Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚು.ಆಯೋಗವು ಜ.17ಕ್ಕೆ ಮೊದಲು ನಿರ್ಧಾರ...

ಚು.ಆಯೋಗವು ಜ.17ಕ್ಕೆ ಮೊದಲು ನಿರ್ಧಾರ ಕೈಗೊಳ್ಳದಿದ್ದರೆ ಎಸ್‌ಪಿ ಚಿಹ್ನೆ ಸ್ತಂಭನ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ8 Jan 2017 7:54 PM IST
share
ಚು.ಆಯೋಗವು ಜ.17ಕ್ಕೆ ಮೊದಲು ನಿರ್ಧಾರ ಕೈಗೊಳ್ಳದಿದ್ದರೆ ಎಸ್‌ಪಿ ಚಿಹ್ನೆ ಸ್ತಂಭನ ಸಾಧ್ಯತೆ

ಹೊಸದಿಲ್ಲಿ,ಜ.8: ಅಖಿಲೇಶ್ ಮತ್ತು ಮುಲಾಯಂ ಬಣಗಳ ಪೈಕಿ ಯಾವುದು ಪಕ್ಷದಲ್ಲಿ ಬಹುಮತ ಹೊಂದಿದೆ ಎನ್ನುವುದನ್ನು ಜ.17ರ ಮೊದಲು ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸಾಧ್ಯವಾಗದಿದ್ದರೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷದ ಸೈಕಲ್ ಚಿಹ್ನೆಯು ಸ್ತಂಭನಕ್ಕೊಳಗಾಗಬಹುದು. ಕಳೆದ ವಾರ ಎಸ್‌ಪಿ ಎರಡು ಹೋಳುಗಳಾದ ಬಳಿಕ ಮುಲಾಯಂ ಸಿಂಗ್ ಯಾದವ ಮತ್ತು ಪುತ್ರ ಅಖಿಲೇಶ್ ನೇತೃತ್ವದ ಎರಡೂ ಬಣಗಳು ಪಕ್ಷ ಮತ್ತು ಚಿಹ್ನೆಯ ಮೇಲೆ ಹಕ್ಕು ಮಂಡಿಸಿ ಚುನಾವಣಾ ಆಯೋಗದ ಮೆಟ್ಟಿಲನ್ನೇರಿವೆ.

 ತಮ್ಮ ಹಕ್ಕು ಕೋರಿಕೆಗೆ ಸಮರ್ಥನೆಯಾಗಿ ಉಭಯ ಬಣಗಳು ಕೆಲವು ದಾಖಲೆಗಳನ್ನು ಸಲ್ಲಿಸಿದ್ದು, ಪಕ್ಷದ ಮೇಲೆ ನಿಯಂತ್ರಣ ಮತ್ತು ಚಿಹ್ನೆಯ ಹಕ್ಕು ಸಾಧಿಸಲು ಶಾಸಕರು ಮತ್ತು ಪದಾಧಿಕಾರಿಗಳು ಸಹಿ ಮಾಡಿರುವ ಅಫಿದವತ್‌ಗಳನ್ನು ಸೋಮವಾರದೊಳಗೆ ಸಲ್ಲಿಸುವಂತೆ ಆಯೋಗವು ಅವುಗಳಿಗೆ ಸೂಚಿಸಿದೆ. ಅರ್ಧಕ್ಕಿಂತ ಹೆಚ್ಚು ಸಂಸದರು, ಶಾಸಕರು ಮತ್ತು ಪ್ರತಿನಿಧಿಗಳ ಬೆಂಬಲವನ್ನು ಹೊಂದಿರುವ ಬಣವು 25ವರ್ಷಗಳಷ್ಟು ಹಳೆಯದಾದ ಎಸ್‌ಪಿ ಮೇಲಿನ ನಿಯಂತ್ರಣಕ್ಕಾಗಿ ಹೋರಾಟದಲ್ಲಿ ಮೇಲುಗೈ ಹೊಂದಲಿದೆ.

ಫೆ.2ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗಾಗಿ ಅಧಿಸೂಚನೆ ಜ.17ರಂದು ಹೊರಬೀಳಲಿದ್ದು, ಅದಕ್ಕೇ ಮೊದಲೇ ಆಯೋಗವು ಎಸ್‌ಪಿಯಲ್ಲಿ ಯಾವ ಬಣ ಬಹುಮತ ಹೊಂದಿದೆ ಎನ್ನುವುದನ್ನು ನಿರ್ಧರಿಸಬೇಕಾಗುತ್ತದೆ. ಅಧಿಸೂಚನೆಯ ಪ್ರಕಟಣೆಯೊಂದಿಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತದೆ. ಮುಲಾಯಂ ಮತ್ತು ಅಖಿಲೇಶ್ ಬಣಗಳು ಏಕಕಾಲದಲ್ಲಿ ಸೈಕಲ್ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಜ.17ರ ಮೊದಲೇ ಚುನಾವಣಾ ಆಯೋಗವು ನಿರ್ಧಾರವನ್ನು ಕೈಗೊಳ್ಳಬೇಕಾಗುತ್ತದೆ.

 ಒಂದು ವೇಳೆ ಎರಡೂ ಬಣಗಳು ಸಮಾನ ಸಂಖ್ಯೆಯ ಸಂಸದರು, ಶಾಸಕರು ಮತ್ತು ಪ್ರತಿನಿಧಿಗಳ ಬೆಂಬಲವನ್ನು ಪಡೆದರೆ ಮತ್ತು ಅಂತಿಮ ನಿರ್ಧಾರವನ್ನು ಕೈಗೊಳ್ಳಲು ಆಯೋಗಕ್ಕೆ ಸಾಧ್ಯವಾಗದಿದ್ದರೆ ಅದು ಮಧ್ಯಂತರ ಆದೇಶವೊಂದನ್ನು ಹೊರಡಿಸಬಹುದು. ಚಿಹ್ನೆಯನ್ನು ಸ್ತಂಭನಗೊಳಿಸುವುದು ಲಭ್ಯವಿರುವ ಇಂತಹ ಒಂದು ಪರ್ಯಾಯವಾಗಿದೆ ಎಂದು ಮೂಲವೊಂದು ತಿಳಿಸಿತು. ವಿವಾದವನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಎರಡೂ ಬಣಗಳು ಸಿದ್ಧವಿದ್ದರೆ ಆಯೋಗವು ಜ.17ಕ್ಕೆ ಮೊದಲೇ ನಿರ್ಧಾರವೊಂದನ್ನು ಕೈಗೊಳ್ಳಬಹುದು ಎಂದು ಇನ್ನೊಂದು ಮೂಲವು ತಿಳಿಸಿದೆ.

ಚುನಾವಣೆಗಳು ಸನ್ನಿಹಿತವಾದಾಗ ಮತ್ತು ಉಭಯ ಬಣಗಳು ಹೊಂದಿರುವ ಬೆಂಬಲವನ್ನು ದೃಢಪಡಿಸಿಕೊಳ್ಳಲು ಆಯೋಗಕ್ಕೆ ಸಮಯಾವಕಾಶವಿಲ್ಲದಿದ್ದಾಗ ಅದು ಹೊಸ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಆಯ್ದುಕೊಳ್ಳುವಂತೆ ಉಭಯ ಬಣಗಳಿಗೆ ಸೂಚಿಸಿ ಮಧ್ಯಂತರ ಆದೇಶವನ್ನು ಹೊರಡಿಸಬಹುದಾಗಿದೆ ಎಂದೂ ಮೂಲಗಳು ತಿಳಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X