Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘ ಪರಿವಾರ-ಪೊಲೀಸ್ ಇಲಾಖೆಯ ನಂಟು...

ಸಂಘ ಪರಿವಾರ-ಪೊಲೀಸ್ ಇಲಾಖೆಯ ನಂಟು ಖಂಡಿಸಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ನ್ಯಾಯಾಂಗ ತನಿಖೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ18 Jan 2017 6:34 PM IST
share
ಸಂಘ ಪರಿವಾರ-ಪೊಲೀಸ್ ಇಲಾಖೆಯ ನಂಟು ಖಂಡಿಸಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಮಂಗಳೂರು, ಜ.18: ಸಂಘ ಪರಿವಾರದ ಪ್ರಾಯೋಜಕತ್ವದಲ್ಲಿ ‘ರ‍್ಯಾಂಕ್ಸ್’ ಎಂಬ ಸಂಘಟನೆಯು ನಿವೃತ್ತ ಡಿಜಿಪಿ ಎಂ.ಎನ್. ಕೃಷ್ಣಮೂರ್ತಿಯ ಉಸ್ತುವಾರಿಯಲ್ಲಿ ಜ.9ರಂದು ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ‘ಸರ್ವಧರ್ಮ ಸದ್ಭಾವನೆ ಸಂಗೋಷ್ಠಿ’ ಎಂಬ ಕಾರ್ಯಕ್ರಮಕ್ಕೆ ಮಂಗಳೂರಿನ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಆರೋಪಿಸಿ  ದ.ಕ.ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟವು ಬುಧವಾರ ದ.ಕ.ಜಿಲ್ಲಾಧಿಕಾರಿಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು.

ಇತ್ತೀಚೆಗೆ ನಡೆದ ಆ ಕಾರ್ಯಕ್ರಮದಲ್ಲಿ ಮಕ್ಕಾ ಮಸೀದಿ, ಅಜ್ಮೀರ್ ದರ್ಗಾ ಬಾಂಬ್ ಸ್ಪೋಟದಲ್ಲಿ ಹೆಸರು ಕೇಳಿಬಂದಿದ್ದ ಮತ್ತು ಆರೆಸ್ಸೆಸ್ಸ್‌ನ ಮಾರ್ಗದರ್ಶಕ ಇಂದ್ರೇಶ್ ಕುಮಾರ್ ದಿಕ್ಸೂಚನಾ ಭಾಷಣ ಮಾಡಿದ್ದಾರೆ. ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಎಂಬ ಆರೆಸ್ಸೆಸ್ಸ್‌ನ ಅಂಗ ಸಂಸ್ಥೆಯು ‘ರ‍್ಯಾಂಕ್ಸ್’ ಎಂಬ ಅಪರಿಚಿತ ಸಂಘಟನೆಯ ಹೆಸರಿನಲ್ಲಿ ಈ ಕಾರ್ಯಕ್ರಮ ನಡೆಸಿರುವುದು ಇದೀಗ ಬಹಿರಂಗವಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮಂಗಳೂರಿನ ಮುಸ್ಲಿಂ ಧರ್ಮಗುರುಗಳು ಹಾಗು ಮುಸ್ಲಿಂ ಧಾರ್ಮಿಕ, ಸಾಮಾಜಿಕ ನಾಯಕರನ್ನು ಆಹ್ವಾನಿಸಿದ್ದಾರೆ.

ಅಲ್ಲದೆ ಕೆಲವು ಪೊಲೀಸರು ಅಂದು ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೇ ಮುಸ್ಲಿಂ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿರುವುದು ಮತ್ತು ಆಮಂತ್ರಣ ಪತ್ರಿಕೆಯನ್ನು ವಿತಿರಿಸಿರುವುದು ಗಂಭೀರ ವಿಚಾರವಾಗಿದೆ. ಒಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ಸಂಘ ಪರಿವಾರ ಅಪವಿತ್ರ ಮೈತ್ರಿ ಮಾಡಿಕೊಂಡಿರುವುದು ಸ್ಪಷ್ಟವಾಗಿರುವುದರಿಂದ ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಂಆರ್‌ಎಂ ಮುಸ್ಲಿಮರ ಅಭಿವೃದ್ಧಿಗೆ ಹುಟ್ಟಿಕೊಂಡ ಸಂಘಟನೆಯಲ್ಲ. ಅದು ಆರೆಸ್ಸೆಸ್ಸ್ ಅಜೆಂಡದಂತೆ ನಡೆಯುತ್ತಿದೆ. ದೇಶದ ಮುಸಲ್ಮಾನರಿಗೆ ಸಂಘಪರಿವಾರ ಸೆಗಣಿ ತಿನ್ನಿಸಿದಾಗ, ಮೂತ್ರ ಕುಡಿಸಿದಾಗ, ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದಾಗ, ಗುಜರಾತ್ ಹತ್ಯಾಕಾಂಡ ನಡೆದಾಗ, ಸಾಚಾರ್-ರಂಗನಾಥ್ ವರದಿ ಬಂದಾಗ ಎಲ್ಲಿತ್ತು? ಯಾವ ಪಾತ್ರ ವಹಿಸಿತ್ತು ಎಂದು ಪ್ರಶ್ನಿಸಿದ ಸನ್ಮಾರ್ಗ ವಾರಪತ್ರಿಕೆಯ ಸಂಪಾದಕ ಎ.ಕೆ.ಕುಕ್ಕಿಲ, ಪೊಲೀಸ್ ಇಲಾಖೆ ಹಿಂದು ಅಥವಾ ಮುಸ್ಲಿಮರ ಪರವಹಿಸದೆ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಲಿ ಎಂದರು.

