Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ತುಳು ಬಾಸೆದ ಒರಿಪು ಬೊಕ್ಕ ಬುಲೆಚಿಲ್‌ಡ್...

‘ತುಳು ಬಾಸೆದ ಒರಿಪು ಬೊಕ್ಕ ಬುಲೆಚಿಲ್‌ಡ್ ಮಾಧ್ಯಮದ ಪಾಲ್’ ಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ8 Jan 2017 11:49 PM IST
share
‘ತುಳು ಬಾಸೆದ ಒರಿಪು ಬೊಕ್ಕ ಬುಲೆಚಿಲ್‌ಡ್ ಮಾಧ್ಯಮದ ಪಾಲ್’ ಗೋಷ್ಠಿ

ಸುರತ್ಕಲ್, ಜ.8: 40 ವರ್ಷಗಳಿಂದ ದೇಶದ ಶೇಖಡಾ 95.5 ಜನರ ಮಾಧ್ಯಮವಾಗಿರುವ ಆಕಾಶವಾಣಿ ಪ್ರತಿ ದಿನ 35 ಲಕ್ಷ ಜನರನ್ನು ತಲುಪುತ್ತಿದೆ. ಅಲ್ಲದೆ, ಆಕಾಶವಾಣಿ ತುಳುವಿಗೆ ಅಪಾರ ಕೊಡುಗೆಗಳನ್ನು ನೀಡಿದೆ ಎಂದು ಮಂಗಳೂರು ಆಕಾಶವಾಣಿಯ ನಿರ್ವಾಹಕ ಡಾ.ಸದಾನಂದ ಪೆರ್ಲ ಹೇಳಿದರು.

ಅವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಂಯೋಜನೆಯಲ್ಲಿ ಸುರತ್ಕಲ್ ಬಂಟರ ಸಂಘ ಮತ್ತು ಮಹಿಳಾ ವೇದಿಕೆಯ ಜಂಟಿ ಸಹಕಾರದೊಂದಿಗೆ ಸುರತ್ಕಲ್ ಬಂಟರ ಸಂಘದಲ್ಲಿ ರವಿವಾರ ನಡೆದ ‘ಕುಡ್ಲ ತುಳು ಮಿನದನ’ ಕಾರ್ಯಕ್ರಮದಲ್ಲಿನ ಆಯೋಜಿಸಲಾಗಿದ್ದ ‘ತುಳು ಬಾಸೆದ ಒರಿಪು ಬೊಕ್ಕ ಬುಲೆಚಿಲ್‌ಡ್ ಮಾಧ್ಯಮದ ಪಾಲ್’ ಎನ್ನುವ ಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಆಕಾಶವಾಣಿಯ ಡಾ.ಸದಾನಂದ ಪೆರ್ಲ ಮಾತನಾಡಿ, ತುಳು ಬಾಷೆಗೆ ಆದ್ಯತೆ ನೀಡುವ ಮೂಲಕ ದೇಶದ ಒಟ್ಟು 146 ವಿವಿಧ ಬಾಷೆಯಲ್ಲಿ ತುಳುವಿಗೂ ಮಾನ್ಯತೆಯಂತೆ ಆಕಾಶವಾಣಿ ಕಳೆದ 40 ವರ್ಷದಿಂದ ತುಳು ಬಾಷೆ-ಸಂಸ್ಕೃತಿ-ಪರಂಪರೆಯನ್ನು ಬೆಳೆಸುತ್ತಿದೆ. ಮಾಹಿತಿ, ಶಿಕ್ಷಣ ಸಾಹಿತ್ಯ, ಸಾಂಸ್ಕೃತಿಕತೆಯಿಂದ ಧ್ವನಿಯ ರೂಪದಲ್ಲಿ ಇಂಪಾಗಿಸಿದೆ ಎಂದರು.

