Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳ್ತಂಗಡಿ : ದರ್ಗಾ ವೀಕ್ಷಣೆಗೆ ಬಂದಿದ್ದ...

ಬೆಳ್ತಂಗಡಿ : ದರ್ಗಾ ವೀಕ್ಷಣೆಗೆ ಬಂದಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ವಾರ್ತಾಭಾರತಿವಾರ್ತಾಭಾರತಿ11 Jan 2017 5:21 PM IST
share
ಬೆಳ್ತಂಗಡಿ : ದರ್ಗಾ ವೀಕ್ಷಣೆಗೆ ಬಂದಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ಬೆಳ್ತಂಗಡಿ, ಜ.11 : ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿ ಒಬ್ಬರು ಅಪಾಯದಿಂದ ಪಾರಾದ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಬಳಿ ಬೆಳ್ತಂಗಡಿ ನದಿಯಲ್ಲಿ ಬುಧವಾರ ಅಪರಾಹ್ನ ನಡೆದಿದೆ. 

ಮೃತಪಟ್ಟವರು ಉಡುಪಿ ಜಿಲ್ಲೆಯ ಫಕೀರನಕಟ್ಟೆ ನಿವಾಸಿಗಳಾದ ರಹೀಮ್(30), ಇತನ ಪತ್ನಿ ರುಬೀನಾ(25), ರುಬಿನಾಳ ತಂಗಿ ಯಾಸಿನ್ (23) ತಮ್ಮ ಸುಬಾನ್ (15) ಎಂಬವರಾಗಿದ್ದು ಅಪಾಯದಿಂದ ಪಾರಾದವರು ರುಬಿನಾರ ತಾಯಿ ಮೈಮುನಾ(55) ಎಂಬವರಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಕಾಜೂರು ದರ್ಗಾಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ಪ್ರಸಿದ್ದ  ಪ್ರವಾಸೀ ತಾಣ ನಡ ಗ್ರಾಮದ ಗಡಾಯಿಕಲ್ಲು(ಜಮಲಾಬಾದ್ ಕೋಟೆ) ಹಾಗೂ ಇಲ್ಲಿನ ದರ್ಗಾ ವೀಕ್ಷಿಸಿ ನಂತರ ಅದರ ಬಳಿ ಇರುವ ಬೆಳ್ತಂಗಡಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದರು.  ನಡ ಗ್ರಾಮದ ಮಂಜೊಟ್ಟಿಯಿಂದ ಜಮಲಾಬಾದ್ ಕೋಟೆಗೆ ಸಂಪರ್ಕಿಸುವ ರಸ್ತೆ ಮಧ್ಯದಲ್ಲೆ ಸೇತುವೆ ಇದ್ದು , ಅಲ್ಲಿ ಕಾರು ನಿಲ್ಲಿಸಿ ಬೆಳ್ತಂಗಡಿ ನದಿಯಲ್ಲಿನ ನೀರಿನ ಗುಂಡಿಗೆ ಸ್ನಾನ ಮಾಡಲು ಇಳಿದಿದ್ದಾರೆ.

