Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಗೀತೆಗೆ ಎದ್ದು ನಿಂತಿಲ್ಲ ಎಂದು...

ರಾಷ್ಟ್ರಗೀತೆಗೆ ಎದ್ದು ನಿಂತಿಲ್ಲ ಎಂದು ವೃದ್ಧೆಯ ಅವಹೇಳನ

ವಾರ್ತಾಭಾರತಿವಾರ್ತಾಭಾರತಿ12 Jan 2017 11:57 PM IST
share

ಚೆನ್ನೈ, ಜ.12: ರಾಷ್ಟ್ರಗೀತೆ ನುಡಿಸುವಾಗ ಎದ್ದು ನಿಂತಿಲ್ಲ ಎಂಬ ಕಾರಣಕ್ಕಾಗಿ ಮಹಿಳೆ ಮತ್ತಾಕೆಯ ವೃದ್ಧ ತಾಯಿಯನ್ನು ಅವಹೇಳನಗೈದ ಹಾಗೂ ವ್ಯಕ್ತಿಯೊಬ್ಬನಿಗೆ ಥಳಿಸಿದ ಘಟನೆ ವಡಪಳನಿಯ ಪಲರೆ ಸಿನೆಮಾಸ್‌ನಿಂದ ವರದಿಯಾಗಿದೆ. ಚೆನ್ನೈ ಅಂತಾರಾಷ್ಟ್ರೀಯ ಚಿತ್ರೋತ್ಸವ ನಡೆಯುತ್ತಿದ್ದ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ.

ಈ ಘಟನೆಯ ಪ್ರತ್ಯಕ್ಷ ಸಾಕ್ಷಿಯೊಬ್ಬರ ಪ್ರಕಾರ ರಾಷ್ಟ್ರಗೀತೆ ನುಡಿಸುತ್ತಿದ್ದಾಗ ಈ ಮೂವರೂ ನಿಂತಿಲ್ಲದ್ದನ್ನು ಕಂಡು ಹಿಂದಿನ ಸೀಟಿನಲ್ಲಿದ್ದವರು ಅವರನ್ನು ಪ್ರಶ್ನಿಸಿದ್ದರು. ಕೂಡಲೇ ಹಲವಾರು ಮಂದಿ ಇವರೊಂದಿಗೆ ಸೇರಿಕೊಂಡರು. ಮಹಿಳೆಯರು ತಮ್ಮನ್ನು ಸಮರ್ಥಿಸಿಕೊಳ್ಳಲೆತ್ನಿಸಿದ್ದು ಇತರರಿಗೆ ಸರಿ ಕಂಡಿರಲಿಲ್ಲ. ಪುರುಷನೊಬ್ಬನಿಗೆ ಕೆಲವರು ಚೆನ್ನಾಗಿ ತದಕಿದ್ದರು. ಪೊಲೀಸರು ಸ್ಥಳಕ್ಕೆ ಬರುವ ತನಕ ಚಿತ್ರ ಪ್ರದರ್ಶನ ನಡೆಯಬಾರದೆಂದು ಅಲ್ಲಿದ್ದವರು ಬೇಡಿಕೆ ಕೂಡಾ ಇಟ್ಟರು.
ಘಟನೆ ನಡೆದು ಸುಮಾರು ಅರ್ಧ ಗಂಟೆ ತರುವಾಯ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರು ಮಹಿಳೆಯರು ಮತ್ತೊಬ್ಬ ಪುರುಷನನ್ನು ತಮ್ಮ ಕಸ್ಟಡಿಗೆ ಪಡೆದುಕೊಂಡರು. ಆದರೆ ಈ ಮೂವರನ್ನು ನಿಂದಿಸಿ ಅವರಲ್ಲೊಬ್ಬರಿಗೆ ಹಲ್ಲೆ ನಡೆಸಿದವರನ್ನೂ ಬಂಧಿಸಬೇಕೆಂದು ಚಿತ್ರೋತ್ಸವದ ಸಂಘಟಕರು ಆಗ್ರಹಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತೆ ಶ್ರೀಲಾ, ಆಕೆಯ ತಾಯಿ ಶುಭಶ್ರೀ ಮತ್ತು ಕೇರಳದಿಂದ ಬಂದ ಪ್ರತಿನಿಧಿ ಬಿಜಾನ್ ರಾಷ್ಟ್ರಗೀತೆ ನುಡಿಸುವ ಸಂದರ್ಭ ನಿಲ್ಲದೇ ಸಮಸ್ಯೆಯೆದುರಿಸಿದವರು. ಶ್ರೀಲಾ ಮೇಲೆ ಈ ಹಿಂದೆ ಕೂಡ ಇಂತಹುದೇ ಘಟನೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X