  ತುಳು ಭಾಷೆ ಸರಳವಾದ ಭಾಷೆಯಾಗಿದ್ದು, ಅದನ್ನು ತುಳು ಲಿಪಿಯಲ್ಲಿ ಬಂಧಿಸುವ ಒತ್ತಡ ಬೇಡ. ತುಳುನಾಡಿನ ಸಿರಿ, ಕೋಟಿ ಚೆನ್ನಯ್ಯನಂತಹ ಪಾಡ್ದನ ಕಾಲದ ಸಾಹಿತ್ಯವು ಯಾವುದೇ ಬರವಣಿಗೆ ಇಲ್ಲದೆ ಪರಂಪರೆಯಂತೆ ಇಂದಿಗೂ ಪ್ರಸ್ತುತವಾಗಿದೆ. ಬರವಣಿಗೆಯನ್ನು ಕಾಣದ ಆ ಕಾಲದಲ್ಲಿನ ಲಿಪಿಯ ಮೂಲ ಹುಡುಕಾಟದ ಅಗತ್ಯವಿದೆಯೇ ತುಳು ನಾವು ನೀವು ಆಡುವ ಸುಂದರ ಭಾಷೆಯಾಗಿಯೇ ಉಳಿಯಲಿ ಎಂಟನೆ ಪರಿಚ್ಚೇದಕ್ಕೆ ಸೇರಿದಲ್ಲಿ ಇನ್ನಷ್ಟು ಗಟ್ಟಿತನ ತುಳುವಿಗೆ ಸಿಗಬಹುದು ಎಂದು ಉದಯವಾಣಿಯ ಮಂಗಳೂರು ಚೀಪ್‌ಬ್ಯೂರೋ ಮನೋಹರ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು.

  ದೃಶ್ಯ ಮಾದ್ಯಮದ ಎಂ.ಎಸ್.ಕೋಟ್ಯಾನ್ ಮಾತನಾಡಿ, ಮಂಗಳೂರಿನಲ್ಲಿ ತುಳುವಿಗೆ ವಿಶೇಷ ಚಾಲನೆ ಸಿಕ್ಕಿದ್ದು ದೃಶ್ಯ ಮಾದ್ಯಮದಿಂದ ಸಾಧ್ಯವಾಗಿದೆ ಎನ್ನುವುದಕ್ಕೆ ಮಂಗಳೂರಿನ ನಮ್ಮ ಕುಡ್ಲ, ನಮ್ಮ ಟಿವಿ, ಉಳ್ಳಾಲದ ಪೊಸಕುರಲ್ ನಂತಹ ಖಾಸಗಿ ಛಾನೆಲ್‌ಗಳು ಇಂದಿಗೂ ತುಳುವನ್ನೇ ಪಸರಿಸುತ್ತಿದೆ. ಇಲ್ಲಿನ ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಸುವಲ್ಲಿ ಸಹಕರಿಸುತ್ತಿದೆ ಎಂದು ಹೇಳಿದರು.

   ಗೋಷ್ಠಿಯ ಅಧ್ಯಕ್ಷತೆ ಮಾತನಾಡಿದ ಹಿರಿಯ ಪತ್ರಕರ್ತ ಈಶ್ವರ್ ದೈತೋಟ, ತುಳುನಾಡಿನಿಂದ ವಲಸೆ ಹೋದ ತುಳುವರು ತುಳುವನ್ನು ಅಕ್ಕಪಕ್ಕದಲ್ಲಿ ಬೆಳೆಸಲಿಲ್ಲ ಎಂಬ ಖೇಧವಿದೆ. ತುಳು ಬಾಷೆ ಬೆಳವಣಿಗೆಗೆ ಕನಿಷ್ಠ ಜಿಲ್ಲೆಯಿಂದ ರಾಜಧಾನಿಯವರೆಗೆ ಅಥವ ಹೊರಬಾಗದ ರಾಷ್ಟ್ರಮಟ್ಟದಲ್ಲಿ ಅಕಾಡೆಮಿಗಳ ಮೂಲಕ ಕಾರ್ಯಕ್ರಮಗಳನ್ನು ನೀಡುವ ಅಗತ್ಯವಿದೆ ಎಂದರು.

 ಲೋಕಯ್ಯ ಶೆಟ್ಟಿ ಸ್ವಾಗತಿಸಿದರು. ಜಯಶೀಲ ವಂದಿಸಿದರು. ನರೇಶ್‌ಕುಮಾರ್ ಸಸಿಹಿತ್ಲು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X