Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವರ್ವಾಡಿ ಪ್ರವೀಣ್ ಕೊಲೆ: ಮತ್ತಿಬ್ಬರು...

ವರ್ವಾಡಿ ಪ್ರವೀಣ್ ಕೊಲೆ: ಮತ್ತಿಬ್ಬರು ಆರೋಪಿಗಳ ಸೆರೆ

ಬೆಳಗಾವಿ ಜೈಲಿನಲ್ಲಿ ಹತ್ಯೆಗೆ ಸಂಚು: ಎಸ್ಪಿ ಬಾಲಕೃಷ್ಣ

ವಾರ್ತಾಭಾರತಿವಾರ್ತಾಭಾರತಿ11 Jan 2017 7:43 PM IST
share
ವರ್ವಾಡಿ ಪ್ರವೀಣ್ ಕೊಲೆ: ಮತ್ತಿಬ್ಬರು ಆರೋಪಿಗಳ ಸೆರೆ

ಉಡುಪಿ, ಜ.11: ಹಿರಿಯಡ್ಕ ಕೋಟ್ನಕಟ್ಟೆ ಎಂಬಲ್ಲಿ ಡಿ.19ರಂದು ನಡೆದ ರೌಡಿ ವರ್ವಾಡಿ ಪ್ರವೀಣ್ ಕುಲಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಮತ್ತಿಬ್ಬರನ್ನು ಬಂಧಿಸಲಾಗಿದ್ದು, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಈ ಕೊಲೆಯ ಸಂಚು ರೂಪಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಶಿಕ್ಷಾ ಬಂಧಿ ಖೈದಿಯಾಗಿರುವ ಸಂತೋಷ್ ಪೂಜಾರಿ ಯಾನೆ ಸಂತು(39) ಹಾಗೂ ಉಡುಪಿ ಸಂತೆಕಟ್ಟೆಯ ಸುಜೀತ್ ಪಿಂಟೋ(33) ಬಂಧಿತ ಆರೋಪಿಗಳು. ಹಿರಿಯಡ್ಕದ ಸಂತೋಷ್ ರಾಮ್ ಯಾನೆ ಪುತ್ತಿಗೆ ಸಂತು(33), ಹಿರಿಯಡ್ಕ ಓಂತಿಬೆಟ್ಟುವಿನ ಸಂತೋಷ್ ಮಡಿವಾಳ ಯಾನೆ ಮಾಂಬೆಟ್ಟು ಸಂತು(33), ಫಲಿಮಾರಿನ ಲತೇಶ ಪೂಜಾರಿ(31) ಎಂಬವರನ್ನು ಈಗಾಗಲೇ ಬಂಧಿಸಲಾಗಿದೆ.

ಈ ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎಲ್ಲರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸಂತೋಷ್ ಪೂಜಾರಿಯನ್ನು ಕೊಲೆ ಮಾಡುವ ಬಗ್ಗೆ ಪ್ರವೀಣ್ ಕುಲಾಲ್ ಶಿವಮೊಗ್ಗ ನ್ಯಾಯಾಲಯದಲ್ಲಿ ಸಂಚು ರೂಪಿಸಿದ್ದನು. ಈ ವಿಚಾರ ಮಾಂಬೆಟ್ಟು ಸಂತು ಮೂಲಕ ಬೆಳಗಾಂ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಸಂತೋಷ್ ಪೂಜಾರಿಗೆ ತಿಳಿಯಿತು.

 ಇದೇ ವಿಚಾರವಾಗಿ ಡಿ.14ರಂದು ಪುತ್ತಿಗೆ ಸಂತು, ಮಾಂಬೆಟ್ಟು ಸಂತು, ಲತೇಶ್ ಪೂಜಾರಿ ಜೈಲಿನಲ್ಲಿ ಸಂತೋಷ್ ಪೂಜಾರಿಯನ್ನು ಭೇಟಿ ಮಾಡಿ ಪ್ರವೀಣ್ ಕುಲಾಲ್‌ನನ್ನು ಕೊಲೆ ಮಾಡುವ ಬಗ್ಗೆ ನಿರ್ಧರಿಸಿದ್ದರು. ಇದಕ್ಕಾಗಿ ಸುಜೀತ್ ಪಿಂಟೋ, ಮಾಂಬೆಟ್ಟು ಸಂತುಗೆ 1,50,000ರೂ. ಹಣವನ್ನು ನೀಡಿದ್ದನು. ಅದರಂತೆ ಡಿ.19ರಂದು ವರ್ವಾಡಿ ಪ್ರವೀಣ್ ಕುಲಾಲನನ್ನು ಮಾಂಬೆಟ್ಟು ಸಂತು ಮೂಲಕ ಹಿರಿಯಡ್ಕದ ಕೋಟ್ನಕಟ್ಟೆ ದಿಯಾ ಬಾರ್‌ಗೆ ಕರೆಸಿದ್ದು, ಅಲ್ಲಿ ಕ್ಯಾಬಿನ್ನಲ್ಲಿ ಇರುವಾಗ ಮಾಂಬೆಟ್ಟು ಸಂತು, ಪುತ್ತಿಗೆ ಸಂತುಗೆ ಮೊಬೈಲ್ ಸಂದೇಶ ಕಳುಹಿಸಿ ಪ್ರವೀಣ್ ಬಾರ್‌ನಲ್ಲಿರುವ ಬಗ್ಗೆ ಮಾಹಿತಿ ನೀಡಿದ್ದನು.

ಅದರಂತೆ ಪುತ್ತಿಗೆ ಸಂತು ಮತ್ತು ಲತೇಶ್ ಪೂಜಾರಿ ತಲವಾರು ಹಿಡಿದು ಕೊಂಡು ಕ್ಯಾಬಿನ್ ಒಳಗೆ ನುಗ್ಗಿ ಪ್ರವೀಣ್ ಕುಲಾಲ್‌ಗೆ ತಲವಾರಿನಿಂದ ಹಲ್ಲೆ ನಡೆಸಿದ್ದು ಇದರಿಂದ ತಪ್ಪಿಸಿಕೊಂಡು ಬಾರ್‌ನಿಂದ ಹೊರಗಡೆ ಓಡಿ ಬಂದ ಪ್ರವೀಣ್ ಕುಲಾಲ್‌ನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿದ್ದರು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಎರಡು ತಲವಾರು, ಕತ್ತಿ, ಬೈಕ್, ರಿಟ್ಝ್ ಕಾರು, 1,26,000ರೂ. ನಗದನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ.

 ಈ ಕೊಲೆ ಪ್ರಕರಣವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ , ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಮಾರ್ಗದರ್ಶನದಂತೆ ಡಿವೈಎಸ್ಪಿ ಕುಮಾರಸ್ವಾಮಿ ನಿರ್ದೇಶನದಂತೆ ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ ಕೆ., ಉಡುಪಿ ಡಿಸಿಐಬಿ ಪೊಲೀಸ್ ನಿರೀಕ್ಷಕ ಸಂಪತ್ ಕುಮಾರ್, ಹಿರಿಯಡ್ಕ ಠಾಣಾಧಿಕಾರಿ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿಯವರ ತಂಡ ಭೇದಿಸಿದೆ.

ಈ ತಂಡಕ್ಕೆ ಮಂಗಳೂರು ಐಜಿಪಿ ಬಹುಮಾನವನ್ನು ಘೋಷಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X