Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಿಂಗಳ ಬಳಿಕ ಬೆಳಕಿಗೆ ಬಂದ ಕೊಲೆ ಪ್ರಕರಣ...

ತಿಂಗಳ ಬಳಿಕ ಬೆಳಕಿಗೆ ಬಂದ ಕೊಲೆ ಪ್ರಕರಣ : 8 ಆರೋಪಿಗಳ ಬಂಧನ

ಸಂತೋಷ್ ನಾಯಕ್ ನನ್ನು ಚಿತ್ರಹಿಂಸೆ ನೀಡಿ ಕೊಲೆಗೈದರು

ವಾರ್ತಾಭಾರತಿವಾರ್ತಾಭಾರತಿ11 Jan 2017 7:08 PM IST
share
ತಿಂಗಳ ಬಳಿಕ ಬೆಳಕಿಗೆ ಬಂದ ಕೊಲೆ ಪ್ರಕರಣ : 8 ಆರೋಪಿಗಳ ಬಂಧನ

ಉಡುಪಿ, ಜ.11:  ಪರ್ಕಳದ ಸಣ್ಣಕ್ಕಿಬೆಟ್ಟುವಿನ ಸಂತೋಷ್ ನಾಯಕ್ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ ಈ ವಿಷಯ ತಿಳಿಸಿದರು.

ಬಂಧಿತರನ್ನು ಯರ್ಲಪಾಡಿಯ ಪ್ರಸಾದ್(23), ಮಂಗಳೂರು ಕೃಷ್ಣಾಪುರ ನಿವಾಸಿ ದಯಾನಂದ(37), ಉಡುಪಿಯ ವಿಲ್ಫ್ರೇಡ್ ಅರ್ಥರ್ ಯಾನೆ ವಿನ್ನು(40), ಹಿರಿಯಡ್ಕದ ಜಯಂತ್ ಪೈ(55), ಪೆರ್ಣಂಕಿಲದ ಕೃಷ್ಣ(33), ರಮೇಶ್(35), ಮರ್ಣೆಯ ಮಹೇಶ್ ಆಚಾರಿ(23), ಕೊಡಿಬೆಟ್ಟುವಿನ ಪ್ರಕಾಶ್ ಮೂಲ್ಯ(29) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ನಿತ್ಯಾನಂದ ನಾಯಕ್ ತಲೆಮರೆಸಿಕೊಂಡಿದ್ದಾರೆ.

ಡಿ.2ರಂದು ಸಂತೋಷ್ ನಾಯಕ್ ನಾಪತ್ತೆಯಾಗಿದ್ದು, ಅವರನ್ನು ಕೊಲೆಯಾಗಿದ್ದ ರೌಡಿ ವರ್ವಾಡಿ ಪ್ರವೀಣ್ ಕುಲಾಲ್ ಇತರರೊಂದಿಗೆ ಸೇರಿ ಕೊಲೆ ಮಾಡಿ ಶವವನ್ನು ನಾಶ ಮಾಡಿರುವುದಾಗಿ ಸಂತೋಷ್‌ರ ಪತ್ನಿ ಸುಮಿತ್ರಾ ಜ.4ರಂದು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿತ್ರಹಿಂಸೆ ನೀಡಿ ಕೊಲೆ:

5-6ವರ್ಷಗಳ ಹಿಂದೆ ನಿತ್ಯಾನಂದ ನಾಯಕ್, ಜಯಂತ್ ಪೈ ಮತ್ತು ವಿಲ್ಪ್ರೆಡ್ ಅರ್ಥರ್ ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿದ್ದ ಸಂತೋಷ್ ನಾಯಕ್ ಹಣವನ್ನು ವಾಪಾಸ್ಸು ಕೊಡದೆ ಸತಾಯಿಸುತ್ತಿದ್ದ. ನಿತ್ಯಾನಂದ ಅವರಿಂದ 40ಲಕ್ಷ ರೂ. ಮತ್ತು ಪೈಯವರಿಂದ 70ಲಕ್ಷ ರೂ. ಪಡೆದುಕೊಂಡಿದ್ದ. ಹಣ ವಾಪಾಸ್ಸು ಕೊಡದ ಬಗ್ಗೆ ಬೇಸತ್ತಿದ್ದ ಈ ಮೂವರು ಹಣವನ್ನು ವಸೂಲು ಮಾಡಿ ಕೊಡುವಂತೆ ವರ್ವಾಡಿ ಪ್ರವೀಣ್ ಕುಲಾಲ್‌ನಿಗೆ ತಿಳಿಸಿದ್ದರು.

