ಜ.12: ರೇಡಿಯೋ ಪಾಂಚಜನ್ಯ 90.8 ಲೋಕಾರ್ಪಣೆ
ಪುತ್ತೂರು, ಜ.9: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಆರಂಭಿಸಲಾದ ಸಮುದಾಯ ಬಾನುಲಿ ಕೇಂದ್ರ ‘ರೇಡಿಯೋ ಪಾಂಚಜನ್ಯ 90.8’ ಲೋಕಾರ್ಪಣೆ ಕಾರ್ಯಕ್ರಮ ಮತ್ತು ವಿವೇಕಾನಂದ ಜಯಂತಿ ಆಚರಣೆ ಜ.12ರಂದು ಕಾಲೇಜು ವಠಾರದಲ್ಲಿ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಯಂ.ಕೃಷ್ಣ ಭಟ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಕೇಂದ್ರ ವಾಣಿಜ್ಯ, ಕೈಗಾರಿಕೆ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದವರು ತಿಳಿಸಿದರು.
Next Story