Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಅಂತಿಮ...

ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಅಂತಿಮ ಕ್ಷಣದ ಕಸರತ್ತು : ರಾಹುಲ್ ನಿರ್ಧಾರಕ್ಕೆ ಕಾಯುತ್ತಿದೆ ಪಂಜಾಬ್ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ10 Jan 2017 7:21 PM IST
share
ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಅಂತಿಮ ಕ್ಷಣದ ಕಸರತ್ತು : ರಾಹುಲ್ ನಿರ್ಧಾರಕ್ಕೆ ಕಾಯುತ್ತಿದೆ ಪಂಜಾಬ್ ಕಾಂಗ್ರೆಸ್

ಅಮೃತಸರ, ಜ.10: ವಿದೇಶದಲ್ಲಿ ರಜೆ ಮುಗಿಸಿ ವಾಪಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಂದು ಪಂಜಾಬ್ ಕಾಂಗ್ರೆಸ್ ಮುಖಂಡರ ಜೊತೆ ಸಭೆ ನಡೆಸಲಿದ್ದು ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ. ವಿಧಾನಸಭೆಯ 117 ಸ್ಥಾನಗಳ ಪೈಕಿ 40 ಸ್ಥಾನಗಳ ಅಭ್ಯರ್ಥಿಗಳ ಆಯ್ಕೆ ಈಗ ಪಕ್ಷಕ್ಕೆ ಕಗ್ಗಂಟಾಗಿ ಪರಿಣಮಿಸಿದೆ.

ಈಗಾಗಲೇ ಬಿಜೆಪಿ ತೊರೆದಿರುವ ನವಜೋತ್ ಸಿಂಗ್ ಸಿದ್ದು ಅವರ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಿದ್ದವಾಗಿರುವಂತೆಯೇ, ಇವರು ವಿಧಿಸಿರುವ ಕೆಲವು ಷರತ್ತುಗಳು ಪಕ್ಷದ ಅಭ್ಯರ್ಥಿಗಳ ಬಿಡುಗಡೆಗೆ ಬಹುದೊಡ್ಡ ತೊಡಕಾಗಿದೆ ಎನ್ನಲಾಗುತ್ತಿದೆ. ತನ್ನೊಂದಿಗೆ, ಈಗಾಗಲೇ ಕಾಂಗ್ರೆಸ್ ಸೇರಿರುವ ಪತ್ನಿ ನವಜೋತ್ ಕೌರ್‌ಗೆ ಮತ್ತು ಕನಿಷ್ಟ ಐವರು ಸಹವರ್ತಿಗಳಿಗೆ ಟಿಕೆಟ್ ಸಿಗಬೇಕೆಂಬುದು ಸಿದ್ದು ಇರಾದೆಯಾಗಿದೆ ಎನ್ನಲಾಗುತ್ತಿದೆ. ಈ ಹಿಂದೆ ತಾನು ಬಿಜೆಪಿ ಸದಸ್ಯನಾಗಿ ಪ್ರತಿನಿಧಿಸಿ, ಬಳಿಕ ರಾಜೀನಾಮೆ ನೀಡಿದ್ದ ಅಮೃತಸರ ಲೋಕಸಭಾ ಸ್ಥಾನಕ್ಕೆ ಚುನಾವಣೆ ನಡೆಯುವಾಗ ತನಗೇ ಅಲ್ಲಿ ಟಿಕೆಟ್ ಸಿಗಬೇಕು ಎಂಬುದು ಸಿದ್ದು ಅವರ ಇನ್ನೊಂದು ಷರತ್ತಾಗಿದೆ.

