Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದ ಎಲ್ಲ ಕಮಿಷನರೇಟ್ ವ್ಯಾಪ್ತಿಯಲ್ಲಿ...

ರಾಜ್ಯದ ಎಲ್ಲ ಕಮಿಷನರೇಟ್ ವ್ಯಾಪ್ತಿಯಲ್ಲಿ ಶೀಘ್ರ ಗಸ್ತು ವಾಹನ : ಡಾ.ಜಿ. ಪರಮೇಶ್ವರ್

ಅತ್ಯಾಧುನಿಕ ತಂತ್ರಜ್ಞಾನದ ಗಸ್ತು ವಾಹನಗಳಿಗೆ ಗೃಹ ಸಚಿವರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 Jan 2017 7:10 PM IST
share
ರಾಜ್ಯದ ಎಲ್ಲ ಕಮಿಷನರೇಟ್ ವ್ಯಾಪ್ತಿಯಲ್ಲಿ ಶೀಘ್ರ ಗಸ್ತು ವಾಹನ : ಡಾ.ಜಿ. ಪರಮೇಶ್ವರ್

ಮಂಗಳೂರು, ಜ.12: ಕಮಿಷನರೇಟ್ ವ್ಯಾಪ್ತಿಯಲ್ಲಿ ಗಸ್ತು ಕಾರ್ಯವನ್ನು ಪಡಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಗಸ್ತು ವಾಹನಗಳಿಗೆ ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಚಾಲನೆ ನೀಡಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯ ಎದುರು ಗಸ್ತು ವಾಹನಗಳಿಗೆ ಹಸಿಲು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ 25 ಹೊಸ ಮಾರುತಿ ಎರ್ಟಿಗಾ ವಾಹನಗಳನ್ನು ಸಾರ್ವಜನಿಕ ಸೇವೆಗೆ ಬಿಡಲಾಗಿದೆ ಎಂದರು.

ಕಮಿಷನರೇಟ್ ಇರುವ ನಗರಗಳಲ್ಲಿ ಜಿಪಿಎಸ್ ಹೊಂದಿದ ಗಸ್ತು ವಾಹನಗಳ ವ್ಯವಸ್ಥೆಯನ್ನು ಕಲ್ಪಿಸುವ ಮಹತ್ತರ ಯೋಜನೆಯನ್ನು ರೂಪಿಸಲು ನಿರ್ಧರಿಸಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ 300ಕ್ಕೂ ಗಸ್ತು ವಾಹನಗಳು ಕಾರ್ಯಾಚರಣೆಗೆ ಇಳಿದಿವೆ. ಮಂಗಳೂರಿನಲ್ಲಿ ಈಗ 25 ಗಸ್ತು ವಾಹನಗಳಿಗೆ ಚಾಲನೆ ನೀಡಲಾಗಿದೆ. ಉಳಿದಂತೆ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ಕಮಿಷನರೇಟ್‌ಗಳಲ್ಲಿ ಗಸ್ತು ವಾಹನಗಳ ಕಾರ್ಯಾಚರಣೆಗೆ ವಾರದೊಳಗೆ ಚಾಲನೆ ನೀಡಲಾಗುವುದು ಎಂದು ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

