Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ : ನಗರಸಭೆಯಲ್ಲಿ ಕಾಂಗ್ರೆಸ್ ಕೈ...

ಮಡಿಕೇರಿ : ನಗರಸಭೆಯಲ್ಲಿ ಕಾಂಗ್ರೆಸ್ ಕೈ ಜಾರಿದ ಸ್ಥಾಯಿ ಸಮಿತಿ - ಚುನಾವಣೆಯಲ್ಲಿ ಬಿಜೆಪಿ ಮೇಲುಗೈ

ವಾರ್ತಾಭಾರತಿವಾರ್ತಾಭಾರತಿ16 Jan 2017 6:43 PM IST
share

ಮಡಿಕೇರಿ ಜ.16 : ನಗರಸಭೆಯ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಆಡಳಿತಾ ರೂಢ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಬಿಜೆಪಿ ಏಳು ಸ್ಥಾನಗಳನ್ನು ಪಡೆಯುವ ಮೂಲಕ ಮೇಲುಗೈ ಸಾಧಿಸಿದೆ. ಕಾಂಗ್ರೆಸ್‌ನ ಕೆಲವು ಸದಸ್ಯರು ಬಿಜೆಪಿ ಪಾಳಯಕ್ಕೆ ಮತದಾನ ಮಾಡಿದ ಕಾರಣ ಕೇವಲ ಮೂರು ಸ್ಥಾನಗಳನ್ನಷ್ಟೇ ಪಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಕಾಂಗ್ರೆಸ್ ಬೆಂಬಲಿತ ಎಸ್‌ಡಿಪಿಐ ಒಂದು ಸ್ಥಾನ ಗಳಿಸಿದೆ.
ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಯ ಒಟ್ಟು 11 ಸ್ಥಾನಗಳ ಹಂಚಿಕೆಯಲ್ಲಿ ಒಮ್ಮತ ಮೂಡದ ಕಾರಣ ಅನಿವಾರ್ಯವಾಗಿ ಗುಪ್ತ ಮತದಾನ ಪ್ರಕ್ರಿಯೆ ನಡೆಸಬೇಕಾಯಿತು.
 ಕಾಂಗ್ರೆಸ್‌ನಿಂದ ಚುಮ್ಮಿ ದೇವಯ್ಯ, ಕೆ.ಎಂ.ಗಣೇಶ್, ಜುಲೆಕಾಬಿ, ಹೆಚ್.ಎಂ.ನಂದಕುಮಾರ್, ಎ.ಎಸ್.ಪ್ರಕಾಶ್ ಆಚಾರ್ಯ, ಲೀಲಾಶೇಷಮ್ಮ, ತಜಸುಂ ಹಾಗೂ ಕಾಂಗ್ರೆಸ್ ಬೆಂಬಲಿತ ಎಸ್‌ಡಿಪಿಐ ನ ಸದಸ್ಯರಾದ ಅಮಿನ್ ಮೊಹಿಸಿನ್, ಮನ್ಸೂರ್, ಕೆ.ಜಿ.ಪೀಟರ್, ನೀಮಾ ಅರ್ಶದ್ ಹೀಗೆ ಒಟ್ಟು 11 ಮಂದಿ ಕಣದಲ್ಲಿದ್ದರು.
ಬಿಜೆಪಿಯಿಂದ ಅನಿತಾ ಪೂವಯ್ಯ, ಲಕ್ಷ್ಮೀ, ಪಿ.ಡಿ.ಪೊನ್ನಪ್ಪ, ಕೆ.ಎಸ್.ರಮೇಶ್, ಸವಿತಾ ರಾಕೇಶ್, ಶಿವಕುಮಾರಿ ಹಾಗೂ ಪಿ.ಟಿ.ಉಣ್ಣಿಕೃಷ್ಣ ಸ್ಪರ್ಧೆಯಲ್ಲಿದ್ದರು. ಹೀಗೆ ಒಟ್ಟು 18 ಮಂದಿ ಚುನಾವಣೆಯನ್ನು ಎದುರಿಸಿದರು.
 ಗುಪ್ತ ಮತದಾನದಲ್ಲಿ ಚುಮ್ಮಿ ದೇವಯ್ಯ 13, ಕೆ.ಎಂ.ಗಣೇಶ್ 13, ಜುಲೆಕಾಬಿ 13, ಹೆಚ್.ಎಂ.ನಂದಕುಮಾರ್ 12, ಎ.ಎಸ್.ಪ್ರಕಾಶ್ ಆಚಾರ್ಯ 12, ಲೀಲಾಶೇಷಮ್ಮ 12, ತಜಸುಂ 11, ಎಸ್‌ಡಿಪಿಐ ನ ಅಮಿನ್ ಮೊಹಿಸಿನ್ 11, ಮನ್ಸೂರ್ 13, ಕೆ.ಜಿ.ಪೀಟರ್ 14, ಹಾಗೂ ನೀಮಾ ಅರ್ಶದ್ 13 ಮತಗಳನ್ನು ಪಡೆದರು.
ಬಿಜೆಪಿಯ ಅನಿತಾ ಪೂವಯ್ಯ ಅತ್ಯಧಿಕ 16, ಲಕ್ಷ್ಮೀ 13, ಪಿ.ಡಿ.ಪೊನ್ನಪ್ಪ 14, ಕೆ.ಎಸ್.ರಮೇಶ್ 14, ಸವಿತಾ ರಾಕೇಶ್ 13, ಶಿವಕುಮಾರಿ 14 ಹಾಗೂ ಪಿ.ಟಿ.ಉಣ್ಣಿಕೃಷ್ಣನ್ 14 ಮತಗಳನ್ನು ಪಡೆದರು.