ಇದು ಕಾಂಗ್ರೆಸ್‌ಗೆ ಉಸಿರು ಕಟ್ಟಿಸುವ ಷರತ್ತಾಗಿದೆ. ಈಗಾಗಲೇ ಈ 40 ಸ್ಥಾನಗಳಿಗೆ ಕನಿಷ್ಠ 80 ಮಂದಿ ಆಕಾಂಕ್ಷಿಗಳಿದ್ದಾರೆ. ಈ ಪಟ್ಟಿಗೆ ಹೊಸತಾಗಿ ಐವರು ಸಿದ್ದು ಬೆಂಬಲಿಗರ ಹೆಸರು ಸೇರಿಕೊಂಡರೆ ಮತ್ತಷ್ಟು ಇಕ್ಕಟ್ಟಿನ ಸ್ಥಿತಿ ನಿರ್ಮಾಣವಾಗಲಿದೆ. ಟಿಕೆಟ್ ಸಿಗದೆ ನಿರಾಶೆಗೊಳಗಾದವರು ಬಂಡಾಯವಾಗಿ ಸ್ಫರ್ಧಿಸುವ ಸಾಧ್ಯತೆಯನ್ನೂ ತಳ್ಳಿಹಾಕಲಾಗದು.

ಆರಂಭದಲ್ಲಿ 18 ಟಿಕೆಟ್ ಸಿಗಬೇಕೆಂದು ಒತ್ತಾಯಿಸಿದ್ದ ಸಿದ್ದುಗೆ ಅಮೃತಸರ ಪೂರ್ವ ವಿಧಾನಸಭೆ ಸ್ಥಾನಕ್ಕೆ ಟಿಕೇಟು, ಮತ್ತು ಪಕ್ಷ ಗೆದ್ದರೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಭರವಸೆ ದೊರಕಿತ್ತು ಮತ್ತು ಇದಕ್ಕವರು ಒಪ್ಪಿದ್ದರು ಎನ್ನಲಾಗಿದೆ. ಆದರೆ ಈಗ ಅವರು ಇನ್ನಷ್ಟು ನಿರೀಕ್ಷೆಯಲ್ಲಿದ್ದಾರೆ. ಆಪ್ ಪಕ್ಷವೂ ಕೂಡಾ ಉಪಮುಖ್ಯಮಂತ್ರಿ ಹುದ್ದೆಯ ಕೊಡುಗೆ ನೀಡಿತ್ತು. ಅದನ್ನು ತಳ್ಳಿಹಾಕಿ ಕಾಂಗ್ರೆಸ್‌ನತ್ತ ಬರುತ್ತಿದ್ದೇವೆ. ಆದ್ದರಿಂದ ಇನ್ನಷ್ಟು ‘ಕೊಡುಗೆ’ ಸಿಗಬೇಕು ಎನ್ನುವುದು ಸಿದ್ದು ಮತ್ತವರ ಬೆಂಬಲಿಗರ ವಾದವಾಗಿದೆ. ಕಳೆದ ವರ್ಷದ ಜುಲೈಯಲ್ಲಿ ಬಿಜೆಪಿ ತೊರೆದಿದ್ದ ಸಿದ್ದು ಆ ಬಳಿಕ ತನ್ನ ಮುಂದಿನ ರಾಜಕೀಯ ನೆಲೆಗಾಗಿ ಆಪ್ ಮತ್ತು ಕಾಂಗ್ರೆಸ್ ಪಕ್ಷದೊಡನೆ ಚೌಕಾಷಿ ಮಾಡುತ್ತಲೇ ಬಂದಿದ್ದಾರೆ. ಪಂಜಾಬಿನಲ್ಲಿ ಚುನಾವಣೆ ಸಿದ್ಧತೆಯಲ್ಲಿ ಕಾಂಗ್ರೆಸ್‌ಗಿಂತ ಸಾಕಷ್ಟು ಮುಂದಿರುವ ಬಿಜೆಪಿ ಮತ್ತು ಆಪ್ ಪಕ್ಷ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿಯಾಗಿದೆ. ಕಾಂಗ್ರೆಸ ಪಕ್ಷ ಸೋಮವಾರವಷ್ಟೇ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಫೆ.4ರಂದು ಪಂಜಾಬಿನಲ್ಲಿ ಚುನಾವಣೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X