Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕತರ್ ಟೆನಿಸ್ ಓಪನ್: ಮರ್ರೆ, ಜೊಕೊವಿಕ್...

ಕತರ್ ಟೆನಿಸ್ ಓಪನ್: ಮರ್ರೆ, ಜೊಕೊವಿಕ್ ಫೈನಲ್ ಸೆಣಸಾಟ

ವಾರ್ತಾಭಾರತಿವಾರ್ತಾಭಾರತಿ7 Jan 2017 11:53 PM IST
share
ಕತರ್ ಟೆನಿಸ್ ಓಪನ್: ಮರ್ರೆ, ಜೊಕೊವಿಕ್ ಫೈನಲ್ ಸೆಣಸಾಟ

ದೋಹಾ, ಜ.7: ವಿಶ್ವದ ಇಬ್ಬರು ಶ್ರೇಷ್ಠ ಆಟಗಾರರಾದ ಆ್ಯಂಡಿ ಮರ್ರೆ ಹಾಗೂ ನೊವಾಕ್ ಜೊಕೊವಿಕ್ ಕತರ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದ್ದಾರೆ.

ಶುಕ್ರವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್‌ನ ಮೊದಲ ಸೆಮಿ ಫೈನಲ್‌ನಲ್ಲಿ ಜೊಕೊವಿಕ್ ಅವರು ವಿಶ್ವದ ನಂ.42ನೆ ಆಟಗಾರ ಫೆರ್ನಾಂಡೊ ವೆರ್ಡಾಸ್ಕೊರನ್ನು 4-6, 7-6(9/7),6-3 ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.

 ಮತ್ತೊಂದು ಸೆಮಿಫೈನಲ್‌ನಲ್ಲಿ ಬ್ರಿಟನ್‌ನ ಆ್ಯಂಡಿ ಮರ್ರೆ ಅವರು ಥಾಮಸ್ ಬೆರ್ಡಿಕ್‌ರನ್ನು 6-3, 6-4 ನೇರ ಸೆಟ್‌ಗಳಿಂದ ಸೋಲಿಸಿದ್ದಾರೆ. ಈ ಮೂಲಕ ಸತತ 28ನೆ ಗೆಲುವು ದಾಖಲಿಸಿದ್ದಾರೆ. ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಮರ್ರೆಯ ಅಜೇಯ ಗೆಲುವಿನ ಓಟ ಆರಂಭವಾಗಿತ್ತು.

ವಿಶ್ವದ ನಂ.1 ಆಟಗಾರ ಮರ್ರೆ ಹಾಗೂ ಪ್ರತಿಸ್ಪರ್ಧಿ ಜೊಕೊವಿಕ್ ನಡುವೆ ಶನಿವಾರ ಫೈನಲ್ ಪಂದ್ಯ ನಡೆಯಲಿದೆ. ಜ.16 ರಿಂದ ಆರಂಭವಾಗಲಿರುವ ವರ್ಷದ ಮೊದಲ ಗ್ರಾನ್‌ಸ್ಲಾಮ್ ಟೂರ್ನಿಗೆ ಮೊದಲು ಈ ಟೂರ್ನಿಯು ಉಭಯ ಆಟಗಾರರಿಗೆ ಲಿಟ್ಮಸ್ ಟೆಸ್ಟ್ ಆಗಿದೆ.

‘‘ಮೊದಲ ಸೆಟ್‌ನಲ್ಲಿ ಸೋತ ಬಳಿಕ ಎರಡನೆ ಸೆಟ್‌ನಲ್ಲಿ ಟೈ-ಬ್ರೇಕ್‌ನ ಮೂಲಕ ಗೆಲುವು ಸಾಧಿಸಿದ್ದು ಸತತ ಎರಡನೆ ಬಾರಿ ದೋಹಾ ಓಪನ್‌ನ ಫೈನಲ್‌ಗೆ ತಲುಪಿದ್ದು ನನ್ನ ಪಾಲಿಗೆ ಅದೃಷ್ಟದ ಸಂಗತಿ. ಖಂಡಿತವಾಗಿಯೂ ಇದು ನಾನು ಆಡಿರುವ ಅತ್ಯಂತ ಕುತೂಹಲಭರಿತ ಪಂದ್ಯವಾಗಿತ್ತು. ಫಲಿತಾಂಶ ಏನೇ ಬಂದರೂ ನಮಗೆ ಇಂತಹ ಪಂದ್ಯಗಳ ಅಗತ್ಯವಿದೆ’’ ಎಂದು ಜೊಕೊವಿಕ್ ಹೇಳಿದ್ದಾರೆ.

ಈ ಹಿಂದಿನ ಸುತ್ತಿನಲ್ಲಿ ಜೋರಾಗಿ ಬೀಸುತ್ತಿದ್ದ ಗಾಳಿ ಹಾಗೂ ಎದುರಾಳಿಗಳ ವಿರುದ್ಧ ಪರದಾಟ ನಡೆಸಿದ್ದ ಮರ್ರೆ ಸೆಮಿ ಫೈನಲ್ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡರು. ಬೆರ್ಡಿಕ್ ವಿರುದ್ಧ ಒಂದು ಗಂಟೆಯೊಳಗೆ ಜಯ ಸಾಧಿಸಿದರು.

ಜೊಕೊವಿಕ್ ವಿರುದ್ಧದ ಪಂದ್ಯವನ್ನು ಎದುರು ನೋಡುತ್ತಿರುವೆ. ಅದೊಂದು ಶ್ರೇಷ್ಠ ಪಂದ್ಯವಾಗಿದೆ. ವಿಶ್ವಶ್ರೇಷ್ಠ ಆಟಗಾರನ ವಿರುದ್ಧ ಫೈನಲ್ ಪಂದ್ಯವನ್ನು ಆಡುವ ಮೂಲಕ ಹೊಸ ವರ್ಷ ಆರಂಭಿಸುತ್ತಿರುವುದು ಮರೆಯಲಾರದ ಕ್ಷಣ ಎಂದು ಮರ್ರೆ ಹೇಳಿದ್ದಾರೆ.

ಮರ್ರೆ ವಿರುದ್ಧ 24 ಪಂದ್ಯಗಳನ್ನು ಜಯಿಸಿರುವ ಜೊಕೊವಿಕ್ ಐತಿಹಾಸಿಕವಾಗಿ ಮೇಲುಗೈ ಹೊಂದಿದ್ದಾರೆ. ಆದರೆ, ಮರ್ರೆ ಕಳೆದ ಬಾರಿ ನವೆಂಬರ್‌ನಲ್ಲಿ ಲಂಡನ್‌ನಲ್ಲಿ ನಡೆದಿದ್ದ ಎಟಿಪಿ ವರ್ಲ್ಡ್ ಟೂರ್ ಫೈನಲ್ಸ್ ಟೂರ್ನಿಯಲ್ಲಿ ಜೊಕೊವಿಕ್‌ರನ್ನು ಮಣಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X