Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಗನವಾಡಿಯಲ್ಲಿ ದಲಿತ ಮಕ್ಕಳ ಬಗ್ಗೆ...

ಅಂಗನವಾಡಿಯಲ್ಲಿ ದಲಿತ ಮಕ್ಕಳ ಬಗ್ಗೆ ಅಸ್ಪರ್ಶತೆ ಸಹಾಯಕಿಯನ್ನು ವಜಾ ಗೊಳಿಸಲು ದಲಿತರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 Jan 2017 10:54 PM IST
share
ಅಂಗನವಾಡಿಯಲ್ಲಿ ದಲಿತ ಮಕ್ಕಳ ಬಗ್ಗೆ ಅಸ್ಪರ್ಶತೆ ಸಹಾಯಕಿಯನ್ನು ವಜಾ ಗೊಳಿಸಲು ದಲಿತರ ಆಗ್ರಹ

ಪುತ್ತೂರು , ಜ.17 : ಪುತ್ತೂರು ನಗರದ ನೆಲ್ಲಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ದಲಿತರ ಮಕ್ಕಳ ಬಗ್ಗೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂಬ ಆರೋಪ ವ್ಯಕ್ತವಾದ ಹಿನ್ನಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಂಗಳವಾರ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ಘಟನೆಯ ಕುರಿತು ವಿಚಾರಣೆ ನಡೆಸಿದ ಮತ್ತು ಇದೇ ವೇಳೆ ಅಲ್ಲಿ ಸೇರಿದ್ದ ಬ್ರಹ್ಮನಗರ ದಲಿತ ಕಾಲೋನಿಯ ನಿವಾಸಿಗಳು ದಲಿತ ಮಕ್ಕಳ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಿರುವ ಅಂಗನವಾಡಿ ಸಹಾಯಕಿಯನ್ನು ವಜಾಗೊಳಿಸದಿದ್ದರೆ ನಮ್ಮ ಮಕ್ಕಳನ್ನು ಇನ್ನು ಮುಂದೆ ಅಂಗವಾಡಿಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದು ಗೊಂದಲ ಸೃಷ್ಟಿಸಿದ ಘಟನೆ ನಡೆಯಿತು.

ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶಾಂತಿ ಹೆಗಡೆ ಮತ್ತು ಸ್ಥಳೀಯ ಅಂಗನವಾಡಿ ಸಲಹಾ ಸಮಿತಿಯ ಅಧ್ಯಕ್ಷರಾದ ಸ್ಥಳೀಯ ನಗರಸಭಾ ಸದಸ್ಯ ಶಕ್ತಿಸಿನ್ಹಾ , ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಜಯಲಕ್ಷ್ಮೀ ಸುರೇಶ್, ಅಸಾಹಯಕರ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ನಯನಾ ರೈ ಅವರು ಮಂಗಳವಾರ ಅಂಗನವಾಡಿ ಕೇಂದ್ರಕ್ಕೆ ತೆರಳಿ ಆರೋಪಗಳ ಕುರಿತು ವಿಚಾರಣೆ ನಡೆಸಿದ್ದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ್ದ ಬ್ರಹ್ಮನಗರ ದಲಿತ ಕಾಲೋನಿಯ ಮಕ್ಕಳ ಪೋಷಕರು ನಮ್ಮ ದಲಿತರ ಮಕ್ಕಳನ್ನು ಇಲ್ಲಿನ ಅಂಗನವಾಡಿ ಸಹಾಯಕಿ ವಿಜಯಲಕ್ಷ್ಮಿ ಅವರು ತಾರತಮ್ಯ ನೀತಿಯಿಂದ ನೋಡುತ್ತಿದ್ದಾರೆ. ಉಳಿದ ಮಕ್ಕಳಿಗೆ ಪ್ರತ್ಯೇಕ ಪ್ರತ್ಯೇಕವಾಗಿ ಒಂದೊಂದು ಲೋಟ ಹಾಲು ನೀಡಿದರೆ ನಮ್ಮ ಮಕ್ಕಳಿಗೆ ಒಂದೇ ಲೋಟದಲ್ಲಿ ಅರ್ಧ ಲೋಟದಂತೆ ಹಾಲು ನೀಡಲಾಗುತ್ತಿದೆ. ತೊಳೆಯದ ಗ್ಲಾಸು ,ಬಟ್ಟಲಿನಲ್ಲಿ ಅನ್ನ ,ಹಾಲು ನೀಡಲಾಗುತ್ತಿದೆ. ನಮ್ಮ ದಲಿತ ಮಕ್ಕಳನ್ನು ಪ್ರತ್ಯೇಕವಾಗಿ ನೆಲದಲ್ಲಿ ಕುಳ್ಳಿರಿಸಿ ಉಳಿದ ಮಕ್ಕಳನ್ನು ಚಾಪೆಯಲ್ಲಿ ಕೂರಿಸಲಾಗುತ್ತಿದೆ. ಶೌಚಾಲಯದಲ್ಲಿ ದಲಿತ ಮಕ್ಕಳಿಗೆ ಶೌಚಕ್ಕೆ ಅವಕಾಶ ನೀಡದೆ ಹೊರಗಡೆ ಕಳುಹಿಸಲಾಗುತ್ತಿದೆ. ಶುಚಿಗೊಳಿಸುವ ಬದಲಾಗಿ ಅವರನ್ನು ಅಂಗನವಾಡಿಯಿಂದ ಹೊರಗಡೆ ನಿಲ್ಲಿಸಲಾಗುತ್ತಿದೆ ಎಂದು ಆರೋಪ ವ್ಯಕ್ತಪಡಿಸಿದರು.

