Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5 ಕೋಟಿ ರೂಪಾಯಿ ಡೀಲ್ ಸಹಿ ಮಾಡಿದ 14ರ...

5 ಕೋಟಿ ರೂಪಾಯಿ ಡೀಲ್ ಸಹಿ ಮಾಡಿದ 14ರ ಪೋರ

ವಿವರಗಳಿಗೆ ಕ್ಲಿಕ್ ಮಾಡಿ

ವಾರ್ತಾಭಾರತಿವಾರ್ತಾಭಾರತಿ13 Jan 2017 3:17 PM IST
share
5 ಕೋಟಿ ರೂಪಾಯಿ ಡೀಲ್ ಸಹಿ ಮಾಡಿದ 14ರ ಪೋರ

ಅಹ್ಮದಾಬಾದ್, ಜ.13: ರಾಜ್ಯದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಸಮ್ಮಿಟ್ ನಲ್ಲಿ ಗುರುವಾರ ಕನ್ನಡಕಧಾರಿ ಹಾಗೂ ನೀಲಿ ಬಣ್ಣದ ಸೂಟ್ ಧಾರಿಯಾಗಿದ್ದ 14ರ ಪೋರ ಎಲ್ಲರ ಗಮನ ಸೆಳೆದಿದ್ದಾನೆ. ಏಕಂತೀರಾ ?

ಆತ ಸಹಿ ಹಾಕಿದ್ದಾನೆ ಬರೋಬ್ಬರಿ ರೂ 5 ಕೋಟಿ ಮೊತ್ತದ ಒಪ್ಪಂದವೊಂದಕ್ಕೆ. ತಾನು ವಿನ್ಯಾಸಗೊಳಿಸಿರುವ ಡ್ರೋನ್ ಒಂದರ ಉತ್ಪಾದನೆಗಾಗಿ ಆತ ಈ ಮಹತ್ವದ ಒಪ್ಪಂದವೊಂದಕ್ಕೆರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯೊಂದಿಗೆ ಸಹಿ ಹಾಕಿದ್ದಾನೆ.

ಈ ಪ್ರತಿಭಾನ್ವಿತ ಬಾಲಕನ ಹೆಸರು ಹರ್ಷವರ್ಧನ್ ಝಲಾ. ಹತ್ತನೆ ತರಗತಿಯಲ್ಲಿ ಕಲಿಯುತ್ತಿರುವ ಈತನ ಶಾಲೆ ಬಾಪುನಗರದ ಸರ್ವೋದಯ ವಿದ್ಯಾಮಂದಿರ. ಯುದ್ಧರಂಗದಲ್ಲಿ ನೆಲಬಾಂಬುಗಳನ್ನು ಪತ್ತೆ ಹಚ್ಚಿ ಅವುಗಳನ್ನು ನಿಷ್ಕ್ರಿಯಗೊಳಿಸುವ ಸಾಮರ್ಥ್ಯ ಈತ ತಯಾರಿಸುವ ಡ್ರೋನ್ ಗಳಿಗಿರುತ್ತವೆ. ಈತನ ತರಗತಿಯ ಹೆಚ್ಚಿನ ಸಹಪಾಠಿಗಳು ಮುಂಬರುವ ಬೋರ್ಡ್ ಪರೀಕ್ಷೆಯ ತಲೆಬಿಸಿಯಲ್ಲಿದ್ದರೆ, ಹರ್ಷವರ್ಧನ್ ಮಾತ್ರ ಮೂರು ಪ್ರೊಟೋಟೈಪುಗಳ ಡ್ರೋನ್ ತಯಾರಿಸಿ ತನ್ನ ಮುಂದಿನ ಯೋಜನೆಯ ಬಗ್ಗೆ ಯೋಚಿಸುತ್ತಿದ್ದ.