ಅಧಿಕ ಮತಗಳಿಸಿದ ಆಧಾರದಲ್ಲಿ ಬಿಜೆಪಿಯ ಅನಿತಾ ಪೂವಯ್ಯ, ಪಿ.ಡಿ.ಪೊನ್ನಪ್ಪ, ಕೆ.ಎಸ್.ರಮೇಶ್, ಶಿವಕುಮಾರಿ, ಪಿ.ಟಿ.ಉಣ್ಣಿಕೃಷ್ಣ ಹಾಗೂ ಕೆ.ಜಿ.ಪೀಟರ್ ಸೇರಿದಂತೆ ಆರು ಮಂದಿ ಸ್ಥಾಯಿ ಸಮಿತಿಗೆ ಆಯ್ಕೆಯಾದರು. ಮತ ಗಳಿಕೆಯಲ್ಲಿ ಎರಡನೇ ಸ್ಥಾನದಲ್ಲಿದ್ದ ಏಳು ಮಂದಿ ತಲಾ 13 ಮತಗಳನ್ನು ಪಡೆದ ಕಾರಣ ಉಳಿದ ಐದು ಮಂದಿಯ ಆಯ್ಕೆಗಾಗಿ ಲಾಟರಿ ಮೊರೆ ಹೋಗಬೇಕಾಯಿತು. ಬಿಜೆಪಿಯ ಲಕ್ಷ್ಮೀ, ಸವಿತಾ ರಾಕೇಶ್, ಕಾಂಗ್ರೆಸ್‌ನ ಕೆ.ಎಂ.ಗಣೇಶ್, ಜುಲೇಕಾಬಿ ಹಾಗೂ ಚುಮ್ಮಿದೇವಯ್ಯ ಲಾಟರಿ ಮೂಲಕ ಆಯ್ಕೆಯಾದರು.
ಇಲ್ಲೂ ಅದೃಷ್ಟ ಬಿಜೆಪಿ ಪರವಾಗಿದ್ದ ಕಾರಣ ಬಿಜೆಪಿ ಒಟ್ಟು 7 ಸ್ಥಾನಗಳನ್ನು ತನ್ನದಾಗಿಸಿಕೊಂಡಿತು. ಕಾಂಗ್ರೆಸ್ ಕೇವಲ 3 ಸ್ಥಾನಗಳಿಗೆ ಹಾಗೂ ಎಸ್‌ಡಿಪಿಐ ಒಂದು ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.

ಪೌರಾಯುಕ್ತರಾದ ಬಿ.ಶುಭ ಅವರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಚುನಾವಣೆಯಲ್ಲಿ ಒಟ್ಟು 11 ಸದಸ್ಯ ಸ್ಥಾನಗಳಿಗಾಗಿ ಸ್ಪರ್ಧಿಸಿದ್ದ 18 ಮಂದಿಗೆ 27 ಮಂದಿ ಮತದಾನ ಮಾಡಬೇಕಾಗಿತ್ತಾದರೂ ಕಾಂಗ್ರೆಸ್ ಸದಸ್ಯೆ ವೀಣಾಕ್ಷಿ ಹಾಗೂ ಜೆಡಿಎಸ್ ಸದಸ್ಯೆ ಸಂಗೀತಾ ಪ್ರಸನ್ನ ಗೈರು ಹಾಜರಾದ ಕಾರಣ 25 ಮಂದಿ ಮತದಾನ ಮಾಡಿದರು. ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಹಾಗೂ ವೀಣಾಅಚ್ಚಯ್ಯ ಮತದಾನದಲ್ಲಿ ಪಾಲ್ಗೊಂಡು ಫಲಿತಾಂಶದ ಕುತೂಹಲಕ್ಕೆ ಕಾರಣಕರ್ತರಾದರು.
ನಗರಸಭಾ ಅಧ್ಯಕ್ಷರ ಆಯ್ಕೆ ಸಂದರ್ಭ ಗೈರು ಹಾಜರಾಗಿ ಬಿಜೆಪಿ ಕಾರ್ಯಕರ್ತರಿಂದ ಟೀಕೆಗೆ ಗುರಿಯಾಗಿದ್ದ ಸಂಸದ ಪ್ರತಾಪ್ ಸಿಂಹ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಹಾಜರಿದ್ದು ಗಮನ ಸೆಳೆದರು.
ಸಭೆಯ ಆರಂಭದಲ್ಲಿ ಮಾತನಾಡಿದ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಸ್ಥಾಯಿ ಸಮಿತಿಯ 11 ಸ್ಥಾನಗಳಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ಗೆ 6, ಬಿಜೆಪಿಗೆ 3 ಹಾಗೂ ಎಸ್‌ಡಿಪಿಐ ಗೆ 2 ಸ್ಥಾನಗಳನ್ನು ನೀಡುವುದಾಗಿ ತಿಳಿಸಿದರು.
ಆದರೆ ಇದಕ್ಕೆ ಒಪ್ಪದ ಬಿಜೆಪಿ ಹಾಗೂ ಎಸ್‌ಡಿಪಿಐ ಸದಸ್ಯರು ಹೆಚ್ಚಿನ ಸ್ಥಾನಗಳನ್ನು ನೀಡಬೇಕೆಂದು ಒತ್ತಾಯಿಸಿದ ಕಾರಣ ಅನಿವಾರ್ಯವಾಗಿ ಚುನಾವಣೆಯನ್ನು ನಡೆಸಬೇಕಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X