ಇದೇ ವೇಳೆ ಮಧ್ಯಾಹ್ನ ಸುಮಾರು 2ಗಂಟೆಯ ವೇಳೆಗೆ ಸಾರ್ವಜನಿಕರು ಇವರನ್ನು ನೋಡಿದ್ದು ನಂತರ ಸ್ವಲ್ಪ ಸಮಯದ ಬಳಿಕ ಸಮೀಪ ಇರುವ ತೋಟದಲ್ಲಿ ನೀರು ಹಾಕುತ್ತಿದ್ದ ಸ್ಥಳೀಯರಿಗೆ ಬೊಬ್ಬೆ ಹಾಕುವುದನ್ನು ಕೇಳಿದ್ದು ತಕ್ಷಣವೇ ಸ್ಥಳಕ್ಕೆ ಧಾವಿಸಿ ಬಂದು ನೋಡಿದಾಗ ಮಹಿಳೆಯೋರ್ವಳು ಮುಳುಗುತ್ತಿರುವ ದೃಶ್ಯ ಕಂಡುಬಂದಿದ್ದು ,  ಕೂಡಲೇ ಸ್ಥಳೀಯರಿಗೆ ಮಾಹಿತಿ ನೀಡಿ ಸಾರ್ವಜನಿಕಿರು ಸ್ಥಳಕ್ಕೆ ಬಂದಿದ್ದು ಈಕೆಯನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ .   ತಕ್ಷಣ ಇವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಕುಳಿತಿದ್ದ ಇವರದ್ದೇ ಕುಟುಂಬದ ಸದಸ್ಯೆ ಸಾಹಿನಾ  ಇವರು ನೀಡಿದ ಮಾಹಿತಿಯಂತೆ ಇನ್ನುಳಿದ ನಾಲ್ವರು  ನೀರಿನೊಳಗಿದ್ದಾರೆ ಎಂಬ ವಿಚಾರ ತಿಳಿದು ಸ್ಥಳೀಯರು ಮುಳುಗು ತಜ್ಞರ ನೆರವಿನೊಂದಿಗೆ ನೀರಿನಲ್ಲಿ ಹುಡುಕಾಡಿದ್ದು ನಾಲ್ವರ ಮೃತದೇಹಗಳು ನದಿಯಲ್ಲಿ  ಪತ್ತೆಯಾಗಿದೆ.

ಸಣ್ಣ ಮಕ್ಕಳಿದ್ದ ಕಾರಣದಿಂದಾಗಿ ಮೈಮುನಾಳ ಕಿರಿಯ ಮಗಳು ಸಾಹಿನಾ ಮತ್ತು ರುಬಿನಾಳ ಒಂದು ವರ್ಷದ ಮಗು, ಮಕ್ಕಳಾದ ಸೈಮ್ (4) ಮತ್ತು ಸುಹೈಲ್(3) ಅವರು ಕಾರಿನಲ್ಲಿಯೇ ಕುಳಿತಿದ್ದರು . ತನ್ನ ಕುಟುಂಬದವರು ನೀರಿನಲ್ಲಿ ಮುಳುಗಿದ ವಿಚಾರ ಇವರಿಗೆ ಮೊದಲು ತಿಳಿದೇ ಇರಲಿಲ್ಲ . ಕಾರಿನಲ್ಲಿಯೇ ಕುಳಿತ ಕಾರಣ ಇವರು ಬದುಕಿ ಉಳಿದಂತಾಗಿದೆ.

ನದಿಯಲ್ಲಿ ಈ ಪ್ರದೇಶದಲ್ಲಿ ಆಳವಿರುವ ಗುಂಡಿಯಿದೆ . ಇದರ ಅರಿವಿಲ್ಲದೆ ಈಜು ಬಾರದ ಇವರು ಇಲ್ಲಿ ಸ್ನಾನಕ್ಕೆ ಇಳಿದಿದ್ದರು. ನೀರಿನಲ್ಲಿ ಆಟವಾಡುತ್ತಾ ಸುಬಾನ್ ಹೇಚ್ಚು ನೀರಿರುವ ಕಡೆಗೆ ಹೋಗಿದ್ದು ನೀರಿನ ಸೆಳೆತಕ್ಕೆ ಸಿಲುಕಿದ್ದಾನೆ. ಇದನ್ನು ಗಮನಿಸಿದ ಇತರರು ಆತನನ್ನು ಬದುಕಿಸಲು ಮುಂದಾಗಿದ್ದಾರೆ . ಈ ಸಂದರ್ಭ ಇವರು ಒಬ್ಬೊಬ್ಬರಾಗಿ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ .  ಇವರು ಯಾರಿಗೂ ಸರಿಯಾಗಿ ಈಜು ಬಾರದಿದ್ದ ಕಾರಣದಿಂದಾಗಿ ನೀರು ಹೆಚ್ಚು ಆಳವಿರದಿದ್ದರೂ ,   ಎಲ್ಲರೂ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಮೃತ ಪಟ್ಟಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಎಸ್.ಐ.ರವಿ, ತಹಶೀಲ್ದಾರರು ತಿಪ್ಪೇ ಸ್ವಾಮೀ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X