Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗುಜರಾತ್ ಮಡಿಲಿಗೆ ಚೊಚ್ಚಲ ರಣಜಿ ಟ್ರೋಫಿ

ಗುಜರಾತ್ ಮಡಿಲಿಗೆ ಚೊಚ್ಚಲ ರಣಜಿ ಟ್ರೋಫಿ

ಪಾರ್ಥಿವ್ ಪಟೇಲ್ ನಾಯಕನ ಆಟ

ವಾರ್ತಾಭಾರತಿವಾರ್ತಾಭಾರತಿ14 Jan 2017 4:00 PM IST
share
ಗುಜರಾತ್ ಮಡಿಲಿಗೆ ಚೊಚ್ಚಲ ರಣಜಿ ಟ್ರೋಫಿ

ಇಂದೋರ್, ಜ.14: ನಾಯಕ ಪಾರ್ಥಿವ್ ಪಟೇಲ್ ಬಾರಿಸಿದ ಆಕರ್ಷಕ ಶತಕದ(143) ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ತಂಡವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸಿದ ಗುಜರಾತ್ ತಂಡ ಇದೇ ಮೊದಲ ಬಾರಿ ರಣಜಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ರಣಜಿ ಟ್ರೋಫಿ ಜಯಿಸುವುದರೊಂದಿಗೆ ಗುಜರಾತ್ ದೇಶೀಯ ಕ್ರಿಕೆಟ್‌ನ ಎಲ್ಲ ಮೂರು ಪ್ರಮುಖ ಪ್ರಶಸ್ತಿ ಜಯಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಗುಜರಾತ್ ತಂಡ ವಿಜಯ್ ಹಝಾರೆ ಟ್ರೋಫಿ(ಹಾಲಿ ಚಾಂಪಿಯನ್) ಹಾಗೂ ಸೈಯದ್ ಮುಶ್ತಾಕ್ ಅಲಿ ಟ್ರೋಫಿ(2 ಬಾರಿ) ಗೆದ್ದುಕೊಂಡಿದೆ.

46ನೆ ಬಾರಿ ರಣಜಿ ಟ್ರೋಫಿ ಫೈನಲ್‌ಗೆ ತಲುಪಿದ್ದ ಮುಂಬೈ ತಂಡ 42ನೆ ಬಾರಿ ಪ್ರಶಸ್ತಿ ಗೆಲ್ಲುವ ಕನಸು ಕೈಗೂಡಲಿಲ್ಲ. 83 ವರ್ಷಗಳ ಇತಿಹಾಸವಿರುವ ರಣಜಿ ಟ್ರೋಫಿಯಲ್ಲಿ ಗುಜರಾತ್ ಎರಡನೆ ಬಾರಿ ಫೈನಲ್‌ಗೆ ತಲುಪಿದ್ದು, 2ನೆ ಪ್ರಯತ್ನದಲ್ಲೇ ಪ್ರಶಸ್ತಿ ಗೆದ್ದುಕೊಂಡಿತು. ಮುಂಬೈ 5ನೆ ಬಾರಿ ರಣಜಿಯಲ್ಲಿ ರನ್ನರ್ ಅಪ್‌ಗೆ ತೃಪ್ತಿಪಟ್ಟುಕೊಂಡಿತು.

ಶನಿವಾರ ಇಲ್ಲಿನ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದ ಐದನೆ ಹಾಗೂ ಅಂತಿಮ ದಿನದಾಟದಲ್ಲಿ ಗೆಲ್ಲಲು 312 ರನ್ ಗುರಿ ಪಡೆದಿದ್ದ ಗುಜರಾತ್ 89.5 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 313 ರನ್ ಗಳಿಸಿ ಜಯಭೇರಿ ಬಾರಿಸಿತು.

 ನಾಯಕ ಪಾರ್ಥಿವ್ ಪಟೇಲ್(143 ರನ್, 196 ಎಸೆತ, 24 ಬೌಂಡರಿ) ಹಾಗೂ ಮನ್‌ಪ್ರೀತ್ ಜುನೇಜ(54 ರನ್, 115 ಎಸೆತ, 8ಬೌಂಡರಿ) 4ನೆ ವಿಕೆಟ್‌ಗೆ 116 ರನ್ ಜೊತೆಯಾಟ ನಡೆಸಿ ಗುಜರಾತ್ ಗೆಲುವಿಗೆ ಪ್ರಮುಖ ಕಾಣಿಕೆ ನೀಡಿದರು.

 47 ರನ್‌ನಿಂದ ಅಂತಿಮ ದಿನದಾಟ ಆರಂಭಿಸಿದ ಗುಜರಾತ್ ನಿನ್ನೆಯ ಮೊತ್ತಕ್ಕೆ ಒಂದು ರನ್ ಸೇರಿಸುವ ಮೊದಲೇ ಆರಂಭಿಕ ಆಟಗಾರ ಪಾಂಚಾಲ್(34) ವಿಕೆಟ್‌ನ್ನು ಕಳೆದುಕೊಂಡಿತು. ಇನ್ನೋರ್ವ ಆರಂಭಿಕ ಆಟಗಾರ ಗೊಹಿಲ್(21) ಹೆಚ್ಚು ಹೊತ್ತು ನಿಲ್ಲಲಿಲ್ಲ.

ಗುಜರಾತ್ 89 ರನ್‌ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾದ ಪಾರ್ಥಿವ್ ಪಟೇಲ್ ಹಾಗೂ ಜುನೇಜ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 25ನೆ ಶತಕವನ್ನು ಬಾರಿಸಿದ ಪಟೇಲ್ ಔಟಾಗುವಾಗ ಗುಜರಾತ್ ಗೆಲುವಿಗೆ 13 ರನ್ ಅಗತ್ಯವಿತ್ತು. ಭಟ್(27) ಹಾಗೂ ಗಾಂಧಿ(11) 89.5 ಓವರ್‌ಗಳಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X