Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಜೆಟ್ ಮಂಡನೆಗೆ ವಿಪಕ್ಷಗಳ ವಿರೋಧ

ಬಜೆಟ್ ಮಂಡನೆಗೆ ವಿಪಕ್ಷಗಳ ವಿರೋಧ

ಕೇಂದ್ರ ಸರಕಾರದ ಪ್ರತಿಕ್ರಿಯೆ ಕೇಳಿದ ಚುನಾವಣಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ7 Jan 2017 11:58 PM IST
share

ಹೊಸದಿಲ್ಲಿ, ಜ.7: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಕೇಂದ್ರ ಸರಕಾರ ಫೆ.1ರಂದು ಮಂಡಿಸಲು ಉದ್ದೇಶಿಸಿರುವ ಬಜೆಟ್ ಬಗ್ಗೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿರುವ ಕಾರಣ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗವು ಕೇಂದ್ರ ಸರಕಾರಕ್ಕೆ ತಿಳಿಸಿದೆ. ಬಜೆಟ್ ಮಂಡನೆ ದಿನಾಂಕವನ್ನು ಫೆ.1ಕ್ಕೆ ಹಿಂದೂಡಲು ಕಾರಣವೇನು ಎಂದು ಜನವರಿ 10ರ ಒಳಗೆ ತಿಳಿಸುವಂತೆ ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ ಸಚಿವ ಸಂಪುಟದ ಕಾರ್ಯದರ್ಶಿ ಪಿ.ಕೆ.ಸಿನ್ಹಾರಿಗೆ ಪತ್ರ ಬರೆದು ತಿಳಿಸಿದ್ದು, ಅವರು ಸಂಸದೀಯ ವ್ಯವಹಾರಗಳ ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಉತ್ತರ ನೀಡುವ ನಿರೀಕ್ಷೆಯಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನದ ಅಂತಿಮ ಹಂತ ಮಾರ್ಚ್ 8ರಂದು ಕೊನೆಗೊಳ್ಳಲಿದ್ದು ಕನಿಷ್ಠ ಈ ಅವಧಿಯವರೆಗಾದರೂ ಬಜೆಟ್ ಮಂಡನೆಯನ್ನು ಮುಂದೂಡುವಂತೆ ವಿಪಕ್ಷಗಳು ಕೋರಿ ಸಲ್ಲಿಸಿದ್ದ ಪತ್ರವನ್ನು ಶುಕ್ರವಾರ ಚುನಾವಣಾ ಆಯೋಗ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಟ್ಟಿತ್ತು. ಕಾಂಗ್ರೆಸ್, ಟಿಎಂಸಿ, ಬಿಎಸ್ಪಿ, ಎಸ್ಪಿ ಮುಂತಾದ ವಿಪಕ್ಷಗಳು ಸೇರಿ ಈ ಕೋರಿಕೆ ಸಲ್ಲಿಸಿದ್ದವು. ಸಾಮಾನ್ಯವಾಗಿ ಫೆಬ್ರವರಿ ಮೂರನೆ ವಾರದಲ್ಲಿ ಆರಂಭವಾಗುವ ಬಜೆಟ್ ಅಧಿವೇಶನವನ್ನು ಬೇಗನೆ ನಡೆಸುವ ನಿರ್ಧಾರದಲ್ಲಿ ಅಸಮಂಜತೆ ಏನಿಲ್ಲ ಎಂದಿರುವ ಸರಕಾರವು ತನ್ನ ನಿರ್ಧಾರಕ್ಕೆ ಬದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. ಬಜೆಟ್ ಅಧಿವೇಶನವನ್ನು ಜನವರಿ 31ರಂದು ಆರಂಭಿಸುವಂತೆ ಮತ್ತು ಫೆ.1ರಂದು ಬಜೆಟ್ ಮಂಡಿಸುವಂತೆ ಸಂಸದೀಯ ವ್ಯವಹಾರಗಳ ಸಚಿವಾಲಯದ ಸಂಪುಟ ಸಮಿತಿಯು ಶಿಫಾರಸು ಮಾಡಿತ್ತು. ಇದರಿಂದ ಹೊಸ ಯೋಜನೆಗಳಲ್ಲಿ ಎಪ್ರಿಲ್ 1ರಿಂದ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದು ಸಮಿತಿ ತಿಳಿಸಿತ್ತು. 2012ರಲ್ಲಿ ಈ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸಂದರ್ಭ ವಿಪಕ್ಷಗಳ ಆಕ್ಷೇಪವನ್ನು ಪರಿಗಣಿಸಿದ ಕಾಂಗ್ರೆಸ್, ಬಜೆಟ್ ಮಂಡನೆಯನ್ನು ಫೆಬ್ರವರಿ 28ರಿಂದ ಮಾರ್ಚ್ 16ಕ್ಕೆ ಮುಂದೂಡಿತ್ತು. ಇದೇ ರೀತಿ, ಚುನಾವಣೆ ಮುಗಿಯುವ ವರೆಗೆ ಬಜೆಟ್ ಮಂಡಿಸಬಾರದು ಎಂಬುದು ನಮ್ಮ ಆಶಯವಾಗಿದೆ ಎಂದು ರಾಜ್ಯಸಭೆಯಲ್ಲಿ ವಿಪಕ್ಷದ ಮುಖಂಡ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಝಾದ್ ಚುನಾವಣಾ ಆಯೋಗವನ್ನು ಭೇಟಿ ಮಾಡಿದ ಬಳಿಕ ಹೇಳಿಕೆ ನೀಡಿದ್ದರು. ಫೆ.1ರಂದು ಬಜೆಟ್ ಮಂಡಿಸಲು ಅವಕಾಶ ಮಾಡಿಕೊಟ್ಟರೆ ಮತದಾರರ ಮೇಲೆ ಪ್ರಭಾವ ಬೀರಲು ಬಿಜೆಪಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಮತ್ತು ಇದರಿಂದ ಬಿಜೆಪಿಗೆ ನೆರವಾಗಲಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ. ನೋಟು ಅಮಾನ್ಯ ನಿರ್ಧಾರ ಜನರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳುತ್ತಿರುವ ವಿಪಕ್ಷಗಳು, ಫೆ.1ರಂದು ಬಜೆಟ್ ಮಂಡಿಸುವುದನ್ನು ವಿರೋಧಿಸುವುದರಲ್ಲಿ ಅರ್ಥ ಇಲ್ಲ ಎಂದು ಕೇಂದ್ರ ಅರ್ಥ ಸಚಿವ ಅರುಣ್ ಜೇಟ್ಲಿ ಕೇಂದ್ರ ಸರಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜನವರಿ 31ರಂದು ಬಜೆಟ್ ಅಧಿವೇಶನ ಆರಂಭಿಸುವ ಸರಕಾರದ ನಿರ್ಧಾರವನ್ನು ವಿರೋಧಿಸಿ 16 ವಿಪಕ್ಷಗಳು ಚುನಾವಣಾ ಆಯೋಗಕ್ಕೆ ಪತ್ರ ಬರೆದಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X