Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ನಿಷೇಧವಿದ್ದರೂ ನಡೆದ...

ಸುಪ್ರೀಂ ನಿಷೇಧವಿದ್ದರೂ ನಡೆದ ಜಲ್ಲಿಕಟ್ಟು

ವಾರ್ತಾಭಾರತಿವಾರ್ತಾಭಾರತಿ15 Jan 2017 9:19 PM IST
share
ಸುಪ್ರೀಂ ನಿಷೇಧವಿದ್ದರೂ ನಡೆದ ಜಲ್ಲಿಕಟ್ಟು

ಮದುರೈ,ಜ.15: ಜಲ್ಲಿಕಟ್ಟು ನಡೆಸಲು ಅನುಮತಿಗೆ ಆಗ್ರಹಿಸಿ ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ ರವಿವಾರ ಮದುರೈ ಜಿಲ್ಲೆಯ ಹಲವೆಡೆಗಳಲ್ಲಿ ಸರ್ವೋಚ್ಚ ನ್ಯಾಯಾಲಯದ ನಿಷೇಧವನ್ನು ಉಲ್ಲಂಘಿಸಿ ಈ ಗೂಳಿಕ್ರೀಡೆಯನ್ನು ನಡೆಸಲಾಗಿದೆ.

ಜಿಲ್ಲೆಯ ಪಲಮೇಡು ಎಂಬಲ್ಲಿ ಪೂಜೆಯನ್ನು ಸಲ್ಲಿಸಿದ ಬಳಿಕ ದೇವಸ್ಥಾನದ ಆರು ಗೂಳಿಗಳನ್ನು ಜಲ್ಲಿಕಟ್ಟು ನಡೆಯುವ ಸ್ಥಳದ ಪ್ರವೇಶದ್ವಾರ ‘ವಡಿ ವಸಲ್ ’ಬಳಿ ಕರೆತರಲಾಗಿತ್ತು. ವಡಿ ವಸಲ್ ಸುತ್ತ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸುವ ಜೊತೆಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.
 ಗೂಳಿಗಳಿಗೆ ಕಟ್ಟಿದ್ದ ಹಗ್ಗಗಳನ್ನು ಬಿಚ್ಚಿದಾಗ ಪಲಮೇಡುವಿನಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಿತ್ತು. ಪ್ರದೇಶದಲ್ಲಿ ರಕ್ಷಣೆಗಾಗಿ ನೂರಾರು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಎಲ್ಲ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ಜಲ್ಲಿಕಟ್ಟು ಮೇಲಿನ ನಿಷೇಧವನ್ನು ವಿರೋಧಿಸಿ ಮನೆಗಳ ಮೇಲೆ ಕಪ್ಪು ಬಾವುಟಗಳನ್ನು ಹಾರಿಸಲಾಗಿತ್ತು.

ಆರು ಗೂಳಿಗಳನ್ನು ಪೂಜೆಗಾಗಿ ಸ್ಥಳಕ್ಕೆ ತರಲಾಗಿತ್ತು. ಮೊದಲಿಗೆ ಮೂರು ಗೂಳಿಗಳ ಹಗ್ಗಗಳನ್ನು ಸಂಘಟಕರು ಬಿಚ್ಚಿದ್ದರು. ಯಾವುದೇ ಗೂಳಿಯನ್ನು ವಡಿ ವಸಲ್ ಮೂಲಕ ಒಳಕ್ಕೆ ಬಿಟ್ಟಿರಲಿಲ್ಲ. ಹೀಗಾಗಿ ಇದನ್ನು ನಿಜಕ್ಕೂ ಜಲ್ಲಿಕಟ್ಟು ಎಂದು ಕರೆಯಲಾಗದು. ಗೂಲಿಗಳ ಮಾಲಕರನ್ನು ಪತ್ತೆ ಹಚ್ಚಲು ನಾವು ಪ್ರಯತ್ನಿಸುತ್ತಿದ್ದೇವೆ ಮತ್ತು ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ ಎಂದು ಎಸ್‌ಪಿ ವಿಜಯೇಂದ್ರ ಎಸ್.ಬಿದರಿ ತಿಳಿಸಿದರು.

ಉಥಪನೈಕನೂರ್‌ನಲ್ಲಿ ಜಲ್ಲಿಕಟ್ಟು ನಡೆಸಿದ್ದಕ್ಕಾಗಿ ಮೂವರನ್ನು ಬಂಧಿಸಲಾಗಿದೆ. ಇದೇ ರೀತಿ ರಾಜ್ಯಾದ್ಯಂತ 40 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದರು.

ತನ್ಮಧ್ಯೆ ರವಿವಾರ ನಗರ ವ್ಯಾಪ್ತಿಯಲ್ಲಿ ನಿಷೇಧವಿದ್ದರೂ ಸುಮಾರು 20 ಗೂಳಿಗಳನ್ನು ಬಿಡಲಾಗಿತ್ತು. ಪಳಂಗನಾಥಂ ಮತ್ತು ವಿಲಂಗುಡಿಯಲ್ಲಿಯೂ ಜಲ್ಲಿಕಟ್ಟು ನಡೆದಿದ್ದವು ಎಂದು ಮೂಲಗಳು ತಿಳಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X