Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬೆನ್ನು ಹುರಿ ಹಾನಿಯಾಗಿ ವೀಲ್ ಚೇರ್...

ಬೆನ್ನು ಹುರಿ ಹಾನಿಯಾಗಿ ವೀಲ್ ಚೇರ್ ಪಾಲಾದವನು ಈಗ ಕ್ಯಾಟ್ ಟಾಪರ್ !

ಸಾಧಿಸಲು ನಿಮಗಿರುವ ಅಡ್ಡಿ ಏನು ?

ವಾರ್ತಾಭಾರತಿವಾರ್ತಾಭಾರತಿ11 Jan 2017 4:22 PM IST
share
ಬೆನ್ನು ಹುರಿ ಹಾನಿಯಾಗಿ ವೀಲ್ ಚೇರ್ ಪಾಲಾದವನು ಈಗ ಕ್ಯಾಟ್ ಟಾಪರ್  !

ಬ್ಯುಸಿನೆಸ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಬರೆಯುವ ಕ್ಯಾಟ್ (ಕಾಮನ್ ಅಡ್ಮಿಶನ್ ಟೆಸ್ಟ್) ಪರೀಕ್ಷೆಯನ್ನು ಶೇ. 99.97 ಅಂಕಗಳ ಮೂಲಕ ದೇಶದಲ್ಲೇ ಮೊದಲ ಸ್ಥಾನ ಪಡೆದು ಪಾಸ್ ಮಾಡಿರುವ ಸಿಮರ್ ಪ್ರೀತ್ ಸಿಂಗ್ ದೈಹಿಕ ಊನತೆಯು ಸಾಧನೆಗೆ ತಡೆಯೊಡ್ಡುವುದಿಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. 22 ವರ್ಷದ ಈ ಯುವಕ 2015 ಆಗಸ್ಟ್ ನಲ್ಲಿ ಆದ ಅಪಘಾತದಲ್ಲಿ ಸೊಂಟದ ಕೆಳಗೆ ಸ್ವಾಧೀನ ಕಳೆದುಕೊಂಡಿದ್ದಾರೆ.

ಈಗ ಗುರುಗಾಂವ್ ನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಸಿಮರ್ ಪ್ರೀತ್, ಚಂಡೀಗಢದ ಸೈಂಟ್ ಜಾನ್ಸ್ ಹೈಸ್ಕೂಲ್ ನಲ್ಲಿ ಮತ್ತು ನಂತರ ಡೂನ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಪಿಳನಿಯ ಬಿರ್ಲಾ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಸೈನ್ಸ್ ಕಾಲೇಜಿನಿಂದ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

“2015 ಆಗಸ್ಟ್ ನಲ್ಲಿ ನನ್ನ ಮಗ ಚಂಡೀಗಢದಿಂದ ವಾಪಾಸಾಗುತ್ತಿದ್ದಾಗ ಅಪಘಾತವಾಗಿ ಬೆನ್ನುಹುರಿ ನಾಶವಾಗಿ ಸೊಂಟದ ಕೆಳಗೆ ಸ್ವಾದೀನವಿಲ್ಲ. ಅಂದಿನಿಂದ ವೀಲ್ ಚೇರ್ ಮೇಲೆಯೇ ಕಾಲ ಕಳೆಯುತ್ತಿದ್ದಾನೆ. ಈ ಎಲ್ಲಾ ಸಮಸ್ಯೆಗಳ ಹೊರತಾಗಿಯೂ ಯಾವುದೇ ಕೋಚಿಂಗ್ ಕೂಡ ತೆಗೆದುಕೊಳ್ಳದೆ ಮೊದಲ ರ್ಯಾಂಕ್ ಬಂದಿದ್ದಾನೆ” ಎಂದು ತಂದೆ ಪುಷ್ಟಿಂದರ್ ಸಿಂಗ್ ಖುಷಿಪಡುತ್ತಿದ್ದಾರೆ.

“ನನಗೆ ಬೆಂಗಳೂರು ಮತ್ತು ಅಹ್ಮದಾಬಾದ್ ನಿಂದ ಕರೆ ಬಂದಿದೆ. ನಾನು ಅಹ್ಮದಾಬಾದ್ ನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಗೆ ಹೋಗಲು ಬಯಸಿದ್ದೇನೆ. ನನ್ನ ಕ್ಷೇತ್ರದಲ್ಲಿ ಅತ್ಯುತ್ತಮ ವ್ಯಕ್ತಿಯಾಗಲು ಬಯಸಿರುವೆ” ಎನ್ನುತ್ತಾರೆ ಸಿಮರ್ ಪ್ರೀತ್.

ಗುರುಗ್ರಾಮ್ ನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಬ್ಬ ಇಂಜಿನಿಯರ್ ಪೀಯೂಶ್ ಮಿತ್ತಲ್ ಶೇ. 99.96 ಅಂಕಗಳನ್ನು ಪಡೆದಿದ್ದಾರೆ. ಏಳು ಮಂದಿ ಪುರುಷರು ಶೇ. 99 ಮೇಲೆ ಅಂಕಗಳನ್ನು ಪಡೆದು ಟಾಪ್ ಸ್ಥಾನಗಳನ್ನು ಪಡೆದಿದ್ದಾರೆ. ಟಾಪ್ ಮೂರರೊಳಗೆ ಒಬ್ಬ ಮಹಿಳೆಯೂ ಇದ್ದಾರೆ.

ಪ್ರೀತಿಕಾ ಸಚದೇವ ಶೇ.99.62 ಅಂಕಗಳನ್ನು ಪಡೆದಿದ್ದಾರೆ. ಉಳಿದಂತೆ, ಅಂಚಿತ್ ಸಿಂಗ್ಲಾ (ಶೇ.99.34), ರಿಶವ್ ಶರ್ಮಾ (ಶೇ.99.7), ಅರ್ನವ್ ಬನ್ಸಾಲ್ (ಶೇ.99.15) ಮತ್ತು ಸಾರಾಂಶ್ ಸಕ್ಸೇನ (ಶೇ.99.87) ಮುಖ್ಯವಾಗಿ ಶೇ. 99ರ ಮೇಲೆ ಅಂಕಗಳನ್ನು ಪಡೆದಿದ್ದಾರೆ.

ಚಂಡೀಗಢದವರೇ ಆಗಿರುವ ಪ್ರನ್ಶು ಬಾತ್ರಾ ಶೇ. 99.48 ರಷ್ಟು ಅಂಕಗಳನ್ನು ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X