ಉಡುಪಿ: ಮೂರು ತೇರು ಉತ್ಸವ
ಮೂರು ತೇರು ಉತ್ಸವ: ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಸಪ್ತೋತ್ಸವದ ಆರನೆ ದಿನವಾದ ಶನಿವಾರ ರಾತ್ರಿ ಮಕರ ಸಂಕ್ರಾಂತಿಯ ಅಂಗವಾಗಿ ಪರ್ಯಾಯ ಪೇಜಾವರ ಮಠಾೀಶ ಶ್ರೀವಿಶ್ವೇಶತೀರ್ಥರ ನೇತೃತ್ವದಲ್ಲಿ ಆಕರ್ಷಕ ಮೂರು ತೇರು ಉತ್ಸವ ನಡೆಯಿತು. ರಥಗಳ ಮುಂದೆ ವರ್ಣವೈವಿಧ್ಯ ಅತ್ಯಾಕರ್ಷಕ ಸುಡುಮದ್ದು ಗಳನ್ನು ಸಿಡಿಸಿ ಆಕಾಶದಲ್ಲಿ ಬಣ್ಣಗಳ ಚಿತ್ತಾರವನ್ನು ಮೂಡಿಸಲಾಯಿತು. ರವಿವಾರ ಬೆಳಗ್ಗೆ 9:30ಕ್ಕೆ ಹಗಲು ರಥೋತ್ಸವ, ಚೂರ್ಣೋತ್ಸವದೊಂದಿಗೆ ಒಂದು ವಾರದ ಸಪ್ತೋತ್ಸವ ಮುಕ್ತಾಯಗೊಳ್ಳಲಿದೆ.
Next Story





