಶರ್ಮ ಮತ್ತು ಚಿನ್ಮಯ್ ಕೃಷ್ಣ ಅವರನ್ನು ಗೌರವಿಸಲಾಯಿತು.
 

ಮೇಳದ ನಾಯಕಿ ಹರೀಣಾಕ್ಷಿ ಮೇಳದ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ತಾಲೂಕಿನ ವಿವಿಧ ಶಾಲೆಗಳ 600 ಸ್ಕೌಟ್ಸ್, ಗೈಡ್ಸ್, ಕಬ್ಸ್, ಬುಲ್‌ಬುಲ್, ರೋವರ್ಸ್‌ ಮತ್ತು ರೇಂಜರ್ಸ್‌ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯಾಧ್ಯಕ್ಷ ಶ್ರೀಧರ್ ರೈ ಸ್ವಾಗತಿಸಿದರು. ಕಾರ್ಯದರ್ಶಿ ವಿದ್ಯಾ ಆರ್ ಗೌರಿ ವಂದಿಸಿದರು. ಶಿಕ್ಷಣ ಬಾಲಕೃಷ್ಣ ಶೆಟ್ಟಿ ನಿರೂಪಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X