Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಷ್ಮಾಗೆ ಟ್ವೀಟ್ ಮಾಡಿದ ಕೂಡಲೇ ಸಮಸ್ಯೆ...

ಸುಷ್ಮಾಗೆ ಟ್ವೀಟ್ ಮಾಡಿದ ಕೂಡಲೇ ಸಮಸ್ಯೆ ಪರಿಹಾರವಲ್ಲ, ಸಮಸ್ಯೆ ಸೃಷ್ಟಿಯೂ ಆಗುತ್ತೆ !

ಹಾಗೆ ಆಗಲು ಈತ ಮಾಡಿದ ಎಡವಟ್ಟು ಏನು ?

ವಾರ್ತಾಭಾರತಿವಾರ್ತಾಭಾರತಿ9 Jan 2017 1:41 PM IST
share
ಸುಷ್ಮಾಗೆ ಟ್ವೀಟ್ ಮಾಡಿದ ಕೂಡಲೇ ಸಮಸ್ಯೆ ಪರಿಹಾರವಲ್ಲ, ಸಮಸ್ಯೆ ಸೃಷ್ಟಿಯೂ ಆಗುತ್ತೆ !

ಹೊಸದಿಲ್ಲಿ,ಜ.9 :ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸಕ್ರಿಯವಾಗಿರುವ ಸಚಿವೆಯಲ್ಲದೆ ತಮ್ಮಲ್ಲಿ ಸಹಾಯ ಕೇಳಿ ಟ್ವೀಟ್ ಮಾಡಿದವರಿಗೆ ನಿಜವಾಗಿಯೂ ಸಮಸ್ಯೆಯಿದೆಯೆಂದು ತಿಳಿದು ಬಂದರೆ ಅವರಿಗೆ ಸಹಾಯ ಮಾಡಲು ಹಿಂದೆ ಮುಂದೆ ನೋಡಿದವರಲ್ಲ.ಇದೇ ಕಾರಣದಿಂದ ಆವರು ಬಹಳಷ್ಟು ಜನಪ್ರಿಯರಾಗಿ ಬಿಟ್ಟಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಕ್ಕೀಡಾಗಿ ಎಐಐಎಂಎಸ್ ನಲ್ಲಿದ್ದಾಗಲೂ ಅವರು ಸಮಯ ಹೊಂದಿಸಿಕೊಂಡು ತಮ್ಮ ಕೈಲಾದ ಸಹಾಯ ಹಲವರಿಗೆ ಮಾಡಿದ್ದರು. ಆದರೆ ಸುಷ್ಮಾರಲ್ಲಿ ಸಹಾಯ ಯಾಚಿಸಿ ಟ್ವೀಟ್ ಮಾಡಿದ ಕೂಡಲೇ ಎಲ್ಲಾ ಸಮಸ್ಯೆಗೂ ಪರಿಹಾರ ದೊರೆಯುವುದೆಂದು ಯಾರಾದರೂ ತಿಳಿದರೆ ಅದು ತಪ್ಪಾದೀತು. ಕೆಲವೊಮ್ಮೆ ಸಹಾಯ ಯಾಚಿಸಿ ಮಾಡಿದ ಟ್ವೀಟೊಂದು ಸಮಸ್ಯೆಯನ್ನೂ ಸೃಷ್ಟಿಸಬಹುದು. ಅದಕ್ಕಿದೆ ಇಲ್ಲೊಂದು ದೃಷ್ಟಾಂತ.