  ಪೊಲೀಸರು ರಾತ್ರಿ ಹೊತ್ತು ಗಾಳಿ, ಮಳೆ, ಚಳಿಯಲ್ಲಿ ಕಷ್ಟಪಟ್ಟು ಅಪರಾಧಗಳನ್ನು ತಡೆಯುವಲ್ಲಿ ಕಾರ್ಯನಿರತರಾಗಿರುತ್ತಾರೆ. ಅಪರಾಧ ನಡೆದ ಸ್ಥಳಕ್ಕೆ ತಕ್ಷಣ ತಲುಪಲು ಇಂತಹ ವಾಹನಗಳ ಆವಶ್ಯಕತೆಯನ್ನು ಮನಗಂಡು ಮತ್ತು ರಾತ್ರಿ ಪಾಳಿಯ ಗಸ್ತು ವ್ಯವಸ್ಥೆಯನ್ನು ಪರಿಣಾಮಕಾರಿಯಾಸಲು ಈ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ವಲಯದಲ್ಲೂ ಇಬ್ಬರು ಗಸ್ತು ಕಾರ್ಯನಿರ್ವಹಿಸುತ್ತಾರೆ. ಅಲ್ಲಿನ ಪ್ರತಿ ಮನೆಗಳು, ಬಂದು ಹೋಗುವವರ ಮಾಹಿತಿಯನ್ನು ಕಲೆ ಹಾಕಲಾಗುತ್ತದೆ ಎಂದು ಜಿ. ಪರಮೇಶ್ವರ್ ಹೇಳಿದರು.

ಮುಂದಿನ ದಿನಗಳಲ್ಲಿ ಮಹಿಳೆಯರಿಗೂ ಗಸ್ತು ವಾಹನದ ಕಾರ್ಯಾಚರಣೆಯಲ್ಲಿ ಅವಕಾಶವನ್ನು ನೀಡಲಾಗುತ್ತದೆ. ಇದರಿಂದ ಮಹಿಳೆಯರಿಗೂ ರಾತ್ರಿ ಸಮಯದಲ್ಲಿ ರಕ್ಷಣೆ ನೀಡುವಂತಹ ಯೋಜನೆ ರೂಪಿಸಲಾಗುತ್ತದೆ. ಸಮಾಜದಲ್ಲಿ ಜನರ ರಕ್ಷಣೆ ಮುಖ್ಯವಾಗಿದ್ದು, ಇತ್ತೀಚಿನ ದಿನಗಳಲ್ಲಿ ಅಪರಾಧಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದರು.

ಈ ಸಂದರ್ಭ ಶಾಸಕರಾದ ಜೆ.ಆರ್. ಲೋಬೊ, ಮೊಯ್ದಿನ್ ಬಾವ, ಪೊಲೀಸ್ ಆಯುಕ್ತ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

 ಗಸ್ತು ವಾಹನದ ಕಾರ್ಯಾಚರಣೆ: ಹೊಸದಾಗಿ ಬಂದಿರುವ ಗಸ್ತು ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಅತ್ಯಾಧುನಿಕ ಟ್ಯಾಬ್ಲೆಟ್‌ಗಳನ್ನು ವಾಹನದಲ್ಲಿ ಅಳವಡಿಸಲಾಗಿದ್ದು, ಇದನ್ನು ಪೊಲೀಸ್ ಕಮಿಷನರೇಟ್‌ಗೆ ಸಂಪರ್ಕ ಕಲಿಸಲಾಗಿರುತ್ತದೆ. ಕಂಟ್ರೋಲ್ ರೂಮ್‌ಗೆ ಕರೆ ಬಂದ ತಕ್ಷಣ ಅಪರಾಧ ನಡೆದ ವ್ಯಾಪ್ತಿಯಲ್ಲಿ ಯಾವ ಗಸ್ತು ವಾಹನವಿದೆ ಎನ್ನುವುದು ಕಂಟ್ರೋಲ್ ರೂಮ್ ಮಾಹಿತಿ ಹೋಗುತ್ತದೆ. ಬಳಿಕ ಆ ವ್ಯಾಪ್ತಿಯಲ್ಲಿ ನಡೆದ ಅಪರಾಧದ ಕುರಿತು ಸಮೀಪದ ವಾಹನದ ಸಿಬ್ಬಂದಿಗೆ ನಿರ್ದೇಶನ ನೀಡಲಾಗುತ್ತದೆ. ಪ್ರಾರಂಭದಲ್ಲಿ ಮೂವರು ಸಿಬ್ಬಂದಿಯನ್ನು ಈ ವಾಹನ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X