Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಸರಾ ವಸ್ತು ಪ್ರದರ್ಶನದಲ್ಲಿ ದ.ಕ...

ದಸರಾ ವಸ್ತು ಪ್ರದರ್ಶನದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ7 Jan 2017 11:20 PM IST
share
ದಸರಾ ವಸ್ತು ಪ್ರದರ್ಶನದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಪ್ರಶಸ್ತಿ

ಮಂಗಳೂರು, ಜ.7: ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರವು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಿರುವ ದಸರಾ ವಸ್ತು ಪ್ರದರ್ಶನ-2016ರಲ್ಲಿ ದಕ್ಷಿಣ ಜಿಲ್ಲೆಯಿಂದ ಸ್ಥಾಪಿತವಾದ ಮಳಿಗೆಗೆ ಪ್ರಥಮ ಬಹುಮಾನ ಲಭಿಸಿದೆ. 

ವಸ್ತು ಪ್ರದರ್ಶನದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳು ತಮ್ಮದೇ ಆದ ಮಳಿಗೆಗಳನ್ನು ಸ್ಥಾಪಿಸಿದ್ದವು. ಈ ಮೂಲಕ ತಮ್ಮ ಜಿಲ್ಲೆಗಳ ವಿಶೇಷತೆಯನ್ನು ಸಾರುವ ಪ್ರಯತ್ನವನ್ನು ಮಾಡಿದ್ದವು. ಪ್ರತಿಯೊಂದು ಮಳಿಗೆಗಳು ಒಂದಕ್ಕಿಂತ ಇನ್ನೊಂದು ವಿಶೇಷ ಎಂಬಂತೆ ಪೈಪೋಟಿಯನ್ನು ನೀಡಿದ್ದವು.

ದಕ್ಷಿಣ ಕನ್ನಡ ಜಿಲ್ಲೆಯ ವಸ್ತುಪ್ರದರ್ಶನ ಮಳಿಗೆಯ ಪ್ರವೇಶ ದ್ವಾರದಲ್ಲಿ 16ನೆ ಶತಮಾನದ ಧೀರ ಮಹಿಳೆ ಉಳ್ಳಾಲದ ರಾಣಿ ಅಬ್ಬಕ್ಕರ ಪ್ರತಿಮೆಯೊಂದನ್ನು ಪ್ರತಿಷ್ಠಾಪಿಸಲಾಗಿತ್ತು. ಪ್ರತಿಮೆಯಲ್ಲಿ ರಾಣಿ ಅಬ್ಬಕ್ಕ ಕುದುರೆಯೇರಿ ತನ್ನ ಸೈನಿಕರ ಜೊತೆ ಶತ್ರುಗಳ ವಿರುದ್ಧ ಹೋರಾಡುವ ದೃಶ್ಯವು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿತ್ತು. ಪ್ರವೇಶ ದ್ವಾರದ ಮುಂಭಾಗ ತೆಂಗು, ಅಡಿಕೆ, ಸಿರಿ ಸಿಂಗಾರದ ದ್ವಾರದಿಂದ ಅಲಂಕರಿಸಲಾಗಿತ್ತು. ಇದಲ್ಲದೇ ದೋಣಿಯ ಮಾದರಿ ಅಳವಡಿಸಲಾಗಿತ್ತು.
   

