Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯಮಿ ಉಮೇಶ್ ಶೆಟ್ಟಿ ಕೊಲೆ ಪ್ರಕರಣದ...

ಉದ್ಯಮಿ ಉಮೇಶ್ ಶೆಟ್ಟಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ

ಮುಲ್ಕಿ ಹಾಗೂ ಮೂಡುಬಿದಿರೆ ಪೊಲೀಸರ ಜಂಟಿ ಕಾರ್ಯಚರಣೆ

ವಾರ್ತಾಭಾರತಿವಾರ್ತಾಭಾರತಿ11 Jan 2017 5:06 PM IST
share
ಉದ್ಯಮಿ ಉಮೇಶ್ ಶೆಟ್ಟಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ

ಮಂಗಳೂರು, ಜ.11: ಮುಲ್ಕಿ ಠಾಣಾ ವ್ಯಾಪ್ತಿಯ ಕೆಲೆಂಜೂರು ಗ್ರಾಮ ನಿವಾಸಿ ಹಾಗೂ ಪ್ರಭಾವತಿ ಟ್ರಾನ್ಸ್ಪೋರ್ಟ್ ಮಾಲಕ ಉಮೇಶ್ ಶೆಟ್ಟಿ(30) ಕೊಲೆ ಪ್ರಕರಣದ ಆರೋಪಿಗಳನ್ನು ಮುಲ್ಕಿ ಹಾಗೂ ಮೂಡುಬಿದಿರೆ ಪೊಲೀಸರು ಜಂಟಿ ಕಾರ್ಯಚರಣೆಯಲ್ಲಿ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಂಧಿತರನ್ನು ನಡುಗೋಡು ಗ್ರಾಮದ ಕೊಡೆತ್ತೂರಿನ ಪ್ರಸಾದ್ ಆಚಾರ್ಯ (27), ನಿಡ್ಡೋಡಿ ಗ್ರಾಮದ ನಿವಾಸಿಗಳಾದ ರಾಜೇಶ ಶೆಟ್ಟಿ (32) ಮತ್ತು ತಿಲಕ ಪೂಜಾರಿ (26), ಮೂಡಿಗೆರೆ ತಾಲೂಕಿನ ಪ್ರಕಾಶ್ (28) ಎಂದು ಗುರುತಿಸಲಾಗಿದೆ.

 ಕುಳಾಯಿಯಲ್ಲಿರುವ ಪ್ರಭಾವತಿ ಟ್ರಾನ್ಸ್‌ಪೋರ್ಟ್‌ನಲ್ಲಿ ಕೆಲಸ ಮುಗಿಸಿ ಡಿ.28ರಂದು ಸಂಜೆ ತಾನು ದಿನ ನಿತ್ಯ ತೆರಳುತ್ತಿದ್ದ ಸರ್ವಾಣಿ ಬಸ್ಸಿನಲ್ಲಿ ಉಮೇಶ್ ಶೆಟ್ಟಿ ತನ್ನ ಮನೆಯಾದ ಕೆಲೆಂಜೂರುಗೆ ಮರಳದೆ ಕಾಣೆಯಾಗಿದ್ದರು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜ.1ರಂದು ಕಲ್ಲಮುಂಡ್ಕೂರು ಗ್ರಾಮದ ನಿಡ್ಡೋಡಿ ದಡ್ಡು ಎಂಬಲ್ಲಿನ ಹಾಡಿಯಲ್ಲಿ ಉಮೇಶ್ ಶೆಟ್ಟಿಯ ಮೃತದೇಹ ಕಂಡು ಬಂದಿತ್ತು. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತಿತ್ತು. ಅದರಂತೆ ಮುಲ್ಕಿ ಮತ್ತು ಮೂಡುಬಿದಿರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿಡ್ಡೋಡಿ ಬಳಿ ಜ.10ರಂದು ನಾಲ್ವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರು.

ತಾನು ಉಮೇಶ್ ಶೆಟ್ಟಿಯಿಂದ ಪಡೆದ ಹಣವನ್ನು ಹಿಂತಿರುಗಿಸುವ ಬದಲು ಲಪಟಾಯಿಸುವ ಉದ್ದೇಶದಿಂದ ಕಲ್ಲಿನ ಕೋರೆ ತೋರಿಸುವ ನೆಪದಲ್ಲಿ ಪಕ್ಷಿಕೆರೆಯಲ್ಲಿ ಬಸ್ಸಿನಿಂದ ಇಳಿಸಿ ಕಾರಿನಲ್ಲಿ ಕರೆದೊಯ್ದು ಕುದ್ರಿ ಪದವು ಬಳಿ ಇತರರ ಜೊತೆ ಸೇರಿಕೊಂಡು ಕೊಲೆ ಮಾಡಿ ಬಿಸಾಡಿರುವುದಾಗಿ ಪ್ರಸಾದ್ ಆಚಾರ್ಯ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.

ಪತ್ತೆ ಕಾರ್ಯಾಚರಣೆಯಲ್ಲಿ ಉತ್ತರ ಉಪವಿಭಾಗದ ಸಹಾಯಕ ಆಯುಕ್ತ ರಾಜೇಂದ್ರ ಡಿ.ಎಸ್., ಮುಲ್ಕಿ ಠಾಣಾ ನಿರೀಕ್ಷಕ ಅನಂತ ಪದ್ಮನಾಭ, ಮೂಡುಬಿದಿರೆ ಠಾಣಾ ನಿರೀಕ್ಷಕ ರಾಮಚಂದ್ರ ನಾಯಕ್, ಎಸ್ಸೈಗಳಾದ ದೇಜಪ್ಪ, ಮಾರುತಿ, ಎಚ್‌ಸಿಗಳಾದ ಚಂದ್ರಶೇಖರ್, ಧರ್ಮೇಂದ್ರ , ಸಿಬ್ಬಂದಿ ರಾಜೇಶ, ಆಣ್ಣಪ್ಪ, ಸುಧೀರ್, ಬಸವರಾಜ್, ಅಕಿಲ್, ಸುಜನ್, ಶಿವಕುಮಾರ್ ಭಾಗವಹಿಸಿದ್ದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಕೆ.ಎಂ. ಶಾಂತರಾಜು, ಡಾ. ಸಂಜೀವ ಎಂ. ಪಾಟೀಲ್, ಎಸಿಪಿ ರಾಜೇಂದ್ರ ಡಿ.ಎಸ್. ಉಪಸ್ಥಿತರಿದ್ದರು.

ಪ್ರಮುಖ ಆರೋಪಿ ಪ್ರಸಾದ್ ಆಚಾರ್ಯ, ರಾಜೇಶ್ ಶೆಟ್ಟಿ, ತಿಲಕ ಪೂಜಾರಿಯು ಎಂಆರ್‌ಪಿಎಲ್, ಎಂಸಿಎಫ್‌ನಲ್ಲಿ ಕ್ರೇನ್ ಅಪರೇಟರ್ ಮತ್ತು ರಿಪೇರಿ ಮಾಡುವ ಕೆಲಸ ಮಾಡುತ್ತಿದ್ದರೆ, ಮೂಡಿಗೆರೆಯ ಪ್ರಕಾಶ್ ಮರದ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X