Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ ಸಂತ್ರಸ್ತ ಗಿರಿಜನ ಕುಟುಂಬಗಳಿಗೆ...

​ ಸಂತ್ರಸ್ತ ಗಿರಿಜನ ಕುಟುಂಬಗಳಿಗೆ ದಿಡ್ಡಳ್ಳಿಯಲ್ಲೇ ಜಾಗ ಒದಗಿಸಲು ಆಗ್ರಹ: ಎ.ಕೆ. ಸುಬ್ಬಯ್ಯ

ವಾರ್ತಾಭಾರತಿವಾರ್ತಾಭಾರತಿ14 Jan 2017 11:05 PM IST
share
​ ಸಂತ್ರಸ್ತ ಗಿರಿಜನ ಕುಟುಂಬಗಳಿಗೆ ದಿಡ್ಡಳ್ಳಿಯಲ್ಲೇ ಜಾಗ ಒದಗಿಸಲು ಆಗ್ರಹ: ಎ.ಕೆ. ಸುಬ್ಬಯ್ಯ

ಮಡಿಕೇರಿ,ಜ.14: ಸಿದ್ದಾಪುರ ಸಮೀಪದ ದಿಡ್ಡಳ್ಳಿಯಲ್ಲಿ ನೆಲೆಸಿರುವ ಆದಿವಾಸಿ ನಿವೇಶನ ರಹಿತ ಕುಟುಂಬಗಳಿಗೆ ಅದೇ ಸ್ಥಳದಲ್ಲಿ ನಿವೇಶನಗಳನ್ನು ಒದಗಿಸಬೇಕೆಂದು ಆದಿವಾಸಿಗಳ ಭೂಮಿ ವಸತಿ ಹೋರಾಟ ಸಮಿತಿಯ ಪ್ರಮುಖ ಎ.ಕೆ. ಸುಬ್ಬಯ್ಯ ಅವರು ದೃಢಪಡಿಸುವುದರೊಂದಿಗೆ, ದಿಡ್ಡಳ್ಳಿಯ ಆದಿವಾಸಿ ಕುಟುಂಬಗಳಿಗೆ ಹೊರ ಭಾಗದಲ್ಲಿ ನಿವೇಶನ ನೀಡುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.


ನಗರದ ಕಮ್ಯೂನಿಟಿ ಸಭಾಂಗಣದಲ್ಲಿ ಆದಿವಾಸಿಗಳ ಭೂಮಿ ವಸತಿ ಹೋರಾಟ ಸಮಿತಿಯ ವತಿಯಿಂದ ವಿವಿಧ ಜನಪರ ಹೋರಾಟ ಸಂಘಟನೆಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಿವಾಸಿಗಳ ಗುಡಿಸಲು ತೆರವು ಗೊಳಿಸಿದ ದಿಡ್ಡಳ್ಳಿ ಪ್ರದೇಶ ಮೀಸಲು ಅರಣ್ಯವೆಂದು ತಿಳಿಸುವ ಮೂಲಕ ಹೋರಾಟದ ಹಾದಿ ತಪ್ಪಿಸುವ ಪ್ರಯತ್ನ ನಡೆದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಮುಂದಾಳತ್ವದಲ್ಲಿ ಆ ಜಾಗದ ಕುರಿತಾದ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕೆಂದು ಸ್ಪಷ್ಟಪಡಿಸಿದರು.


ದಿಡ್ಡಳ್ಳಿಯ ಗುಡಿಸಲು ತೆರವುಗೊಳಿಸಿರುವ ಪ್ರದೇಶ ಸರ್ವೇ ನಂಬರ್ 106/7ಎ ಯಲ್ಲಿ ಮತ್ತು ಇದರಲ್ಲಿ 8,500 ಎಕರೆ ಪೈಸಾರಿ ಜಾಗವಿದ್ದು, 300 ರಿಂದ 400 ಎಕರೆ ಕಾಫಿ ತೋಟ ಸೇರಿದಂತೆ ಸರಾಸರಿ 80 ಆದಿವಾಸಿ ಕುಟುಂಬಗಳನ್ನು ಒಳಗೊಂಡ 9 ಗಿರಿಜನ ಹಾಡಿಗಳಿವೆ. ಆರ್‌ಟಿಸಿಯಲ್ಲಿ ದಿಡ್ಡಳ್ಳಿಯ ಜಾಗವನ್ನು ಅರಣ್ಯ ಪೈಸಾರಿ ಎಂದು ತೋರಿಸಲಾಗಿದ್ದರೂ, ಅಂತಹ ಒಂದು ಭೂ ವರ್ಗವೆ ಇಲ್ಲವೆಂದು ಸ್ಪಷ್ಟಪಡಿಸಿ, ದಿಡ್ಡಳ್ಳಿ ಜಾಗದ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಇತ್ಯರ್ಥಪಡಿಸಿ ನಿವೇಶನ ರಹಿತ ಆದಿವಾಸಿಗಳಿಗೆ ಜಾಗ ಒದಗಿಸುವಂತೆ ಆಗ್ರಹಿಸಿದರು.


