Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಖಿಲೇಶ್ ವಿರುದ್ಧ ನಾನೇ ಸ್ಪರ್ಧಿಸಬಹುದು:...

ಅಖಿಲೇಶ್ ವಿರುದ್ಧ ನಾನೇ ಸ್ಪರ್ಧಿಸಬಹುದು: ಮುಲಾಯಂ

ವಾರ್ತಾಭಾರತಿವಾರ್ತಾಭಾರತಿ16 Jan 2017 5:20 PM IST
share
ಅಖಿಲೇಶ್ ವಿರುದ್ಧ ನಾನೇ ಸ್ಪರ್ಧಿಸಬಹುದು: ಮುಲಾಯಂ

ಲಕ್ನೋ,ಜ.16: ಉತ್ತರ ಪ್ರದೇಶವನ್ನಾಳುತ್ತಿರುವ ಕುಟುಂಬದಲ್ಲಿ ಪರಮಾಧಿಕಾರಕ್ಕಾಗಿ ನಡೆಯುತ್ತಿರುವ ಹಣಾಹಣಿಯ ನಡುವೆಯೇ ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ ಅವರಿಂದು, ಮುಖ್ಯಮಂತ್ರಿ ಅಖಿಲೇಶ್ ಯಾದವ ಮುಸ್ಲಿಮರ ಬಗ್ಗೆ ನಕಾರಾತ್ಮಕ ನಿಲುವು ಹೊಂದಿದ್ದಾರೆಂದು ಆರೋಪಿಸಿದರು. ಪುತ್ರ ಅಖಿಲೇಶ್ ತನ್ನ ಸಲಹೆಗೆ ಕಿವಿಗೊಡದಿದ್ದರೆ ಚುನಾವಣೆಯಲ್ಲಿ ಅವರ ವಿರುದ್ಧ ತಾನೇ ಸ್ಪರ್ಧಿಸುವುದಾಗಿ ಹೇಳಿದರು.

ಇಲ್ಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು ಅಖಿಲೇಶ್ ವಿರುದ್ಧ ತೀವ್ರ ದಾಳಿ ನಡೆಸಿದರು. ತಾನು ಸದಾ ಮುಸ್ಲಿಮರ ಹಿತಾಸಕ್ತಿಗಳನ್ನು ಪ್ರತಿಪಾದಿಸುತ್ತ ಬಂದಿದ್ದೇನೆ. ರಾಜ್ಯದ ಪೊಲೀಸ್ ಮುಖ್ಯಸ್ಥರಾಗಿ ಮುಸ್ಲಿಮ್ ವ್ಯಕ್ತಿಯೋರ್ವರು ನೇಮಕಗೊಳ್ಳುವಂತೆ ತಾನು ನೋಡಿಕೊಂಡಿದ್ದೆ. ಇದಕ್ಕಾಗಿ ಅಖಿಲೇಶ್ 15 ದಿನಗಳ ಕಾಲ ತನ್ನೊಂದಿಗೆ ಮಾತನಾಡಿರಲಿಲ್ಲ. ಅವರು ಈ ಹುದ್ದೆಯಲ್ಲಿ ಮುಸ್ಲಿಮ್ ವ್ಯಕ್ತಿಯನ್ನು ಇಷ್ಟಪಟ್ಟಿರಲಿಲ್ಲ. ಅದು ಮುಸ್ಲಿಮ್ ವಿರೋಧಿ ಸಂದೇಶವನ್ನು ರವಾನಿಸಿತ್ತು ಎಂದು ಅವರು ಆರೋಪಿಸಿದರು. 

ಅಖಿಲೇಶ್ ಮುಸ್ಲಿಮರ ಬಗ್ಗೆ ನಕಾರಾತ್ಮಕ ಧೋರಣೆಯನ್ನು ಹೊಂದಿದ್ದಾರೆ. ಬಿಜೆಪಿ ನಿರ್ದೇಶದಂತೆ ಕಾರ್ಯಾಚರಿಸುತ್ತಿರುವ ರಾಮಗೋಪಾಲ್ ಯಾದವ ಅವರು ಅಖಿಲೇಶ್‌ರನ್ನು ಆಡಿಸುತ್ತಿದ್ದಾರೆ ಎಂದೂ ಮುಲಾಯಂ ಆಪಾದಿಸಿದರು.

ತಾನು ಮುಸ್ಲಿಮರಿಗಾಗಿ ಬದುಕುತ್ತೇನೆ ಮತ್ತು ಮುಸ್ಲಿಮರ ಹಿತಾಸಕ್ತಿಯ ಪ್ರಶ್ನೆ ಎದುರಾದಾಗ ತಾನು ಅಖಿಲೇಶ್ ವಿರುದ್ಧವೂ ಹೋರಾಡುತ್ತೇನೆ ಎಂದರು.
ಪಕ್ಷವನ್ನು ಕಟ್ಟಲು ತಾನು ಬಹಳಷ್ಟು ತ್ಯಾಗಗಳನ್ನು ಮಾಡಿದ್ದೇನೆ. ಅಖಿಲೇಶ್ ತನ್ನ ಮಾತುಗಳನ್ನು ಕೇಳುತ್ತಿಲ್ಲ. ಮಹಿಳೆ ಸೇರಿದಂತೆ ಹಲವಾರು ಸಚಿವರನ್ನು ಅವರು ವಜಾ ಮಾಡಿದ್ದಾರೆ. ಹಿರಿಯ ಸಚಿವರನ್ನು ಯಾವುದೇ ಕಾರಣವಿಲ್ಲದೆ ಕಿತ್ತುಹಾಕಲಾಗಿದೆ ಎಂದು ಮುಲಾಯಂ ಕಿಡಿ ಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X