Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಸುದೇವನ್ ನಾಯರ್ ವಿರುದ್ದದ ಬಿಜೆಪಿ...

ವಾಸುದೇವನ್ ನಾಯರ್ ವಿರುದ್ದದ ಬಿಜೆಪಿ ಟೀಕೆಗೆ ಪಕ್ಷದ ಮುಖಂಡನಿಂದಲೇ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ14 Jan 2017 7:37 PM IST
share
ವಾಸುದೇವನ್ ನಾಯರ್ ವಿರುದ್ದದ ಬಿಜೆಪಿ ಟೀಕೆಗೆ ಪಕ್ಷದ ಮುಖಂಡನಿಂದಲೇ ಅಸಮಾಧಾನ

ಕಣ್ಣೂರ್,ಜ.14: ಎಂಟಿ ವಾಸುದೇವನ್ ನಾಯರ್, ಅವರನ್ನು ದೂಷಿಸಿಸುವ ಸಂಘಪರಿವಾರದ ನಿಲುವನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಕೇರಳದ ಮಾಜಿ ಅಧ್ಯಕ್ಷ ಸಿಕೆ ಪದ್ಮನಾಭನ್ ಬಹಿರಂಗವಾಗಿ ವಿರೋಧಿಸಿದ್ದಾರೆಂದು ಕೇರಳದ ವೆಬ್‌ಪೋರ್ಟಲೊಂದು ವರದಿಮಾಡಿದೆ.

ಎಂಟಿ ವಾಸುದೇವನ್ ನಾಯರ್, ನಿರ್ದೇಶಕ ಕಮಲ್, ಚೆಗುವೇರಾರ ವಿರುದ್ಧ ಸಂಘಪರಿವಾರ ತಪ್ಪು ನಿಲುವು ವ್ಯಕ್ತಪಡಿಸಿದೆ ಎಂದ ಅವರು, ಕಮಲ್‌ರ ದೇಶ ಪ್ರೇಮವನ್ನು ಯಾರೂಪ್ರಶ್ನಿಸಬೇಕಿಲ್ಲ ಎಂದಿದ್ದಾರೆ.

ಚೆಗುವೇರಾ ಬಗ್ಗೆ ಗೊತ್ತಿಲ್ಲದವರು ಅವರನ್ನು ಟೀಕಿಸುತ್ತಿದ್ದಾರೆ. ನಿರ್ದೇಶಕ ಕಮಲ್ ಪಾಕಿಸ್ತಾನಕ್ಕೆ ಹೋಗಬೇಕು ಎನ್ನುವುದು ಎಎನ್ ರಾಧಾಕೃಷ್ಣನ್‌ರ ವೈಯಕ್ತಿಕ ಹೇಳಿಕೆ. ಕಮಲ್ ದೇಶಪ್ರೇಮಾಧಾರಿತ ಹಲವು ಚಲನಚಿತ್ರಗಳನ್ನು ನಿರ್ದೇಶಿಸಿರುವರು. ಅವರನ್ನು ಪಾಕಿಸ್ತಾನಕ್ಕೆ ಹೋಗಬೇಕು ಎನ್ನುವುದು ಸರಿಯಾದ ನಿಲುವಲ್ಲ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಸಿಕೆ ಪದ್ಮನಾಭನ್ ಪೀಪಲ್ಸ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ನೋಟು, ಅಮಾನ್ಯ ವಿಷಯದಲ್ಲಿ ತನ್ನ ನಿಲುವು ವ್ಯಕ್ತಪಡಿಸಿದ್ದ ವಾಸುದೇವನ್ ನಾಯರ್‌ರನ್ನು ವಿರೋಧಿಸಿದ ಬಿಜೆಪಿ ನಾಯಕರನ್ನು ಸಿಕೆ ಪದ್ಮನಾಭನ್ ಕಟುವಾಗಿ ಟೀಕಿಸಿದ್ದರು. ಎಂಟಿಗೆ ಕಲ್ಲೆಸೆದು ಆತ್ಮತೃಪ್ತಿಅನುಭವಿಸುವವರು ತಮ್ಮನ್ನು ತಿದ್ದಿಕೊಳ್ಳಲಿ ಎಂದು ಪದ್ಮನಾಭನ್ ಹೇಳಿದ್ದಾರೆ.

ಬೊಲಿವಿಯನ್ ಹೋರಾಟದ ನಾಯಕ ಚೆಗುವೇರಾರನ್ನು ವಿರೋಧಿಸುವವರು ಅವರು ಯಾರೆಂದು ಮೊದಲು ಕಲಿಯಲಿ. ಬೊಲಿವಿಯನ್ ಡೈರಿ ಓದಲಿ. ಟೀಕಿಸುವವರು ಚೆಗುವೇರಾರನ್ನು ಆಧ್ಯಯನ ಮಾಡಬೇಕು. ಪೂರ್ವಗ್ರಹಗಳಿಂದಮಾತಾಡಬಾರದು ಎಂದು ಅವರು ಪೀಪಲ್ಸ್ ಟಿವಿಗೆ ತಿಳಿಸಿದ್ದಾರೆ. ನೋಟು ಅಮಾನ್ಯವಿರುದ್ಧ ಮಾತಾಡಿದ ಎಂಟಿ ವಾಸುದೇವನ್ ನಾಯರ್‌ರನ್ನು, ರಾಷ್ಟ್ರಗೀತೆ ವಿಚಾರದಲ್ಲಿ ಚಿತ್ರ ನಿರ್ದೇಶಕ ಕಮಲ್‌ರನ್ನುಕಳೆದ ಕೆಲವು ದಿವಸಗಳಿಂದ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಬಿಜೆಪಿ ನಾಯಕ ರಾಧಾಕೃಷ್ಣನ್ ಇತ್ತೀಚೆಗೆ ಚೆಗುವೇರಾ ವಿರುದ್ಧ ಮಾತಾಡಿದ್ದರು. ಇವೆಲ್ಲವನ್ನು ಕೇರಳ ಬಿಜೆಪಿಯ ಹಿರಿಯ ನಾಯಕ ಸಿಕೆ ಪದ್ಮನಾಭನ್ ವಿರೋಧಿಸಿ ಪೀಪಲ್ಸ್ ಟೀವಿಯಲ್ಲಿ ಮಾತಾಡಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X