ದಲಿತ ಮಕ್ಕಳ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಿರುವ ಅಂಗನವಾಡಿ ಸಹಾಯಕಿಯನ್ನು ಇಂದೇ ವಜಾ ಮಾಡದಿದ್ದರೆ ಈಗಲೇ ನಮ್ಮ ಮಕ್ಕಳನ್ನು ಕರೆದುಕೊಂಡು ಹೋಗುತ್ತೇವೆ ಎಂದು ಪಟ್ಟು ಹಿಡಿದರು.

ಅಂಗನವಾಡಿ ಸಹಾಯಕಿಯನ್ನು ಈಗಲೇ ವಜಾ ಗೊಳಿಸಬೇಕು ಇಲ್ಲವೆ ತಾವು ನಮ್ಮ ಮಕ್ಕಳನ್ನು ಕರೆದುಕೊಂಡು ಹೋಗುತ್ತೇವೆ ಎಂದು ಎಚ್ಚರಿಸಿದ ದಲಿತ ಕಾಲೋನಿಯ ನಿವಾಸಿಗಳು ಮಕ್ಕಳನ್ನು ಕರೆದೊಯ್ಯಲು ಮುಂದಾದಾಗ ಅವರನ್ನು ಸಮಾಧಾನಿಸಲು ಮುಂದಾದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಹೆಗಡೆ ಅವರು ತಾನು ಆರೋಪದ ಕುರಿತು ಪರಿಶೀಲನೆಗಾಗಿಯೇ ಬಂದಿದ್ದು, ಇಲ್ಲಿನ ಸಹಾಯಕಿ ನಾಳೆಯಿಂದ ಸೇವೆಗೆ ಇರುವುದಿಲ್ಲ. ಮೇಲಾಧಿಕಾರಿಗಳ ಜೊತೆ ಮಾತನಾಡಿ ಇಲ್ಲಿಗೆ ಬದಲಿ ವ್ಯವಸ್ಥೆ ಮಾಡುತ್ತೇನೆ. ಇಂದು ಸಂಜೆ 4 ಗಂಟೆ ತನಕವೂ ತಾನೇ ಇಲ್ಲಿ ಇರುತ್ತೇವೆ. ವಠಾರದ ಎಲ್ಲಾ ಮಕ್ಕಳನ್ನು ಅಂಗನವಾಡಿಗೆ ಕಳುಹಿಸಿ, ಇನ್ನು ಮುಂದೆ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ ಅವರು ದಲಿತ ಮಕ್ಕಳ ಬಗ್ಗೆ ತಾರತಮ್ಯ ನೀತಿ ಅನುಸರಿಸುವ ಮೂಲಕ ಚ್ಯುತಿ ತರುವ ಸಹಾಯಕಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದರು. ಈ ಭರವಸೆಯ ಹಿನ್ನಲೆಯಲ್ಲಿ ದಲಿತ ಕಾಲೋನಿಯ ನಿವಾಸಿಗಳು ತಮ್ಮ ಪಟ್ಟು ಸಡಿಲಿಸಿದರು.

ಅಂಗನವಾಡಿ ಮೇಲ್ವಿಚಾರಕಿ ದಮಯಂತಿ, ಬ್ರಹ್ಮನಗರ ನಿವಾಸಿಗಳಾದ ಶೇಖರ್ ಪಿ. ಶೇಖರ್, ರೂಪಿಣಿ, ಪ್ರಕಾಶ್, ವಿನುತಾ, ಮೋಹಿನಿ,ಶೋಭಾ, ಲತಾ,ಗುರುರಾಜ್,ಲಕ್ಷ್ಮೀ, ಸುನಿಲ್,ಮಹೇಶ್, ಸುದರ್ಶನ್, ಮನೋಹರ್, ರಾಕೇಶ್, ಲಕ್ಷ್ಮಣ ಮತ್ತಿತರರು ಅಂಗನವಾಡಿ ಸಹಾಯಕಿಯ ತಾರತಮ್ಯ ಧೋರಣೆಯ ವಿರುದ್ಧ ಧ್ವನಿ ಎತ್ತಿದರು.

ಅಂಗನವಾಡಿ ಕೇಂದ್ರದಲ್ಲಿ ಗೊಂದಲದ ವಾತಾರಣ ನಿರ್ಮಾಣವಾದ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆಯ ಎಸ್‌ಐ ಓಮನಾ ಮತ್ತು ಸಿಬ್ಬಂದಿ ಆಗಮಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X