Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಪರಾಧ-ಅಪಘಾತ ತಡೆ ಹಿನ್ನಲೆ:...

ಅಪರಾಧ-ಅಪಘಾತ ತಡೆ ಹಿನ್ನಲೆ: ಹೆದ್ದಾರಿಗಳಿಗೆ ಬಂತು 100 ಗಸ್ತು ವಾಹನ

ವಾರ್ತಾಭಾರತಿವಾರ್ತಾಭಾರತಿ16 Jan 2017 8:50 PM IST
share
ಅಪರಾಧ-ಅಪಘಾತ ತಡೆ ಹಿನ್ನಲೆ: ಹೆದ್ದಾರಿಗಳಿಗೆ ಬಂತು 100 ಗಸ್ತು ವಾಹನ

ಬೆಂಗಳೂರು, ಜ.16: ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತ ಹಾಗೂ ಅಪರಾಧಗಳನ್ನು ತಡೆಗಟ್ಟಲು ಮುಂದಾಗಿರುವ ರಾಜ್ಯ ಸರಕಾರ, ಮೊದಲ ಹಂತದ 100 ಗಸ್ತು ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಸೋಮವಾರ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು 100 ಹೆದ್ದಾರಿ ಗಸ್ತು ವಾಹನಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಲೋಕಾರ್ಪಣೆ ಮಾಡಿದರು.

 ಈ ಬಗ್ಗೆ ಮಾತನಾಡಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್, ರಾಜ್ಯ ಹೆದ್ದಾರಿ ಸುರಕ್ಷತಾ ವಾಹನಗಳ ಯೋಜನೆಯಡಿ ಮೊದಲ ಹಂತದಲ್ಲಿ 100 ವಾಹನಗಳನ್ನು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಿ ಹೆದ್ದಾರಿಗಳಲ್ಲಿ ಗಸ್ತು ತಿರುಗಲು ನಿಯೋಜಿಸಲಾಗುತ್ತದೆ.

ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ 30 ರಿಂದ 40 ಕಿ.ಮೀ. ವ್ಯಾಪ್ತಿಯ ಅಂತರಕ್ಕೆ ತಲಾ 1 ವಾಹನವನ್ನು ಹಂಚಿಕೆ ಮಾಡಲಾಗಿತ್ತು. ಮುಂದಿನ ಎರಡು ವರ್ಷಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾದಂತೆ ವ್ಯಾಪ್ತಿಯ ಅಂತರವು 20 ಕಿ.ಮೀ.ಗೆ ಇಳಿಯಲಿದೆ ಎಂದು ಮಾಹಿತಿ ನೀಡಿದರು.

 ಗಸ್ತು ವಾಹನಗಳಲ್ಲಿ 360 ಡಿಗ್ರಿ ಕ್ಯಾಮರಾ, ಟಚ್ ಸ್ಕ್ರೀನ್ ಮಾನಿಟರ್, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಮಡಚುವ ಸ್ಟ್ರೇಚರ್, ಅಗ್ನಿಶಮನ ಉಪಕರಣ, ಸರ್ಚ್ ಲೈಟರ್, ಇನ್ವರ್ಟರ್, ಟಾಪ್‌ಬಾರ್ ಲೈಟ್ ಸೇರಿದಂತೆ ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ ಎಂದು ಓಂಪ್ರಕಾಶ್ ಹೇಳಿದರು.

100 ವಾಹನಗಳನ್ನು ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗಿದ್ದು, ಈಗಾಗಲೇ 33 ಹೆದ್ದಾರಿ ಗಸ್ತು ವಾಹನಗಳನ್ನು ಪ್ರಮುಖ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ. ಮುಂದಿನ 3 ವರ್ಷಗಳಲ್ಲಿ ಸುಮಾರು 300 ಗಸ್ತು ವಾಹನಗಳು ಹೆದ್ದಾರಿಗಳಲ್ಲಿ ಕಾರ್ಯನಿರ್ವಹಿಸಲಿದೆ. ಈ ವಾಹನಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಗಟ್ಟುವುದು, ಅಪಘಾತ ಸಂಭವಿಸಿದಾಗ ತುರ್ತು ರಕ್ಷಣಾತ್ಮಕ ಕಾರ್ಯಗಳನ್ನು ಕೈಗೊಳ್ಳುವುದು. ಗಾಯಾಳುಗಳನ್ನು ತುರ್ತಾಗಿ ಸಮೀಪದ ಚಿಕಿತ್ಸಾ ಕೇಂದ್ರಕ್ಕೆ ಕೊಂಡೊಯ್ಯುವುದು. ಸಂಚಾರ ನಿಯಮಗಳನ್ನು ಹೆದ್ದಾರಿಗಳಲ್ಲಿ ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳುವ ಕಾರ್ಯವನ್ನು ಮಾಡಲಿದೆ ಎಂದು ವಿವರಿಸಿದರು.

ಸುರಕ್ಷಣೆ ಆಗುತ್ತಾ-ಸಿಎಂ: ಇದೇ ಸಂದರ್ಭದಲ್ಲಿ ವಾಹನಗಳಿಗೆ ಹಸಿರು ನಿಶಾನೆ ತೋರಿದ ನಂತರ ವಾಹನದ ಒಳಸೌಲಭ್ಯ ಹಾಗೂ ಉಪಕರಣಗಳನ್ನು ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾಹನದಲ್ಲಿರುವ ಮೈಕ್‌ನಲ್ಲಿ ಈ ವಾಹನಗಳಿಂದ ರಸ್ತೆ ಸುರಕ್ಷತೆ ಕಾಪಾಡಬಹುದೆ, ಅಪಘಾತಗಳಾದಾಗ ಗಾಯಾಳುಗಳ ನೆರವಿಗೆ ಈ ವಾಹನಗಳು ಧಾವಿಸುತ್ತವೆಯೇ ಎಂದು ಪ್ರಶ್ನಿಸಿದಾಗ ಪೊಲೀಸ್ ಅಧಿಕಾರಿಗಳು ಹೌದು, ತುರ್ತು ನೆರವಿಗೆ ಈ ವಾಹನಗಳು ಧಾವಿಸಲಿವೆ ಎಂಬ ಉತ್ತರ ಬಂದ ಮೇಲೆ ಮುಖ್ಯಮಂತ್ರಿ ಧನ್ಯವಾದ ಹೇಳಿದರು.

ಇದೇ ವೇಳೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎ.ಎಂ. ಪ್ರಸಾದ್, ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಸೇರಿ ಪ್ರಮುಖರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X