 ಅದರಂತೆ ಪ್ರವೀಣ್ ಕುಲಾಲ್ ಡಿ.2ರಂದು ಬೆಳಗ್ಗೆ ಸಂತೋಷ ನಾಯಕ್ ನನ್ನು ಕುದಿಯಲ್ಲಿರುವ ಆತನ ಹೆಂಡತಿ ಮನೆಯಿಂದ ಅಪಹರಣ ಮಾಡಿ ವರ್ವಾಡಿಗೆ ಕರೆದುಕೊಂಡು ಬಂದು, ಅಲ್ಲಿ ತನ್ನ ಸಹಚರರೊಂದಿಗೆ ಸೇರಿ ಸಂತೋಷ್‌ಗೆ ಹಿಂಸೆ ನೀಡಿ ಹಣ ಎಲ್ಲಿ ಇದೆ ಎಂಬುದಾಗಿ ಬಾಯಿ ಬಿಡಿಸಲು ಪ್ರಯತ್ನಿಸಿದ್ದನು. ಅಲ್ಲದೆ ಸ್ಥಳಕ್ಕೆ ನಿತ್ಯಾನಂದ, ಜಯಂತ್ ಪೈ, ವಿನ್ನು ಅವರನ್ನು ಕರೆಯಿಸಿ ಅವರ ಮುಂದೆಯೂ ಸಂತೋಷ್‌ಗೆ ಹೊಡೆದು ಬಾಯಿ ಬಿಡಿಸಲು ಪ್ರಯತ್ನಿಸಿದ್ದನು. ಇವರ ಚಿತ್ರಹಿಂಸೆಗೆ ಸಂತೋಷ್ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದನು.
   
 ಅದೇ ದಿನ ರಾತ್ರಿ ಸಣ್ಣಕ್ಕಿಬೆಟ್ಟಿನಲ್ಲಿರುವ ಸಂತೋಷ್ ನಾಯಕ್ ಮನೆಗೆ ಬಂದ ಪ್ರವೀಣ್ ಕುಲಾಲ್ ಹಾಗೂ ಆತನ ಸಹಚರರು ಮನೆಯ ಬಾಗಿಲು ಒಡೆದು ಒಳನುಗ್ಗಿ ಮನೆಯ ಕಪಾಟುಗಳನ್ನು ಒಡೆದು ಹಣವನ್ನು ಹುಡುಕಿದ್ದರು. ನಂತರ ಮನೆಯ ಮುಂದಿರುವ ದೇವರ ಗುಡಿಯ ಪೀಠವನ್ನು ಅಗೆದು ತಪಾಸಣೆ ನಡೆಸಿದ್ದರು.

ಆದರೆ ಅವರಿಗೆ ಯಾವುದೇ ಹಣ ಸಿಕ್ಕಿರಲಿಲ್ಲ. ಬಳಿಕ ಮನೆಯಲ್ಲಿದ್ದ ಸಂತೋಷ್ ನಾಯಕ್‌ನ ಪತ್ನಿ ಸುಮಿತ್ರಾ, ತಾಯಿ ರತ್ನಾವತಿ ನಾಯಕ್, ತಮ್ಮ ವಿದ್ಯಾಧರ, ತಮ್ಮನ ಹೆಂಡತಿ ಶೋಭ ಮತ್ತು ಮಕ್ಕಳನ್ನು ಹೆದರಿಸಿ ಬಲಾತ್ಕಾರವಾಗಿ ಕಾರಿನಲ್ಲಿ ವರ್ವಾಡಿಗೆ ಕರೆದುಕೊಂಡು ಹೋಗಿ ಅವರಿಂದಲು ಹಣವಿರುವ ಬಗ್ಗೆ ಬಾಯಿ ಬಿಡಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಅವರೂ ಕೂಡ ಬಾಯಿ ಬಿಡಲಿಲ್ಲ. ಅದಕ್ಕೆ ಅವರಲ್ಲಿರುವ ಕರಿಮಣಿ ಸರ, ಉಂಗುರ, ಮಕ್ಕಳ ಕಾಲು ಚೈನ್ ಕಿತ್ತುಕೊಂಡು ವಾಪಾಸು ಎಲ್ಲರನ್ನು ಸಣ್ಣಕ್ಕಿಬೆಟ್ಟುವಿಗೆ ಬಿಟ್ಟು ಹೋಗಿದ್ದಾರೆ.