ಮಳಿಗೆಯ ಒಳಭಾಗದಲ್ಲಿ ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ ಜಾನಪದ ಕಲೆಗಳು, ವಿವಿಧ ಯಕ್ಷಗಾನ ಪಾತ್ರಗಳು, ದೇವರಾಧನೆ, ಹುಲಿನೃತ್ಯ, ಆಟಿಕಳೆಂಜ, ಕುಡುಬಿ ಮತ್ತು ಕೊರಗ ಜನಾಂಗದ ನೃತ್ಯಗಳು, ಕಂಗೀಲು, ಸಿದ್ಧವೇಷ, ಚೆನ್ನು ನಲಿಕೆ, ಮಾದಕ ವಸ್ತುಗಳ ಸೇವನೆಯಿಂದ ರೋಗಗೃಸ್ಥನಾಗಿರುವ ಮನುಷ್ಯ, ತ್ಯಾಜ್ಯ ವಸ್ತುಗಳಿಂದ ಜನ-ಜಾನುವಾರುಗಳ ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮಗಳು ಇವುಗಳ ಸಚಿತ್ರ ವಿವರಗಳು ಜನಾಕರ್ಷಣೆಯ ಕೇಂದ್ರಬಿಂದುವಾಗಿದ್ದವು.

ದಕ್ಷಿಣ ಕನ್ನಡ ಜಿಲ್ಲೆಯ ವೈಮಾನಿಕ ಚಿತ್ರಣ, ನಗರದ ಕಾರ್ಖಾನೆಗಳ ಚಿತ್ರಗಳು, ಸಮುದ್ರ ಕಿನಾರೆಗಳು, ಗಾಳಿಪಟ ಉತ್ಸವ ಇವೆಲ್ಲವೂ ಜನರಿಗೆ ಖುಷಿಕೊಟ್ಟಿದ್ದವು. ಜಾನಪದ ಕಲೆಗಳನ್ನು ಗೆರೆಗಳಲ್ಲಿ ಸೆಳೆದಿಡುವ ವರ್ಲಿ ಪೇಟಿಂಗ್, ಬೀಡಿಕಟ್ಟುತ್ತಿರುವ ಮಹಿಳೆ, ಮೀನು ಮಾರಾಟ ಮಾಡುತ್ತಿರುವ ಗೃಹಿಣಿ, ಮಂಗಳೂರಿನ ವಿವಿಧ ಬಗೆಯ ಖಾದ್ಯಗಳು, ಮಂಗಳೂರಿಗೆ ಇರುವ ಒಂಭತ್ತು ಹೆಸರುಗಳು, ಜಿಲ್ಲೆಗೆ ಸಿಕ್ಕಿರುವ ಹಲವಾರು ಪ್ರಶಸ್ತಿಗಳ ವಿವರಗಳು, ಮಂಗಳೂರಿನ ಮೊದಲ ಪತ್ರಿಕೆ ‘ಮಂಗಳೂರ ಸಮಾಚಾರ್’ ಮಂಗಳೂರು ‘ಹಿಂದೆ ಮತ್ತು ಈಗ’ ಹೇಗಿವೆ ಎಂಬುವ ಚಿತ್ರ ವಿವರ ನೀಡಲಾಗಿದೆ.

ಸ್ವಸ್ಥ ಭಾರತ ಮಳಿಗೆಯಲ್ಲಿ ಸ್ವಚ್ಛತೆಯ ಕುರಿತಾದ ಜನಜಾಗೃತಿಗೆ ಹೆಚ್ಚು ಒತ್ತು ನೀಡಲಾಗಿತ್ತು. ತ್ಯಾಜ್ಯಗಳ ವ್ಯವಸ್ಥಿತ ನಿರ್ವಹಣೆಯ ಮಾದರಿಗಳು, ಕಸವನ್ನು ರಸ ಮಾಡುವ ಪೈಪ್ ಕಾಂಪೋಸ್ಟ್ ಮಾದರಿ, ಘನ ಮತ್ತು ದ್ರವ ತ್ಯಾಜ್ಯ ಘಟಕ, ಪ್ಲಾಸ್ಟಿಕ್ ಸೌಧ, ಬಯೋಗ್ಯಾಸ್, ನ್ಯಾಪ್ಕಿನ್ ಬರ್ನರ್ ಇತ್ಯಾದಿ ಅನೇಕ ಮಾಹಿತಿಗಳನ್ನು ಮಳಿಗೆಯಲ್ಲಿ ತಿಳಿಸಲಾಗಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X