Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ನೋಟು ನಿಷೇಧದಿಂದ ನೇಪಾಳಕ್ಕೆ...

ಭಾರತದಲ್ಲಿ ನೋಟು ನಿಷೇಧದಿಂದ ನೇಪಾಳಕ್ಕೆ ತೀವ್ರ ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ14 Jan 2017 8:53 PM IST
share
ಭಾರತದಲ್ಲಿ ನೋಟು ನಿಷೇಧದಿಂದ ನೇಪಾಳಕ್ಕೆ ತೀವ್ರ ಸಂಕಷ್ಟ

ಹೊಸದಿಲ್ಲಿ, ಜ.14: ಭಾರತದ ನೋಟು ನಿಷೇಧ ಕ್ರಮದಿಂದಾಗಿ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಗಂಭೀವಾದ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿದ್ದು, ಸರಕಾರ ಮಾತ್ರವಲ್ಲ, ಸಾಮಾನ್ಯ ಪ್ರಜೆಗಳೂ ಇದರಿಂದ ತೊಂದರೆಗೀಡಾಗಿದ್ದಾರೆಂದು ನೇಪಾಳದ ರಾಯಭಾರಿ ದಿಲೀಪ್ ಕುಮಾರ್ ಉಪಾಧ್ಯಾಯ ತಿಳಿಸಿದ್ದಾರೆ.

   ಹೊಸದಿಲ್ಲಿಯಲ್ಲಿ ಶುಕ್ರವಾರ ‘ದಿ ಹಿಂದೂ’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, ಭಾರತೀಯ ರಿಸರ್ವ್‌ಬ್ಯಾಂಕ್‌ನಿಂದ ನೋಟು ಪೂರೈಕೆಯ ಅಭಾವದ ಹಿನ್ನೆಲೆಯಲ್ಲಿ ನೇಪಾಳ ಸರಕಾರದ ವಾರ್ಷಿಕ ಭಾರತೀಯ ಕರೆನ್ಸಿ ಸಂಗ್ರಹದಲ್ಲಿ ತೀವ್ರ ಕೊರತೆಯುಂಟಾಗಿದೆ ಎಂದರು.

 ‘‘ಭಾರತೀಯ ಕರೆನ್ಸಿಯನ್ನು ನಿಯಮಿತ ಪೂರೈಕೆಗೆ ವಿಶೇಷ ಏರ್ಪಾಡುಗಳನ್ನು ಮಾಡುವಂತೆ ನಾವು ಮನವಿ ಮಾಡಿದ್ದು, ಅದಕ್ಕೆ ಆರ್‌ಬಿಐನಿಂದ ಭರವಸೆಗಳು ದೊರೆತಿವೆ. ಆದರೆ ಪ್ರಸಕ್ತ ಕರೆನ್ಸಿ ಬಿಕ್ಕಟ್ಟಿನಿಂದ ಭಾರೀ ಸಂಖ್ಯೆಯ ನೇಪಾಳಿ ಜನತೆಯಲ್ಲಿ ಅಸಮಾಧಾನ ಹೆಚ್ಚುತ್ತಿರುವುದು ನಮಗೆ ಆತಂಕವುಂಟು ಮಾಡಿದೆ’’ಎಂದರು.

 ನೇಪಾಳದ ದುರ್ಗಮವಾದ ಹಿಮಾಲಯ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ನಾಗರಿಕರು, ತಮ್ಮಲ್ಲಿ ಉಳಿತಾಯವಾಗಿ ಇರಿಸಿದ್ದ ಭಾರತೀಯ ಕರೆನ್ಸಿಗಳನ್ನು ಬದಲಾಯಿಸಲು ಸಾಧ್ಯವಾಗದೆ ಹತಾಶರಾಗಿದ್ದಾರೆಂದು ಉಪಾಧ್ಯಾಯ ತಿಳಿಸಿದರು. ನೋಟು ಅಮಾನ್ಯತೆಯ ಬಗ್ಗೆ ವಿವರಣೆ ಕೇಳಿದ ದುರ್ಗಮ ಪರ್ವತ ಪ್ರದೇಶಗಳಲ್ಲಿರುವ ನೇಪಾಳಿ ಪೌರರಿಂದ ತನಗೆ ಕರೆಗಳು ಬರುತ್ತಿವೆ. ಹಳೆಯ ಭಾರತೀಯ ನೋಟುಗಳನ್ನು ಠೇವಣಿಯಿರಿಸಲು ಭಾರತ ತಮಗೆ ಅವಕಾಶ ನೀಡಬೇಕೆಂದು ಅವರು ಆಗ್ರಹಿಸುತ್ತಿದ್ದಾರೆಂದು ಉಪಾಧ್ಯಾಯ ಹೇಳಿದ್ದಾರೆ.

  ಭಾರತದ ನೋಟು ನಿಷೇಧದಿಂದ ಸಂತ್ರಸ್ತರಾ ನೇಪಾಳಿ ಜನತೆಗೆ ನೆರವಾಗಲು ಕೆಲವು ನಿರ್ದಿಷ್ಟ ನಿಯಮಗಳನ್ನು ರೂಪಿಸುವಂತೆ ನೇಪಾಳ ರಾಷ್ಟ್ರ ಬ್ಯಾಂಕ್, ಭಾರತೀಯ ರಿಸರ್ವ್ ಬ್ಯಾಂಕ್‌ನ್ನು ಕೋರಿರುವುದಾಗಿ ಅವರು ಹೇಳಿದರು. ಉನ್ನತ ವೌಲ್ಯದ ಭಾರತೀಯ ನೋಟುಗಳನ್ನು ನೇಪಾಳಿ ಪ್ರಜೆಗಳು ಉಳಿತಾಯಕ್ಕೆ ಪ್ರಮಾಣಿತವಾದ ಕರೆನ್ಸಿಯೆಂದೇ ಪರಿಗಣಿಸಿದ್ದಾರೆ. ಆದರೆ ಹಠಾತ್ತನೆ 500 ರೂ. ಹಾಗೂ 1 ಸಾವಿರ ರೂ. ನೋಟುಗಳನ್ನು ರದ್ದುಪಡಿಸಿರುವುದು ಸಾಕಷ್ಟು ತೊಂದರೆಗಳನ್ನುಂಟು ಮಾಡಿದೆ ಎಂದರು. ನೋಟು ಅಮಾನ್ಯತೆಯಿಂದ ಉದ್ಭವಿಸಿರುವ ಪ್ರತಿಕೂಲ ಪರಿಣಾಮಗಳನ್ನು ನಿಭಾಯಿಸಲು ಭಾರತವು ಸಮರ್ಪಕವಾದ ಕ್ರಮಗಳನ್ನು ಕೈಗೊಂಡಿಲ್ಲವೆಂದು ಅವರು ಅಭಿಪ್ರಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X