Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾನೂನು ಪರೀಕ್ಷೆಯಲ್ಲಿ ಶೇ.90ರಷ್ಟು...

ಕಾನೂನು ಪರೀಕ್ಷೆಯಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಫೇಲ್...!

ವಾರ್ತಾಭಾರತಿವಾರ್ತಾಭಾರತಿ16 Jan 2017 11:54 PM IST
share

ಆಗ್ರಾ, ಜ.16: ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾನಿಲಯದಲ್ಲಿ ವೌಲ್ಯಮಾಪನ ಪ್ರಕ್ರಿಯೆಯನ್ನು ಕಟ್ಟುನಿಟ್ಟುಗೊಳಿಸಲಾಗಿದ್ದು ಇದರ ಪರಿಣಾಮ ಗೋಚರವಾಗುತ್ತಿದೆ. ಐದು ವರ್ಷದ ಕಾನೂನು ಪದವಿಗೆ ಪರೀಕ್ಷೆ ಬರೆದಿರುವ 1,700 ವಿದ್ಯಾರ್ಥಿಗಳ ಫಲಿತಾಂಶವನ್ನು ವಿಶ್ವವಿದ್ಯಾನಿಲಯ ಪ್ರಕಟಿಸಿದ್ದು ಶೇ.90ರಷ್ಟು ವಿದ್ಯಾರ್ಥಿಗಳು ಫೇಲಾಗಿದ್ದಾರೆ. ಉಳಿದ 15 ಸಾವಿರ ವಿದ್ಯಾರ್ಥಿಗಳ ಫಲಿತಾಂಶವನ್ನು ಜನವರಿ 20ರಂದು ಪ್ರಕಟಿಸಲಾಗುವುದು ಎಂದು ವಿವಿಯ ಆಡಳಿತ ವರ್ಗ ತಿಳಿಸಿದೆ. ಅವ್ಯವಹಾರ ತಡೆಗಟ್ಟುವ ಉದ್ದೇಶದಿಂದ ಈ ಬಾರಿ ವಿಶ್ವವಿದ್ಯಾನಿಲಯದ ನೋಡಲ್ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ. 2016ರ ಡಿ.13ರಂದು ಉಪಕುಲಪತಿ ಯಾಗಿ ಅಧಿಕಾರ ವಹಿಸಿಕೊಂಡ ಅರವಿಂದ್ ದೀಕ್ಷಿತ್ ಹಲವೊಂದು ನಿಷ್ಠುರ ಕ್ರಮಗಳನ್ನು ಕೈಗೊಂಡಿದ್ದರು. ಇದರಂತೆ ನಿವೃತ್ತ ಶಿಕ್ಷಕರ ಮೇಲುಸ್ತುವಾರಿಯಲ್ಲಿ ಉತ್ತರ ಪತ್ರಿಕೆಯ ವೌಲ್ಯಮಾಪನ ನಡೆದಿತ್ತು. ಈ ಬಾರಿಯ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಖಾಲಿ ಉತ್ತರ ಪತ್ರಿಕೆಯನ್ನು ನೀಡಿದ್ದರೆ, ಬಹುತೇಕ ವಿದ್ಯಾರ್ಥಿಗಳು ಒಂದು ಅಥವಾ ಎರಡು ಪ್ರಶ್ನೆಗಳಿಗೆ ಮಾತ್ರ ಉತ್ತರಿಸಿದ್ದು, ತೇರ್ಗಡೆಯಾಗಲು ಈ ಅಂಕಗಳು ಸಾಕಾಗುವಷ್ಟಿರಲಿಲ್ಲ. ಇದನ್ನು ಉಪಕುಲಪತಿಯ ಗಮನಕ್ಕೆ ತಂದಾಗ, ಮುಂದಿನ ದಿನದಲ್ಲಿ ಯಾವುದೇ ಅವ್ಯವಹಾರ ತಡೆಗಟ್ಟಲು ಎಲ್ಲಾ ಉತ್ತರಪತ್ರಿಕೆಗಳನ್ನು ಸ್ಕಾನ್ ಮಾಡಿಟ್ಟುಕೊಳ್ಳುವಂತೆ ಸೂಚಿಸಿದ್ದರು.

 
ಪರೀಕ್ಷೆಯಲ್ಲಿ ಖಾಲಿ ಉತ್ತರ ಪತ್ರಿಕೆಗಳನ್ನು ನೀಡುವಂತೆ ವಂಚಕರ ಜಾಲವು ವಿದ್ಯಾರ್ಥಿಗಳಿಗೆ ಸೂಚಿಸುತ್ತದೆ. ಬಳಿಕ ವಿಶ್ವ ವಿದ್ಯಾನಿಲಯದ ಕೆಳಹಂತದ ಸಿಬ್ಬಂದಿಗಳ ಬೆಂಬಲದಿಂದ ಈ ಖಾಲಿ ಹಾಳೆಗಳ ಜಾಗದಲ್ಲಿ ಉತ್ತರ ಬರೆದಿರುವ ಹಾಳೆಗಳನ್ನು ಸೇರಿಸಲಾಗುತ್ತದೆ ಎನ್ನಲಾಗಿದೆ. ಆದರೆ ಈ ಬಾರಿ ಹಲವು ಹೊಸ ಉಪಕ್ರಮಗಳನ್ನು ಜಾರಿಗೊಳಿಸಿದ ಕಾರಣ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಲು ಕಷ್ಟವಾಗಿದೆ ಎಂದು ವಿಶ್ವವಿದ್ಯಾನಿಲಯದ ವಕ್ತಾರ ಗಿರಿಜಾಶಂಕರ್ ಶರ್ಮ ಹೇಳಿದ್ದಾರೆ.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X