‘‘ಟಿವಿಯಲ್ಲಿ ಬರುವ ಹಲವಾರು ಸುದ್ದಿಗಳಲ್ಲಿ ಯೋಧರು ನೆಲಬಾಂಬು ಸ್ಫೋಟದಲ್ಲಿ ಸಾವಿಗೀಡಾಗುತ್ತಿರುವ ವಿಷಯ ಹಾಗೂ ಕೆಲವರು ಈ ಬಾಂಬುಗಳನ್ನು ನಿಷ್ಕ್ರಿಯಗೊಳಿಸುವಾಗ ಮೃತಪಟ್ಟ ಬಗ್ಗೆ ತಿಳಿದುಕೊಂಡಿದ್ದೆ. ಇದರಿಂದಾಗಿಯೇ ಈ ಡ್ರೋನ್ ತಯಾರಿಸುವ ಯೋಚನೆ ಬಂತು,’’ ಎಂದು ಹೇಳುವ ಹರ್ಷವರ್ಧನ್ ತನ್ನ ಡ್ರೋನ್ ಗಳಿಗಾಗಿ ರೂ.5 ಲಕ್ಷದ ತನಕ ಖರ್ಚು ಮಾಡಿದ್ದಾನೆ. ಮೊದಲ ಎರಡು ಪ್ರೊಟೊಟೈಪ್ ಡ್ರೋನ್ ಗಳಿಗೆ ಆತನ ಹೆತ್ತವರು ಎರಡು ಲಕ್ಷ ನೀಡಿದ್ದರೆ, ಮೂರನೇ ಪ್ರೊಟೊಟೈಪ್ ಡ್ರೋನ್ ತಯಾರಿಗೆ ರಾಜ್ಯ ಸರಕಾರ ರೂ.3 ಲಕ್ಷ ಅನುದಾನ ಒದಗಿಸಿತ್ತು.

ಈತ ತಯಾರಿಸಿರುವ ಡ್ರೋನ್ ನಲ್ಲಿ ಇನ್‌ಫ್ರಾರೆಡ್, ಆರ್ ಜಿಬಿ ಸೆನ್ಸರ್, ಥರ್ಮಲ್ ಮೀಟರ್, 31 ಮೆಗಾ ಪಿಕ್ಸೆಲ್ ಕ್ಯಾಮರಾ ಹಾಗೂ ಮೆಕ್ಯಾನಿಕಲ್ ಶಟರ್ ಇದ್ದು ಅತ್ಯುತ್ತಮ ಗುಣಮಟ್ಟದ ಚಿತ್ರಗಳನ್ನು ತೆಗೆಯುವ ಸಾಮರ್ಥ್ಯ ಅದಕ್ಕಿದೆ. ಈ ಡ್ರೋನ್ ನಲ್ಲಿ 50 ಗ್ರಾಂ ತೂಕದ ಬಾಂಬ್ ಕೂಡ ಇದ್ದು ಇದು ನೆಲಬಾಂಬನ್ನು ನಾಶಗೊಳಿಸುವ ಶಕ್ತಿ ಹೊಂದಿರುತ್ತದೆ.

ಈಗಾಗಲೇ ಪೇಟೆಂಟ್ ಗೆ ಅರ್ಜಿ ಸಲ್ಲಿಸಿರುವ ಈ ಬಾಲಕನ ಕಂಪೆನಿಯ ಹೆಸರು ಎರೊಬೋಟಿಕ್ಸ್.

ಹರ್ಷವರ್ಧನನ ತಂದೆ ಪ್ರದ್ಯುಮಾನ್ ಸಿನ್ಹ ಝಲಾ ನರೋಡಾದ ಪ್ಲಾಸ್ಟಿಕ್ ಕಂಪೆನಿಯೊಂದರಲ್ಲಿ ಅಕೌಂಟೆಂಟ್ ಆಗಿದ್ದರೆ ತಾಯಿ ನಿಷಬ ಝಲಾ ಗೃಹಿಣಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X