Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಮಾಜಿಕ ಮಾಧ್ಯಮಗಳ ಬಳಸಲು ಮಾಜಿ...

ಸಾಮಾಜಿಕ ಮಾಧ್ಯಮಗಳ ಬಳಸಲು ಮಾಜಿ ಸೈನಿಕರಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Jan 2017 5:26 PM IST
share

ಮಂಗಳೂರು, ಜ.16: ಮಾಜಿ ಸೈನಿಕರು ತಮ್ಮ ಸಮಸ್ಯೆಗಳನ್ನು ಮಾಜಿ ಸೈನಿಕರ ಅಸೋಶಿಯೇಶನ್‌ಗೆ ತಿಳಿಸುವುದರ ಮೂಲಕ ಬಗೆಹರಿಸಿಕೊಳ್ಳಬಹುದು. ಆಧುನಿಕ ಯುಗದ ಸಾಮಾಜಿಕ ಮಾಧ್ಯಮಗಳನ್ನು ಮಾಜಿ ಸೈನಿಕರು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮಾಜಿ ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕ ಬ್ರಿಗೇಡಿಯರ್ ಎಸ್.ಬಿ. ಸಾಜನ್ ತಿಳಿಸಿದರು.

ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ದ.ಕ. ಜಿಲ್ಲಾ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ ಮಾಜಿ ಸೈನಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಸೈನಿಕರಿಗೆ ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಹೆಚ್ಚು ಅವಕಾಶಗಳಿದ್ದರೂ ಸರಕಾರಿ ನೌಕರಿಗೆ ದುಂಬಾಲು ಬೀಳುತ್ತಿದ್ದಾರೆ. ಹಾಗಾಗಿ ನಿವೃತ್ತಿಯಾಗುವ ಒಂದು ವರ್ಷದ ಮೊದಲು ಅಗತ್ಯ ಕೆಲಸಕ್ಕೆ ತಕ್ಕಂತೆ ಸ್ಕಿಲ್ಸ್‌ಗಳನ್ನು ಬೆಳೆಸಿಕೊಂಡಾಗ ನೌಕರಿಯನ್ನು ಸುಲಭವಾಗಿ ಪಡೆಯಬಹುದು ಎಂದು ಎಸ್.ಬಿ. ಸಾಜನ್ ಸಲಹೆ ನೀಡಿದರು.

ಭಾರತೀಯ ಸೈನ್ಯದಲ್ಲಿ ಯುವ ಜನರ ಸಂಖ್ಯೆ ಹೆಚ್ಚಿದ್ದು, ಜಿಲ್ಲೆಯಲ್ಲಿರುವ ಸೈನಿಕರಿಗೆ ಸರ್ಟಿಫಿಕೇಟ್ ಕೋರ್ಸ್, ಎಂಬಿಎ, ಬಿ.ಇ., ಮೆಡಿಕಲ್ ಡಿಗ್ರಿ ಕೋರ್ಸ್‌ಗಳನ್ನು ಮಾಡಲು ಸಲಹೆಯನ್ನು ನೀಡುವ ಅಗತ್ಯವಿದೆ. ಅಗತ್ಯ ವಿದ್ಯಾಭ್ಯಾಸ ಹೊಂದಿದ್ದಲ್ಲಿ ನಿವೃತ್ತಿ ಹೊಂದುವ ವೇಳೆಗೆ ಸುಲಭವಾಗಿ ನೌಕರಿಯನ್ನು ಪಡೆದುಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ ಎಂದು ತಿಳಿಸಿದರು.

ಕೆಪಿಎಸ್ಸಿ, ಮೆಡಿಕಲ್, ಎಂಬಿಎ ಹಲವಾರಿ ಕ್ಷೇತ್ರಗಳಲ್ಲಿ ಹೇರಳವಾದ ಅವಕಾಶಗಳಿದ್ದು, ಮಾಜಿ ಸೈನಿಕರಿಗೆ ಶೇ.10ರಷ್ಟು ಮೀಸಲಾತಿಯನ್ನು ಸರಕಾರ ಕಲ್ಪಿಸಿದೆ. ಹಲವು ವರ್ಷಗಳಿಂದ ಸೈನ್ಯಕ್ಕೆ ಸೇರುವವರ ಸಂಖ್ಯೆ ಕ್ಷೀಣಿಸುತ್ತಿದೆ. ಸೈನ್ಯಕ್ಕೆ ಸೇರಲು ಪ್ರೇರಣೆ ನೀಡುವುದು ಎಲ್ಲರ ಕರ್ತವ್ಯವಾಗಿದೆ. ಮಾಜಿ ಸೈನಿಕರ ಸಮಸ್ಯೆಗಳೆನಿದ್ದರೂ ಅಸೋಶಿಯೇಶನ್‌ಗೆ ತಿಳಿಸುವ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್ ಮಾತನಾಡಿದರು. ಈ ಸಂದರ್ಭ ಲೆಫ್ಟಿನೆಂಟ್ ಕಮಾಂಡರ್ ಜಿ.ಪಿ. ಮಾಸ್ಕರೆನ್ಹಾಸ್, ಸುಬೇದಾರ್ ಡಿಸೋಜ, ಫ್ರಾನ್ಸಿಸ್ ಡಿ ಅಲ್ಮೇಡಾ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಅಸೋಶಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಐರನ್, ಕೋಶಾಧಿಕಾರಿ ಕರ್ನಲ್ ಎನ್. ಬಾಲಕೃಷ್ಣ, ಕಾರ್ಯದರ್ಶಿ ಭಗವಾನ್ ಶೆಟ್ಟಿ, ಐ.ಎನ್. ರೈ, ಶರತ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X