Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಪ್ರಶಸ್ತಿ ಪಟ್ಟಿಯಲ್ಲಿದ್ದರೂ...

ಪ್ರಶಸ್ತಿ ಪಟ್ಟಿಯಲ್ಲಿದ್ದರೂ ಫಿಲ್ಮ್‌ಫೇರ್ ವಿರುದ್ಧ ಹರಿಹಾಯ್ದ ಸಂಗೀತ ನಿರ್ದೇಶಕ ಅಮಾಲ್

#FilmfareAwardsOnSale

ವಾರ್ತಾಭಾರತಿವಾರ್ತಾಭಾರತಿ14 Jan 2017 5:05 PM IST
share
ಪ್ರಶಸ್ತಿ ಪಟ್ಟಿಯಲ್ಲಿದ್ದರೂ ಫಿಲ್ಮ್‌ಫೇರ್ ವಿರುದ್ಧ ಹರಿಹಾಯ್ದ ಸಂಗೀತ ನಿರ್ದೇಶಕ ಅಮಾಲ್

ಮುಂಬೈ,ಜ.14: ಇತ್ತೀಚಿನ ದಿನಗಳಲ್ಲಿ ಪ್ರಶಸ್ತಿ ಪ್ರದಾನಗಳಲ್ಲಿ ನಡೆಯುತ್ತಿರುವ ಅನ್ಯಾಯಗಳ ಕುರಿತು ಬಹಳಷ್ಟು ಜನರು ಬರೆದಿದ್ದಾರೆ. ಪ್ರತಿಷ್ಠಿತ ಫಿಲ್ಮ್‌ಫೇರ್ ಪ್ರಶಸ್ತಿಗಳಿಗೆ ನಾಮನಿರ್ದೇಶನಗೊಂಡವರ ಪಟ್ಟಿ ಇತ್ತೀಚಿಗೆ ಪ್ರಕಟಗೊಂಡಾಗ ಅಕ್ಷಯ ಕುಮಾರ್ ಮತ್ತು ಮನೋಜ್ ಬಾಜಪೇಯಿ ಅವರು ಅನುಕ್ರಮವಾಗಿ 'ಏರ್‌ಲಿಫ್ಟ್ ' ಮತ್ತು 'ಅಲಿಗಡ 'ಚಿತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿದ್ದರೂ ಅವರನ್ನು ನಾಮ ನಿರ್ದೇಶನಕ್ಕೂ ಪರಿಗಣಿಸದಿರುವ ಬಗ್ಗೆ ಟ್ವಿಟರಿಗರು ತೀವ್ರ ಆಕ್ರೋಶವನ್ನು ಪ್ರಕಟಿಸಿದ್ದರು.

ಬಾಕ್ಸ್ ಆಫೀಸ್‌ನ್ನು ಕೊಳ್ಳೆ ಹೊಡೆದಿರುವ 'ದಂಗಲ್ ' ಚಿತ್ರದಲ್ಲಿನ ತಮ್ಮ ಅಭಿನಯಕ್ಕಾಗಿ ಫಾತಿಮಾ ಸನಾ ಶೇಖ್ ಮತ್ತು ಸಾನ್ಯಾ ಮಲ್ಹೋತ್ರಾ ಅವರು ವಿಮರ್ಶಕರ ಹೊಗಳಿಕೆಗೆ ಪಾತ್ರರಾಗಿದ್ದರೂ ಫಿಲ್ಮ್‌ಫೇರ್ ನಾಮ ನಿರ್ದೇಶನದಿಂದ ವಂಚಿತರಾಗಿದ್ದಾರೆ.

'ಫಿಲ್ಮ್‌ಫೇರ್ ಪ್ರಶಸ್ತಿ ಮಾರಾಟಕ್ಕಿದೆ 'ಎನ್ನುವುದು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆಗಿದೆ. ತನ್ಮಧ್ಯೆ ಸಂಗೀತ ನಿರ್ದೇಶಕ ಅಮಾಲ್ ಮಲಿಕ್ ಅವರು, ನಿಜಕ್ಕೂ ಅರ್ಹರನ್ನು ಗುರುತಿಸದ್ದಕ್ಕಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭಗಳ ವಿರುದ್ಧ ಕೆಂಡ ಕಾರಿದ್ದಾರೆ.

