Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರವಾದಿ ಶಿಷ್ಟಾಚಾರ ಜೀವನದಲ್ಲಿ...

ಪ್ರವಾದಿ ಶಿಷ್ಟಾಚಾರ ಜೀವನದಲ್ಲಿ ಅಳವಡಿಸಿಕೊಳ್ಳಿ: ಅತರ್ ಖಾನ್

ಹೈಲ್ಯಾಂಡ್ ಇಸ್ಲಾಮಿಕ್ ಫೋರಂ ನಿಂದ ಪ್ರವಾದಿ ಸಂದೇಶ

ವಾರ್ತಾಭಾರತಿವಾರ್ತಾಭಾರತಿ6 Jan 2017 10:23 PM IST
share
ಪ್ರವಾದಿ ಶಿಷ್ಟಾಚಾರ ಜೀವನದಲ್ಲಿ ಅಳವಡಿಸಿಕೊಳ್ಳಿ: ಅತರ್ ಖಾನ್

ಮಂಗಳೂರು, ಜ.6: ಜೀವನದ ಪ್ರತಿ ಹಂತದಲ್ಲೂ ಮುಹಮ್ಮದ್ (ಸ) ಅವರ ಜೀವನ ಶಿಷ್ಟಾಚಾರವನ್ನು ಅಳವಡಿಸಿಕೊಳ್ಳುವ ಮೂಲಕ ಇತರರಿಗೆ ಸ್ಫೂರ್ತಿಯಾಗಬೇಕು ಎಂದು ಅಲ್ ಅಸ್ರ್ ಫೌಂಡೇಶನ್‌ನ ಸಿಇಓ ಅತರ್ ಖಾನ್ ಮುಸ್ಲಿಮರಿಗೆ ಕರೆ ನೀಡಿದ್ದಾರೆ.

ಅವರು ಹೈಲ್ಯಾಂಡ್ ಇಸ್ಲಾಮಿಕ್ ಫೋರಂನ ದಾವಾ ಸೆಲ್ ವತಿಯಿಂದ ನಗರದ ಪುರಭವನದಲ್ಲಿ ಇಂದು ಸಂಜೆ ನಡೆದ ‘ಪ್ರವಾದಿ ಮುಹಮ್ಮದ್ (ಸ) ಅವರ ಸಂದೇಶ’ವಿಷಯದ ಕುರಿತು ಮಾತನಾಡಿದರು.

ಕೇವಲ ಮುಸ್ಲಿಮನ ಹೆಸರಿರುವುದಕ್ಕೆ ಪರಿಪೂರ್ಣನಾಗಲು ಸಾಧ್ಯವಿಲ್ಲ. ಪವಿತ್ರ ಕುರ್‌ಆನ್‌ನ ಸಂದೇಶ ಮತ್ತು ಪ್ರವಾದಿ ಬೋಧನೆಗಳ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪರಿಪೂರ್ಣ ಮುಸ್ಲಿಮನಾಗಲು ಸಾಧ್ಯವಿದೆ. ಇದು ಇತರರಿಗೂ ಸ್ಫೂರ್ತಿಯಾಗಬಹುದು. ಪ್ರವಾದಿ ಮುಹಮ್ಮದ್ (ಸ) ಅವರ ಸನ್ನಡತೆ ಮತ್ತು ಪ್ರಾಮಾಣಿಕತೆಯೇ ಅರಬೇತರರಿಗೆ ಸ್ಫೂರ್ತಿಯಾಗಿದ್ದವು. ಪ್ರವಾದಿ (ಸ)ರ ಇಂತಹ ಸನ್ನಡತೆಗೆ ಪ್ರೇರಣೆಯಾಗಿರುವ ಧರ್ಮದ (ಇಸ್ಲಾಂ) ಬಗ್ಗೆ ತಿಳಿಯಲು ಕುತೂಹಲ ಇದ್ದವು. ಆದ್ದರಿಂದಲೇ ಅಸಂಖ್ಯಾತರ ಸಂಖ್ಯೆಯಲ್ಲಿ ಅರಬೇತರರೂ ಇಸ್ಲಾಮನ್ನು ಸ್ವೀಕರಿಸಿರುವ ನಿದರ್ಶನಗಳಿವೆ ಎಂದರು.

