Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು...

ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಲು ಬಿಎಸ್ಪಿ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ13 Jan 2017 12:09 PM IST
share
ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಲು ಬಿಎಸ್ಪಿ ಸಿದ್ಧತೆ

 ಲಕ್ನೋ, ಜ.13: ನನ್ನ ಪ್ರಮುಖ ಮತದಾರರು ಜಾಲತಾಣಗಳಲ್ಲಿ ಸಿಗುವುದಿಲ್ಲ ಎಂದು ಪ್ರತಿಪಾದಿಸುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಅವರು ಮಾರ್ಚ್-ಎಪ್ರಿಲ್‌ನಲ್ಲಿ ಉತ್ತರಪ್ರದೇಶದಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಡಿಜಿಟಲ್ ತಂತ್ರಜ್ಞಾನಕ್ಕೆ ಮೊರೆಹೋಗಲು ನಿರ್ಧರಿಸಿದ್ದಾರೆ.

ಪ್ರತಿಪಕ್ಷಗಳಾದ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಹಾಗೂ ಬಿಜೆಪಿಗೆ ಸ್ಪರ್ಧೆಯೊಡ್ಡಲು ಮಾಯಾವತಿಯವರ ಹುಟ್ಟುಹಬ್ಬದಂದು(ಜ.15) ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಸಾಮಾಜಿಕ ಜಾಲತಾಣಗಳಲ್ಲಿ ವಿಧ್ಯುಕ್ತವಾಗಿ ಪ್ರವೇಶಿಸಲು ನಿರ್ಧರಿಸಿದೆ.

ಬೆಹನ್‌ಜಿ ಕೋ ಆನೆ ದೋ(ಮಯಾವತಿಯವರನ್ನು ಮತ್ತೆ ಅಧಿಕಾರಕ್ಕೆ ತನ್ನಿ) ಎಂಬ ಅಡಿಬರಹದಲ್ಲಿ ಟ್ವಿಟರ್, ಫೇಸ್‌ಬುಕ್ ಹಾಗೂ ಇತರ ಅಂತರ್ಜಾಲಗಳಲ್ಲಿ ವಿಡಿಯೋ ಹಾಗೂ ಪೋಸ್ಟರ್‌ಗಳನ್ನು ಹಾಕಲು ಬಿಎಸ್ಪಿ ಯೋಜನೆ ಹಾಕಿಕೊಂಡಿದೆ.

ಮಾಯಾವತಿ ಅವರು ಮುಂಬರುವ ದಿನಗಳಲ್ಲಿ 50ಕ್ಕೂ ಅಧಿಕ ರ್ಯಾಲಿ ನಡೆಸಲು ನಿರ್ಧರಿಸಿದ್ದಾರೆ.

ಫೇಸ್‌ಬುಕ್, ಟ್ವಿಟರ್, ವ್ಯಾಟ್ಸ್‌ಆ್ಯಪ್ ಹಾಗೂ ಯೂ ಟ್ಯೂಬ್ ಅಭಿಯಾನ 60ರ ಪ್ರಾಯದ ಮಾಯಾವತಿಯವರಿಗೆ ತೀರಾ ಹೊಸತು. ಅವರು ಯಾವಾಗಲೂ ತನ್ನ ಬೆಂಬಲಿಗರನ್ನು ಸಾಂಪ್ರದಾಯಿಕವಾಗಿಯೇ ಭೇಟಿಯಾಗಲು ಒತ್ತು ನೀಡುತ್ತಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

 ಆನೆಯ ಚಿಹ್ನೆ ಅಡಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಎಸ್ಪಿ ಪಕ್ಷ ಟ್ವಿಟರ್ ಹಾಗೂ ಫೇಸ್‌ಬುಕ್ ಖಾತೆಯಲ್ಲಿ ಸಕ್ರಿಯವಾಗಿದೆ. ಆದರೆ, ಹೆಚ್ಚು ಪ್ರಸಿದ್ದಿಯಲ್ಲಿಲ್ಲ. ಟ್ವಿಟರ್‌ನಲ್ಲಿ ಕೇವಲ 10,000 ಹಿಂಬಾಲಕರಿದ್ದಾರೆ. ಹಾಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್(3.1 ಮಿಲಿಯನ್) ಅತ್ಯಂತ ಹೆಚ್ಚು ಫಾಲೋವರ್ಸ್‌ನ್ನು ಹೊಂದಿದ್ದಾರೆ.

ಬಿಎಸ್ಪಿ ಲಕ್ನೋದಲ್ಲಿರುವ ಕಚೇರಿಯನ್ನು ಚುನಾವಣೆ ಸಮರಕ್ಕೆ ಸಂಪೂರ್ಣ ಸಜ್ಜುಗೊಳಿಸಿದ್ದು, ಕಚೇರಿಯಲ್ಲಿ ಕಾಲ್ ಸೆಂಟರ್‌ಗಳು, ಸೋಶಿಯಲ್ ಮೀಡಿಯಾ ರೂಮ್‌ಗಳಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X