ಫೇಸ್‌ಬುಕ್‌ನಲ್ಲಿ ತೀಕ್ಷ್ಣವಾದ ಬರಹವನ್ನು ಪೋಸ್ಟ್ ಮಾಡಿರುವ ಮಲಿಕ್ ವ್ಯಾಪಕವಾಗಿರುವ ಸ್ವಜನ ಪಕ್ಷಪಾತದ ವಿರುದ್ಧ ಕಟುವಾಗಿ ಟೀಕಿಸಿದ್ದಾರೆ. ನೀವು ಅಡ್ಡದಾರಿಗಿಳಿದು ಉದಯೋನ್ಮುಖ ಪ್ರತಿಭೆ ಪ್ರಶಸ್ತಿಯನ್ನು ತಾರೆಯರ ಮಕ್ಕಳಿಗೇ, ಅವರ ನಟನೆಯನ್ನು ಯಾರೂ ನೋಡಿರದಿದ್ದರೂ....ನೀಡುತ್ತಿರುವುದು ತುಂಬ ಹಾಸ್ಯಾಸ್ಪದವಾಗಿದೆ. ಆ ಪ್ರಶಸ್ತಿಗೆ ಅತ್ಯಂತ ಅರ್ಹರಾಗಿದ್ದ 'ಉಡ್ತಾ ಪಂಜಾಬ್ 'ನ ದಿಲ್ಜಿತ್ ದೋಸಾಂಜ್ ನಿಮ್ಮ ಪಟ್ಟಿಯ ಸಮೀಪವೂ ಇಲ್ಲ. 'ಸರಬ್‌ಜಿತ್' ಚಿತ್ರದಲ್ಲಿ ನಟಿಸಿದ ರಣದೀಪ್ ಹೂಡಾ ಆ ಪಾತ್ರಕ್ಕೆ ಜೀವ ತುಂಬಲು ಎಲುಬಿನ ಗೂಡಾಗಿ ತನ್ನನ್ನೇ ತಾನು ಕೊಂದುಕೊಳ್ಳುವ ಹಂತವನ್ನು ತಲುಪಿದ್ದರು. ಆದರೆ ನೀವು ಐಶ್ವರ್ಯಾ ರೈ ಬಚ್ಚನ್ ಅವರನ್ನು ಮಾತ್ರ ನಾಮ ನಿರ್ದೇಶನಗೊಳಿಸಿದ್ದೀರಿ ಎಂದು ಅವರು ಬೆಟ್ಟು ಮಾಡಿದ್ದಾರೆ.

'ಕಪೂರ್ ಆ್ಯಂಡ್ ಸನ್ಸ್ ' ಮತ್ತು 'ಬಾಘಿ' ಚಿತ್ರಗಳಿಗಾಗಿ ಎರಡು ನಾಮ ನಿರ್ದೇಶನಗಳನ್ನು ಪಡೆದಿರುವ ಮಲಿಕ್ ಸ್ವತಃ ತನ್ನನ್ನೂ ಬಿಟ್ಟಿಲ್ಲ. ''ಬಾಘಿ ಚಿತ್ರಕ್ಕಾಗಿ ನನ್ನ ನಾಮ ನಿರ್ದೇಶನ ನನಗೇ ನಾಚಿಕೆಯನ್ನುಂಟು ಮಾಡಿದೆ. ಈ ಹೇಳಿಕೆಗಾಗಿ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರು ನನ್ನನ್ನು ದ್ವೇಷಿಸಬಹುದು ಎನ್ನುವುದು ನನಗೆ ಗೊತ್ತು.ಆದರೆ ಅದು ಅತ್ಯಂತ ಕಳಪೆ ಮ್ಯೂಸಿಕ್ ಆಲ್ಬಂ ಆಗಿದೆ. ಹೀಗಿದ್ದರೂ ನನ್ನನ್ನು ನಾಮ ನಿರ್ದೇಶನಗೊಳಿಸಿರುವುದು ಮೋಜಿನದಾಗಿದೆ ಎಂದಿದ್ದಾರೆ.

ಚಿತ್ರರಂಗದಲ್ಲಿ ಹಾಲಿ ಕಾರ್ಯ ನಿರ್ವಹಿಸುವವರನ್ನು ನಿರ್ಣಾಯಕರನ್ನಾಗಿ ನೇಮಕಗೊಳಿಸುವ ಪರಿಪಾಠವನ್ನು ಅವರು ಕಟುವಾಗಿ ಟೀಕಿಸಿದ್ದಾರೆ.

ಪ್ರಶಸ್ತಿಗಳು ಹಾಳು ಬಿದ್ದು ಹೋಗಲಿ. ಆದರೆ ಪ್ರತಿವರ್ಷ ಅರ್ಹ, ಪ್ರತಿಭಾವಂತ ರನ್ನಾದರೂ ಆಯ್ಕೆ ಮಾಡಿ. ಹಾಗೆ ಮಾಡದೇ ನೀವು ನಮ್ಮ ಚಿತ್ರೋದ್ಯಮವನ್ನು ಗೇಲಿ ಮಾಡುತ್ತಿದ್ದೀರಿ ಎಂದಿರುವ ಮಲಿಕ್,ಈ ಪೋಸ್ಟ್‌ನ ಬಳಿಕ ನನಗೆಂದೂ ನಾಮ ನಿರ್ದೇಶನ ದೊರೆಯದಿದ್ದರೂ ಸರಿಯೇ. ನಾನು ಯಾವಾಗಲೂ ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ ಮತ್ತು ಅದಕ್ಕೆ ಅಂಟಿಕೊಳ್ಳುತ್ತೇನೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X