 ದಿಡ್ಡಳ್ಳಿಯ ಆದಿವಾಸಿ ಕುಟುಂಬಗಳಿಗೆ ವಿತರಿಸಲು ಜಿಲ್ಲೆಯ ವಿವಿಧೆಡೆಗಳಲ್ಲಿ ಗುರುತಿಸಿರುವ ಜಾಗವನ್ನು ಆಯಾ ಪ್ರದೇಶದ ಆದಿವಾಸಿಗಳಿಗೆ ನೀಡುವಂತೆ ಎ.ಕೆ. ಸುಬ್ಬಯ್ಯ ಸಲಹೆ ನೀಡಿದರಲ್ಲದೆ, ಪ್ರಶ್ನೆಯೊಂದಕ್ಕೆ ಉತ್ತರಿಸಿ, ಒಂದೊಮ್ಮೆ ದಿಡ್ಡಳ್ಳಿಯಲ್ಲಿ ನೆಲೆಸಿರುವ ಗಿರಿಜನರಲ್ಲಿ ಯಾರಾದರು ಸರಕಾರ ಒದಗಿಸುವ ನಿವೇಶನಕ್ಕೆ ತೆರಳಲು ಆಸಕ್ತಿ ಹೊಂದಿದ್ದಲ್ಲಿ ತಮ್ಮ ಅಭ್ಯಂತರವಿಲ್ಲವೆಂದು ಸ್ಪಷ್ಟಪಡಿಸಿದರು.


ಜಿಲ್ಲಾ ಸಮಿತಿ ರಚನೆ: ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಜಿಲ್ಲಾ ಸಮಿತಿಯನ್ನು ರಚಿಸಿಕೊಳ್ಳಲಾಗಿದೆಯೆಂದು ಎ.ಕೆ. ಸುಬ್ಬಯ್ಯ ತಿಳಿಸಿದರು.
ಸಮಿತಿ 22 ಮಂದಿ ಸದಸ್ಯರನ್ನು ಒಳಗೊಂಡಿದ್ದು, ಡಿ.ಎಸ್. ನಿರ್ವಾಣಪ್ಪ ಅವರು ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಮುಂದಿನ ಮಾರ್ಚ್ ಮೊದಲು ಇಲ್ಲವೆ ಎರಡನೆ ವಾರದಲ್ಲಿ ಜಿಲ್ಲೆಯ ಆದಿವಾಸಿಗಳು ಮತ್ತು ದಲಿತರ ಬೃಹತ್ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆಯೆಂದು ಸ್ಪಷ್ಟಪಡಿಸಿದರು.
ಉನ್ನತ ಮಟ್ಟದ ತನಿಖೆಯಾಗಲಿ- ಸಮಿತಿಯ ಪ್ರಮುಖರಾದ ಸಿರಿಮನೆ ನಾಗರಾಜು ಮಾತನಾಡಿ, ದಿಡ್ಡಳ್ಳಿಯಲ್ಲಿ ಆದಿವಾಸಿಗಳ ಮೇಲೆ ದೌರ್ಜನ್ಯವೆಸಗಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಪ್ರಮುಖರಾದ ಡಿಎಸ್. ನಿರ್ವಾಣಪ್ಪ, ಅಮಿನ್ ಮೊಹಿಸಿನ್, ಜೆ.ಕೆ. ಅಪ್ಪಾಜಿ, ಮುತ್ತಮ್ಮ, ಪ್ರೇಮ್ ಕುಮಾರ್, ವಸಂತ್, ಕೆ.ಬಿ. ರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X