Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಯಕತ್ವದ ವಿಭಜನೆಯಿಂದ ಭಾರತಕ್ಕೆ...

ನಾಯಕತ್ವದ ವಿಭಜನೆಯಿಂದ ಭಾರತಕ್ಕೆ ಲಾಭವಿಲ್ಲ: ಧೋನಿ

ವಾರ್ತಾಭಾರತಿವಾರ್ತಾಭಾರತಿ13 Jan 2017 4:56 PM IST
share
ನಾಯಕತ್ವದ ವಿಭಜನೆಯಿಂದ ಭಾರತಕ್ಕೆ ಲಾಭವಿಲ್ಲ: ಧೋನಿ

ಪುಣೆ, ಜ.13: ‘‘ಭಾರತದಲ್ಲಿ ನಾಯಕತ್ವದ ವಿಭಜನೆಯಿಂದ ಲಾಭವಿಲ್ಲ. ವಿರಾಟ್ ಕೊಹ್ಲಿ ಅತ್ಯಂತ ಯಶಸ್ವಿ ನಾಯಕನಾಗಿ ಇತಿಹಾಸ ಮರು ನಿರ್ಮಾಣ ಮಾಡಲಿದ್ದಾರೆ’’ ಎಂದು ಇತ್ತೀಚೆಗಷ್ಟೇ ದಿಢೀರನೆ ಸೀಮಿತ ಓವರ್‌ಗಳ ಕ್ರಿಕೆಟ್ ನಾಯಕತ್ವ ತ್ಯಜಿಸಿದ್ದ ಮಹೇಂದ್ರ ಸಿಂಗ್ ಧೋನಿ ಅಭಿಪ್ರಾಯಪಟ್ಟಿದ್ದಾರೆ.

ಮೂರು ಮಾದರಿಯ ಕ್ರಿಕೆಟಿಗೆ ವಿವಿಧ ನಾಯಕರನ್ನು ಆಯ್ಕೆ ಮಾಡುವ ಬಗ್ಗೆ ನನ್ನ ಒಲವಿಲ್ಲ ಎಂದು ಹೇಳಿದ ಧೋನಿ,‘‘ನಾಯಕತ್ವವನ್ನು ವಿಭಜಿಸುವ ಬಗ್ಗೆ ನನ್ನ ವಿರೋಧವಿದೆ. ತಂಡಕ್ಕೆ ಒಬ್ಬನೇ ನಾಯಕನಿರಬೇಕು...ನಾಯಕತ್ವದ ವಿಭಜನೆ ಭಾರತದಲ್ಲಿ ನಡೆಯುವುದಿಲ್ಲ. ವಿರಾಟ್ ಕೊಹ್ಲಿಗೆ ಪೂರ್ಣಕಾಲಿಕ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಡಲು ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದೆ. ನನ್ನ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ. ಎಲ್ಲ 3 ಮಾದರಿಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಈಗಿನ ತಂಡಕ್ಕಿದೆ. ನಾಯಕತ್ವ ತ್ಯಜಿಸಲು ಇದು ಸರಿಯಾದ ಸಮಯವೆಂದು ಭಾವಿಸಿದ್ದೆ’’ ಎಂದು ಹೇಳಿದ್ದಾರೆ.

‘‘ವಿರಾಟ್ ಹಾಗೂ ಅವರ ತಂಡ ನನಗಿಂತ ಹೆಚ್ಚು ಪಂದ್ಯಗಳನ್ನು ಗೆಲ್ಲುತ್ತಾರೆ. ಇದೊಂದು ಅತ್ಯಂತ ಯಶಸ್ವಿ ತಂಡವಾಗಲಿದೆ. ಆ ರೀತಿಯ ಅನುಭವ ಹಾಗೂ ಸಾಮರ್ಥ್ಯ ಈ ತಂಡಕ್ಕಿದೆ. ಈ ತಂಡ ಟೂರ್ನಿಯ ನಾಕೌಟ್‌ನಲ್ಲಿ ಒತ್ತಡದ ಪರಿಸ್ಥಿತಿಯಲ್ಲಿ ಆಡಿದೆ. ಕೊಹ್ಲಿ ನೇತೃತ್ವದ ತಂಡ ಇತಿಹಾಸವನ್ನು ಮರು ನಿರ್ಮಿಸಲಿದೆ ಎಂಬ ಖಚಿತ ವಿಶ್ವಾಸ ನನಗಿದೆ’’ ಎಂದು ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದ ಮುನ್ನಾದಿನ ನಡೆದ ಪತ್ರಿಕಾಗೋಷ್ಠಿಯಲ್ಲಿ ಧೋನಿ ತಿಳಿಸಿದ್ದಾರೆ.

‘‘ಓರ್ವ ಆಟಗಾರ ತಂಡವನ್ನು ಮುನ್ನಡೆಸುವುದು ನಿರ್ಣಾಯಕ ಎನ್ನುವುದು ನನ್ನ ನಂಬಿಕೆ. ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವಹಿಸಿಕೊಂಡಾಗ ಇಂತಹ ವಿಚಾರ ನನ್ನ ಮನಸ್ಸಲ್ಲಿ ಮೂಡಿತ್ತು. ಕೊಹ್ಲಿ ಕೆಲವು ಪಂದ್ಯಗಳಲ್ಲಿ ಆಡಿ ನಾಯಕತ್ವದಲ್ಲಿ ಒಂದಷ್ಟು ಪಳಗಲಿ ಎಂದು ಬಯಸಿದ್ದೆ. ಕೊಹ್ಲಿಗೆ ಸೀಮಿತ ಓವರ್‌ಗಳ ಕ್ರಿಕೆಟ್ ನಾಯಕತ್ವ ಬಿಟ್ಟುಕೊಡಲು ಇದೊಂದು ಸರಿಯಾದ ಸಮಯವೆಂದು ಕೊನೆಗೂ ನಿರ್ಧರಿಸಿದ್ದೆ’’ ಎಂದು ಧೋನಿ ಹೇಳಿದರು.

ನಾಯಕತ್ವ ತ್ಯಜಿಸಿದ್ದರಿಂದ ತಂಡದಲ್ಲಿ ನಿಮ್ಮ ಪಾತ್ರವೇನು? ಎಂದು ಕೇಳಿದಾಗ,‘‘ನಾನು ನಿರಂತರವಾಗಿ ಕೊಹ್ಲಿ ಬಳಿ ಸಲಹೆ ಹಾಗೂ ಅಭಿಪ್ರಾಯವನ್ನು ಹಂಚಿಕೊಳ್ಳುವೆ. ವಿಕೆಟ್‌ಕೀಪರ್ ಯಾವಾಗಲೂ ತಂಡದ ಉಪ ನಾಯಕನಾಗಿರುತ್ತಾನೆ. ನಾಯಕ ಏನು ಬಯಸುತ್ತಾನೆಂದು ಕಣ್ಣಲ್ಲಿ ಕಣ್ಣಿಟ್ಟು ಗಮನಿಸುವೆ. ಯಾವ ರೀತಿ ಫೀಲ್ಡಿಂಗ್ ನಡೆಸಲು ಬಯಸಿದ್ದೀರಿ ಎಂದು ಕೊಹ್ಲಿ ಬಳಿ ಈಗಾಗಲೇ ಚರ್ಚಿಸಿರುವೆ. ಕೊಹ್ಲಿ ಬಯಸಿದರೆ ಸಾಕಷ್ಟು ಸಲಹೆ ನೀಡಲು ಸದಾ ಸಿದ್ಧ’’ ಎಂದು ಧೋನಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X