ಇತ್ತೀಚೆಗೆ ಆಕೆಗೆ ಟ್ವೀಟ್ ಮಾಡಿದ್ದ ಪುಣೆಯಲ್ಲಿ ಐಟಿ ಉದ್ಯೋಗಿಯಾಗಿರುವ ಸ್ಮಿತ್ ರಾಜ್ ಎಂಬ ವ್ಯಕ್ತಿ ತನ್ನ ಪತ್ನಿ ಭಾರತೀಯ ರೈಲ್ವೆ ಉದ್ಯೋಗಿಯಾಗಿದ್ದು ಆಕೆಗೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಪೋಸ್ಟಿಂಗ್ ನೀಡಲಾಗಿದ್ದು ಒಂದು ವರ್ಷಕ್ಕೂ ಹೆಚ್ಚು ಸಮಯದ ತಮ್ಮ ವನವಾಸವನ್ನು ಅಂತ್ಯಗೊಳಿಸಬೇಕೆಂದು ಮನವಿ ಮಾಡಿದ್ದ. ಈ ಮನವಿಯನ್ನು ಓದಿದ್ದೇ ತಡ ಕೆಂಡಾಮಂಡಲವಾದ ಸುಷ್ಮಾ ಆತನಿಗೆ ಎಚ್ಚರಿಕೆ ನೀಡಿ ಟ್ವೀಟೊಂದನ್ನು ಮಾಡಿಯೇ ಬಿಟ್ಟರು. ‘‘ನೀವು ಅಥವಾ ನಿಮ್ಮ ಪತ್ನಿ ನನ್ನ ಸಚಿವಾಲಯದವರಾಗಿದ್ದಲ್ಲಿ ಹಾಗೂ ನೀವು ಇಂತಹ ವರ್ಗಾವಣೆಗೆ ಮನವಿ ಮಾಡಿದ್ದೇ ಆದಲ್ಲಿ ಇಷ್ಟರೊಳಗಾಗಿ ಸಸ್ಪೆಂಡ್ ಆರ್ಡರ್ ನಿಮ್ಮ ಕೈಸೇರುತ್ತಿತ್ತು,’’ಎಂದು ಹೇಳಿದಾಗ ಆ ಟ್ವೀಟ್ ಮಾಡಿದ ವ್ಯಕ್ತಿಯ ಜಂಘಾಬಲವೇ ಉಡುಗಿ ಹೋಗಿರಬಹುದೆಂಬುದರಲ್ಲಿ ಸಂಶಯವೇ ಇಲ್ಲ.

ಆದರೆ ನಿಜವಾಗಿಯೂ ಸಮಸ್ಯೆಯಿರುವವರು ತಮಗೆ ಟ್ವೀಟ್ ಮಾಡಿದಲ್ಲಿ ಸುಷ್ಮಾ ಅವರಿಗೆ ಸಹಾಯ ಮಾಡದೆ ಇರಲಾರರು ಎಂಬುದನ್ನು ಸಾಬೀತು ಪಡಿಸುವ ಇನ್ನೊಂದು ಘಟನೆ ಇಂದು ನಡೆದಿದೆ.

ಘಾನಾದ ದಂಪತಿಯೊಂದು ಸೆರೆಬ್ರಲ್ ಪಾಲ್ಸಿ ಸಮಸ್ಯೆಯಿಂದ ಬಳಲುತ್ತಿರುವ ತಮ್ಮ ಪುತ್ರಿಯ ಚಿಕಿತ್ಸೆಯನ್ನು ಗಮನದಲ್ಲಿರಿಸಿ ತಮ್ಮ ವೀಸಾ ಅವಧಿಯನ್ನು ಹೆಚ್ಚಿಸಬೇಕೆಂದು ಕೇಳಿದ್ದೇ ತಡ, ಸುಷ್ಮಾ ದಂಪತಿಗೆ ಥಟ್ಟೆಂದು ಸಹಾಯ ಮಾಡಿದ್ದಾರೆ.

If you or your wife were from my Ministry and such a request for transfer was made on twitter, I would have sent a suspension order by now. https://t.co/LImngQwFh6

— Sushma Swaraj (@SushmaSwaraj) January 8, 2017

@SushmaSwaraj Can u plz help us in ending our banwas in India? My wife is in Jhansi Rly employee and I work in Pune in IT. Been a year+.

— Smit Raj. (@smitraj07) January 8, 2017

Allahabad: EAM Sushma Swaraj responds to Ghana couple's tweet seeking visa extension for their daughter's cerebral palsy treatment(8.1.2017) pic.twitter.com/sh3Xh8gUvZ

— ANI UP (@ANINewsUP) January 9, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X