ಮಕ್ಕಾ ಮಸೀದಿ, ಅಜ್ಮೀರ್ ದರ್ಗಾ ಬಾಂಬ್ ಸ್ಪೋಟದ ಆರೋಪಿ ಇಂದ್ರೇಶ್ ಕುಮಾರ್‌ನ ಬಗ್ಗೆ ಮಂಗಳೂರಿನ ಪೊಲೀಸರಿಗೆ ತಿಳಿಯದಿರುವುದು ವಿಪರ್ಯಾಸ. ಇಂದ್ರೇಶ್ ಕುಮಾರ್‌ನಂತಹ ಭಯೋತ್ಪಾದಕನಿಂದ ಸೌಹಾರ್ದದ ಪಾಠ ಮುಸ್ಲಿಮರಿಗೆ ಅಗತ್ಯವಿಲ್ಲ. ಇಲ್ಲಿನ ಸಂಸದರು ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ಹೇಳಿಕೊಂಡಿದ್ದರೆ, ರಾಜ್ಯ ಆಹಾರ ಸಚಿವ ಯು.ಟಿ.ಖಾದರ್ ಇತ್ತೀಚೆಗೆ ಶಬರಿಮಲೆ ಯಾತ್ರಾರ್ಥಿಗಳ ವಾಹನಕ್ಕೆ ತಗಲಿದ ಬೆಂಕಿಯನ್ನು ನಂದಿಸುವ ಮೂಲಕ ಸೌಹಾರ್ದದ ಪಾಠ ಕಲಿಸಿದ್ದಾರೆ. ಅಂತಹ ಸೂಕ್ಷ್ಮತೆಯನ್ನು ಪೊಲೀಸ್ ಇಲಾಖೆ ಮನಗಾಣಬೇಕು ಎಂದು ಯುನಿವೆಫ್ ರಾಜ್ಯಾಧ್ಯಕ್ಷ ರಫಿಉದ್ದೀನ್ ಕುದ್ರೋಳಿ ಹೇಳಿದರು.

ಮುಸ್ಲಿಂ ರಾಷ್ಟ್ರೀಯ ಮಂಚ್ ಬಗ್ಗೆ ಮುಸ್ಲಿಮರು ತಿಳಿದುಕೊಳ್ಳುವ ಅಗತ್ಯವಿದೆ. ಅದು ಮುಸ್ಲಿಮರ ಹಿತಕ್ಕಾಗಿ ಹುಟ್ಟಿದ ಸಂಘಟನೆಯಲ್ಲ. ಅದರಲ್ಲಿ ಇಮಾಮರು, ನಾಯಕರು ಎಂದು ಹೇಳಿಕೊಳ್ಳುವವರು ಯಾರೂ ಮುಸ್ಲಿಮರ ಇಮಾಮರಲ್ಲ, ನಾಯಕರೂ ಅಲ್ಲ. ಇದೀಗ ಮುಸ್ಲಿಂ ಮಹಿಳೆಯರಲ್ಲಿ ಒಡಕು ಮೂಡಿಸಲು ‘ಮುಸ್ಲಿಂ ಮಹಿಳಾ ಫೌಂಡೇಶನ್’ ಎಂಬ ಸಂಘಟನೆಯನ್ನು ಹುಟ್ಟು ಹಾಕಿದ್ದಾರೆ. ಈ ಬಗ್ಗೆ ಜಾಗರೂಕರಾಗಬೇಕಾದ ಅಗತ್ಯವಿದೆ ಎಂದು ಪಿಎಫ್‌ಐ ಬಜ್ಪೆ ವಲಯ ಅಧ್ಯಕ್ಷ ಎ.ಕೆ.ಅಶ್ರಫ್ ಹೇಳಿದರು.

ಸಣ್ಣಪುಟ್ಟ ವಿಚಾರಕ್ಕೂ ಮಾಹಿತಿ ಕಲೆ ಹಾಕುವ ಪೊಲೀಸ್ ಇಲಾಖೆಯು ಈ ಕಾರ್ಯಕ್ರಮದ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದಿರುವುದು ಆಶ್ಚರ್ಯಕರ. ಹಾಗಿದ್ದರೆ ನಗರದ ಪೊಲೀಸ್ ಗುಪ್ತಚರ ಏನು ಮಾಡುತ್ತಿದೆ?. ಸಂಘಪರಿವಾರಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆಯೇ? ಎಂದು ಮಂಗಳೂರು ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲಿ ಹಸನ್ ಪ್ರಶ್ನಿಸಿದರು.

ವೇದಿಕೆಯಲ್ಲಿ ಮುಸ್ಲಿಂ ಐಕ್ಯತಾ ವೇದಿಕೆಯ ಅಧ್ಯಕ್ಷ ಮುಸ್ತಫಾ ಕೆಂಪಿ, ಎಸ್ ಡಿಪಿಐ ಮುಖಂಡ ಜಲೀಲ್ ಕೃಷ್ಣಾಪುರ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ಕಾರ್ಯಕ್ರಮದ ಸಂಚಾಲಕ ಹಾಗು ನ್ಯಾಯವಾದಿ ಸಾದುದ್ದೀನ್ ಸಾಲಿ ವಹಿಸಿದ್ದರು.

ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಸ್ವಾಗತಿಸಿ ಪ್ರಾಸ್ತಾವಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X