ಇಸ್ಲಾಮಿನ ಪರಿಪೂರ್ಣ ಜ್ಞಾನದ ಕೊರತೆ ಇಂದು ಸಮಾಜವನ್ನು ಕಾಡುತ್ತಿದೆ. ಜೀವನದ ಪ್ರತಿ ಸಮಸ್ಯೆಗೂ ಇಸ್ಲಾಮಿನಲ್ಲಿ ಪರಿಹಾರವಿದೆ. ತಮಗಿಷ್ಟದ್ದನ್ನು ಮಾತ್ರ ಸ್ವೀಕರಿಸುವುದು ಮತ್ತು ತನ್ನ ಇಷ್ಟದ ವಿರುದ್ಧವಾದುದನ್ನು ತಿರಸ್ಕಸುವುದು ಧರ್ಮವಲ್ಲ. ಧರ್ಮ ಸಮ್ಮತವಾದ ಮತ್ತು ಧರ್ಮಬಾಹಿರವಾದ ವಿಷಯಗಳಿಗೆ ಇಸ್ಲಾಂ ಪ್ರಾಧ್ಯಾನ್ಯತೆಯನ್ನು ನೀಡಿದೆ. ಆದ್ದರಿಂದ ನಮ್ಮ ದೈನಂದಿನ ನಡವಳಿಕೆಯಲ್ಲಿ ಬದಲಾವಣೆ ತರಬೇಕಾದ ಅಗತ್ಯವಿದೆ. ಕುರ್‌ಆನ್ ಮತ್ತು ಪ್ರವಾದಿಯವರ ಜೀವನ ಶಿಷ್ಟಾಚಾರ ಅಳವಡಿಸಿಕೊಂಡರೆ ಜೀವನದಲ್ಲಿ ಬದಲಾವಣೆ ತರಲು ಸಾಧ್ಯದ ಜೊತೆಗೆ ಇತರರಿಗೂ ಸ್ಫೂರ್ತಿದಾಯಕವಾಗಲಿದೆ ಎಂದರು.

ಡಿಸ್ಕವರ್ ಇಸ್ಲಾಂ ಎಜುಕೇಶನಲ್ ಟ್ರಸ್ಟ್‌ನ ಸಿಇಓ ಉಮರ್ ಶರೀಫ್ ಮಾತನಾಡಿ, ಮಾನವೀಯತೆಯ ಇನ್ನೊಂದು ಹೆಸರೇ ಇಸ್ಲಾಂ ಆಗಿದೆ. ಬದುಕಿನ ಸ್ವಾತಂತ್ರದೊಂದಿಗೆ ಮಾನವೀಯತೆಗೆ ಒತ್ತು ನೀಡುವುದು ಕೂಡ ಧರ್ಮದ ಒಂದು ಅಂಶವಾಗಿದೆ ಎಂದರು.

ಇಸ್ಲಾಮನ್ನು ಐಸಿಸ್‌ನೊಂದಿಗೆ ಮೆಲುಕು ಹಾಕುವ ಮಾಧ್ಯಮಗಳ ಧೋರಣೆಗೆ ಇದೇ ಸಂದರ್ಭದಲ್ಲಿ ಅವರು ವಿಷಾದ ವ್ಯಕ್ತಪಡಿಸಿದರು.

ಹೈಲ್ಯಾಂಡ್ ಇಸ್ಲಾಮಿಕ್ ಫೋರಂನ ಅಧ್ಯಕ್ಷ ನಾಝಿಮ್ ಎಸ್.ಎಸ್. ಅಧ್ಯಕ್ಷತೆ ವಹಿಸಿದ್ದರು. ದಾವಾ ಸೆಲ್‌ನ ಕನ್ವೀನರ್ ಮುಹಮ್ಮದ್ ಹನೀಫ್ ಪಿ.ಎಸ್., ಕತಾರ್ ಘಟಕದ ಅಧ್ಯಕ್ಷ ಮುಹಮ್ಮದ್ ಫಹೀಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X