ಶವವನ್ನು ಬಾವಿಯಲ್ಲಿ ಹೂತರು:

ಅಲ್ಲಿಂದ ರಾತ್ರಿಯೇ ಮೃತದೇಹ ಇರುವ ವರ್ವಾಡಿಗೆ ಬಂದ ಇವರು ಮೃತದೇಹದ ಕಾಲುಗಳನ್ನು ಕತ್ತರಿಸಿ ಗೋಣಿಚೀಲಕ್ಕೆ ತುಂಬಿ ಮೃತದೇಹವನ್ನು ಪರ್ಣಂಕಿಲ ಕಾಡಿನಲ್ಲಿರುವ 7-8 ಅಡಿ ಆಳದ ಒಂದು ಪಾಳು ಬಾವಿಯಲ್ಲಿ ಹೂತು ಹಾಕಿದರು.

ಪೊಲೀಸರನ್ನು ಹಾದಿ ತಪ್ಪಿಸುವ ನಿಟ್ಟಿನಲ್ಲಿ ಆರೋಪಿಗಳು ಅಲ್ಲೇ ಸಮೀಪ ಕರುವೊಂದನ್ನು ಸುಟ್ಟಿ ಹಾಕಿ, ಎಲುಬು ಬೂದಿಯನ್ನು ಅಲ್ಲೇ ಬಿಟ್ಟು ಹೋಗಿದ್ದರು. ಇಲ್ಲಿರುವ ಮೂಳೆ ಮನುಷ್ಯರದ್ದಲ್ಲ ಎಂಬುದು ಡಿಎನ್‌ಎ ಪರೀಕ್ಷೆ ಯಿಂದ ಸಾಬೀತಾದರೆ ಇಡೀ ಪ್ರಕರಣ ಮುಚ್ಚಿ ಹೋಗಬಹುದೆಂಬುದು ಆರೋಪಿಗಳ ಲೆಕ್ಕಾಚಾರವಾಗಿತ್ತು.

ಕೃತ್ಯಕ್ಕೆ ಬಳಸಿದ ಕಾರು, ಹಗ್ಗಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಬಾವಿಯಲ್ಲಿದ್ದ ಶವವನ್ನು ಇಂದು ಮಧ್ಯಾಹ್ನ ಹೊರ ತೆಗೆಯಲಾಯಿತು. ವಿಚಾರಣೆ ವೇಳೆ ಬಂಧಿತ ಆರೋಪಿಗಳ ಇತರ ಕೊಲೆ ಸಂಚುಗಳು ಕೂಡ ಬೆಳಕಿಗೆ ಬಂದಿವೆ. ಬಂಧಿತ ಆರೋಪಿಗಳಲ್ಲಿ ದಯಾನಂದ ಹಾಗೂ ಪ್ರಸಾದ್ ಅವರನ್ನು ಗುರುತಿಸುವ ಕಾರ್ಯ ಬಾಕಿ ಇದೆ.

ಪೊಲೀಸ್ ತಂಡಕ್ಕೆ ಐಜಿಪಿ ಬಹುಮಾನವನ್ನು ಘೋಷಿಸಿದ್ದಾರೆ ಎಂದು ಎಸ್ಪಿ ಬಾಲಕೃಷ್ಣ ತಿಳಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಉಪಸ್ಥಿತರಿದ್ದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಮಾರ್ಗದರ್ಶನದಂತೆ ಡಿವೈಎಸ್ಪಿ ಕುಮಾರಸ್ವಾಮಿ ನಿರ್ದೇಶನದಂತೆ ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ ಕೆ., ಉಡುಪಿ ಡಿಸಿಐಬಿ ಪೊಲೀಸ್ ನಿರೀಕ್ಷಕ ಸಂಪತ್ ಕುಮಾರ್, ಹಿರಿಯಡ್ಕ ಠಾಣಾಧಿಕಾರಿ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿಯವರು ಈ ಕಾರ್ಯಾಚರಣೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X