Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿ ಒತ್ತಡಕ್ಕೆ ಮಣಿದು ನಾಯಕತ್ವ...

ಧೋನಿ ಒತ್ತಡಕ್ಕೆ ಮಣಿದು ನಾಯಕತ್ವ ತ್ಯಜಿಸಿದ್ದಾರೆ: ಆದಿತ್ಯ ವರ್ಮ

ವಾರ್ತಾಭಾರತಿವಾರ್ತಾಭಾರತಿ8 Jan 2017 11:24 PM IST
share
ಧೋನಿ ಒತ್ತಡಕ್ಕೆ ಮಣಿದು ನಾಯಕತ್ವ ತ್ಯಜಿಸಿದ್ದಾರೆ: ಆದಿತ್ಯ ವರ್ಮ

 ರಾಂಚಿ,ಜ.8: ‘‘ಮಹೇಂದ್ರ ಸಿಂಗ್ ಧೋನಿ ಏಕದಿನ ಹಾಗೂ ಟ್ವೆಂಟಿ-20 ನಾಯಕತ್ವಕ್ಕೆ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿರಲಿಲ್ಲ. ಒತ್ತಡಕ್ಕೆ ಮಣಿದು ಅವರು ಇಂತಹ ಕಠಿಣ ನಿರ್ಧಾರ ತೆಗೆದುಕೊಂಡಿದ್ದರು’’ ಎಂದು ಬಿಹಾರ ಕ್ರಿಕೆಟ್ ಸಂಸ್ಥೆ(ಬಿಸಿಎ) ಕಾರ್ಯದರ್ಶಿ ಆದಿತ್ಯ ವರ್ಮ ಆರೋಪಿಸಿದ್ದಾರೆ.

‘‘ಬಿಸಿಸಿಐ ಜೊತೆ ಕಾರ್ಯದರ್ಶಿ ಅಮಿತಾಭ್ ಚೌಧರಿ ಅವರು ಧೋನಿಗೆ ‘‘ಭವಿಷ್ಯದ ಕ್ರಿಕೆಟ್ ಯೋಜನೆ’’ಯ ಬಗ್ಗೆ ತಿಳಿಸಬೇಕೆಂದು ಒತ್ತಡ ಹಾಕಿದ ಕಾರಣ ನೊಂದ ‘ಕ್ಯಾಪ್ಟನ್ ಕೂಲ್’ ಧೋನಿ ನಾಯಕತ್ವವನ್ನು ದಿಢೀರನೆ ತ್ಯಜಿಸಲು ನಿರ್ಧರಿಸಿದ್ದರು’’ ಎಂದು ವರ್ಮ ಹೇಳಿದ್ದಾರೆ.

‘‘ಜ.4ರ ಸಂಜೆ ಚೌಧರಿ ಅವರು ಬಿಸಿಸಿಐ ಮುಖ್ಯ ಆಯ್ಕೆಗಾರ ಎಂಎಸ್‌ಕೆ ಪ್ರಸಾದ್‌ಗೆ ಫೋನ್ ಮಾಡಿದ್ದರು. ಅದೇ ದಿನ ಸಂಜೆ ನಾಗ್ಪುರದಲ್ಲಿ ಧೋನಿಯ ಮಾರ್ಗದರ್ಶನದಲ್ಲಿ ರಣಜಿ ಸೆಮಿಫೈನಲ್‌ನಲ್ಲಿ ಆಡಿದ್ದ ಜಾರ್ಖಂಡ್ ತಂಡ ಗುಜರಾತ್‌ನ ವಿರುದ್ಧ ಸೋತಿತ್ತು. ಧೋನಿ ಮಾರ್ಗದರ್ಶನದಲ್ಲಿ ಸೆಮಿಫೈನಲ್‌ನಲ್ಲಿ ಗೆಲ್ಲುವ ಹಂತದಲ್ಲಿದ್ದ ಜಾರ್ಖಂಡ್ ತಂಡ ಪಂದ್ಯದಲ್ಲಿ ಸೋತಿರುವುದಕ್ಕೆ ಚೌಧರಿ ಅಸಮಾಧಾನ ವ್ಯಕ್ತಪಡಿಸಿದ್ದರು. ಚೌಧರಿ ಮತ್ತೊಮ್ಮೆ ಪ್ರಸಾದ್‌ಗೆ ಫೋನ್ ಮಾಡಿ ಧೋನಿಯ ಕ್ರಿಕೆಟ್ ಭವಿಷ್ಯದ ಯೋಜನೆಯ ಬಗ್ಗೆ ಕೇಳುವಂತೆ ಒತ್ತಾಯಿಸಿದ್ದಾರೆ. ಇಡೀ ಎಪಿಸೋಡ್‌ನ ಬಗ್ಗೆ ಅಸಮಾಧಾನಗೊಂಡ ಧೋನಿ ತನ್ನ ರಾಜೀನಾಮೆ ಪತ್ರವನ್ನು ಕಳುಹಿಸಿಕೊಟ್ಟಿದ್ದರು’’ ಎಂದು ವರ್ಮ ಹೇಳಿದ್ದಾರೆ.

 ‘‘ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯ ಕೋರಿಕೆಯ ಹೊರತಾಗಿಯೂ ಸೆಮಿಫೈನಲ್ ಆಡಲು ಧೋನಿ ನಿರಾಕರಿಸಿದ ಬಳಿಕ ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಚೌಧರಿ ಹಾಗೂ ಧೋನಿಯ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು ಎಂದು ವರ್ಮ ಬೆಟ್ಟು ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X