Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ನೇತಾಗೆ ಶರಣಾದ ಸಮಾಜವಾದಿ ನೇತಾಜಿ...

ಹೊಸ ನೇತಾಗೆ ಶರಣಾದ ಸಮಾಜವಾದಿ ನೇತಾಜಿ ಹೇಳಿದ್ದೇನು ?

ಇದ್ದಕ್ಕಿದ್ದಂತೆ ಮಗನ ಬಗ್ಗೆ ಮುಲಾಯಂ ಆದ ಅಪ್ಪ

ವಾರ್ತಾಭಾರತಿವಾರ್ತಾಭಾರತಿ8 Jan 2017 9:53 PM IST
share
ಹೊಸ ನೇತಾಗೆ ಶರಣಾದ ಸಮಾಜವಾದಿ ನೇತಾಜಿ ಹೇಳಿದ್ದೇನು ?

ಹೊಸದಿಲ್ಲಿ, ಜ. 8 : ಸಮಾಜವಾದಿ ಪಕ್ಷದ ಒಳಜಗಳದಲ್ಲಿ 'ನೇತಾಜಿ' ಈಗ ಹೊಸ ನೇತಾ ಬಗ್ಗೆ ಮುಲಾಯಂ ಆದಂತೆ ಕಂಡು ಬರುತ್ತಿದೆ. ಪಕ್ಷವನ್ನು ತನ್ನ ನಿಯಂತ್ರಣಕ್ಕೆ ಪಡೆದುಕೊಂಡಿರುವ ಪುತ್ರ ಅಖಿಲೇಶ್ ಗೆ ಅವರಿಚ್ಛೆಯಂತೆ ಪಕ್ಷವನ್ನು ನಡೆಸಲು ಬಿಟ್ಟು ಬಿಡುವ ಸೂಚನೆಯನ್ನು ನಾಯಕ ಮುಲಾಯಂ ಸಿಂಗ್ ನೀಡಿದ್ದಾರೆ. ದಿಲ್ಲಿಯಲ್ಲಿ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಷಯಕ್ಕೆ ಬಂದಾಗ ಅವರು ಈ ರೀತಿ ಮಾತನಾಡಿದ್ದಾರೆ. 

ಪಕ್ಷದೊಳಗಿನ ಬೆಳವಣಿಗೆಗಳ ಕುರಿತು ಪತ್ರಕರ್ತರು ಕೇಳಿದಾಗ " ಅಖಿಲೇಶ್ ನನ್ನ ಮಗ. ಈಗ ಎಲ್ಲ ಶಾಸಕರು ಅವನ ಜೊತೆಗಿದ್ದಾರೆ. ನನ್ನ ಜೊತೆ ಇರುವುದು ಕೇವಲ ಬೆರಳೆಣಿಕೆಯ ಶಾಸಕರು. ನಾನೇನು ಅವನನ್ನು ಕೊಲ್ಲಲು ಸಾಧ್ಯವೇ (ಮಾರ್ ಥೋಡಿ ಹೀ ದೇಂಗೆ ಉಸೆ) ? ಅವನು ಏನು ಮಾಡುತ್ತಿದ್ದನೋ ಅದನ್ನು ಮಾಡಲಿ. " ಎಂದು ಮುಲಾಯಂ ಸ್ಪಷ್ಟವಾಗಿ ಹೇಳಿದ್ದಾರೆ. 

ಜಗಳ ಯಾವಾಗ ಮುಗಿಯುತ್ತದೆ ಎಂದು ಕೇಳಿದಾಗ " ಜಗಳ ಇದ್ದರೆ ತಾನೇ ಮುಗಿಯುವುದು ? ಪಕ್ಷದೊಳಗೆ ಯಾವುದೇ ಸಮಸ್ಯೆ ಇಲ್ಲ " ಎಂದು ಮುಲಾಯಂ ಹೇಳಿದ್ದಾರೆ. ಅವರು ಸೋಮವಾರ ಚುನಾವಣಾ ಆಯೋಗಕ್ಕೆ ಪಕ್ಷದ ಚಿಹ್ನೆ ವಿಷಯದಲ್ಲಿ ತಮ್ಮ ವಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕಿದೆ. 

ಅಖಿಲೇಶ್ ಈಗಾಗಲೇ ರಾಮ್ ಗೋಪಾಲ್ ಯಾದವ್ ಮೂಲಕ  ಒಂದೂವರೆ ಲಕ್ಷಕ್ಕೂ ಹೆಚ್ಚು ಪುಟಗಳ ದಾಖಲೆ ಸಲ್ಲಿಸಿದ್ದಾರೆ. ಪಕ್ಷದ 205 
ಶಾಸಕರು , 56 ವಿಧಾನ ಪರಿಷತ್ ಸದಸ್ಯರು, 15 ಸಂಸದರು ಹಾಗು ರಾಷ್ಟ್ರೀಯ ಕಾರ್ಯಕಾರಿಣಿಯ 30 ಸದಸ್ಯರು ಅಖಿಲೇಶ್ ಪರ ನಿಂತಿದ್ದಾರೆ. 
ಜನವರಿ 17 ರೊಳಗೆ ಸೈಕಲ್ ಚಿಹ್ನೆ ಯಾರಿಗೆ ಸಿಗಲಿದೆ ಎಂದು ಚುನಾವಣಾ ಆಯೋಗ ನಿರ್ಧರಿಸಬೇಕಿದೆ. ಬಳಿಕ ರಾಜ್ಯದಲ್ಲಿ ಪ್ರಥಮ ಹಂತದ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಆಗ ವಿಷಯ ಇತ್ಯರ್ಥವಾಗದಿದ್ದರೆ ಸೈಕಲ್ ಚಿಹ್ನೆ ಯಾರಿಗೂ ಸಿಗುವುದಿಲ್ಲ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X