Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಾದೆನ್ ಬೇಟೆಗೆ ನೆರವಾಗಿದ್ದ ವೈದ್ಯನ...

ಲಾದೆನ್ ಬೇಟೆಗೆ ನೆರವಾಗಿದ್ದ ವೈದ್ಯನ ಇನ್ನೂ ಬಿಡುಗಡೆಗೊಳಿಸಿಲ್ಲ

ಪಾಕ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ18 Jan 2017 8:35 PM IST
share
ಲಾದೆನ್ ಬೇಟೆಗೆ ನೆರವಾಗಿದ್ದ ವೈದ್ಯನ ಇನ್ನೂ ಬಿಡುಗಡೆಗೊಳಿಸಿಲ್ಲ

ಇಸ್ಲಾಮಾಬಾದ್,ಜ.18: ಅಲ್‌ಖಾಯ್ದಾ ನಾಯಕ ಉಸಾಮಾ ಬಿನ್ ಲಾದೆನ್‌ನ ಬೇಟೆಯಾಡಲು ಅಮೆರಿಕದ ಬೇಹುಗಾರಿಕಾ ಸಂಸ್ಥೆ ಸಿಐಎಗೆ ನೆರವಾಗಿದ್ದನೆನ್ನಲಾದ ಬಂಧಿತ ಪಾಕ್ ವೈದ್ಯ ಡಾ. ಶೇಖ್ ಅಫ್ರಿದಿ ಅವರನ್ನು ಬಿಡುಗಡೆಗೊಳಿಸಲಾಗಿಲ್ಲ ಅಥವಾ ಆತನನ್ನು ಅಮೆರಿಕಕ್ಕೆ ಹಸ್ತಾಂತರಿಸಿಲ್ಲವೆಂದು ಪಾಕ್ ಬುಧವಾರ ಸ್ಪಷ್ಟಪಡಿಸಿದೆ.

 ಇಂದು ನಡೆದ ಪಾಕ್‌ನ ಮೇಲ್ಮನೆ ಸಂಸತ್ ಕಲಾಪದ ವೇಳೆ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸುತ್ತಿದ್ದ ಕಾನೂನು ಸಚಿವ ಝಹೀದ್ ಹಮೀದ್ ಅವರು ಈ ವಿಷಯ ತಿಳಿಸಿದರು. ಕಾನೂನು ತನ್ನದೇ ಆದ ದಾರಿಯಲ್ಲಿ ಸಾಗುತ್ತಿದ್ದು, ನ್ಯಾಯಸಮ್ಮತವಾಗಿ ಅಫ್ರಿದಿಯ ವಿಚಾರಣೆಯನ್ನು ನಡೆಸಲಾಗುವುದು ಎಂದವರು ಹೇಳಿದರು.

2011ರ ಮೇ ತಿಂಗಳಲ್ಲಿ ಅಮೆರಿಕದ ಪಡೆಗಳು ರಹಸ್ಯ ಕಾರ್ಯಾಚರಣೆಯೊಂದನ್ನು ನಡೆಸಿ ಉತ್ತರ ಪಾಕಿಸ್ತಾನದ ಅಬೊಟಾಬಾದ್ ಪಟ್ಟಣದ ಮನೆಯೊಂದರಲ್ಲಿ ತಲೆಮರೆಸಿಕೊಂಡಿದ್ದ ಉಸಾಮಾಬಿನ್ ಲಾದೆನ್‌ನನ್ನು ಹತ್ಯೆಗೈದ ಬಳಿಕ ಪಾಕ್ ಪೊಲೀಸರು ಡಾ. ಶೇಖ್ ಅಫ್ರಿದಿಯನ್ನು ಬಂಧಿಸಿದ್ದರು.

ಡಾ.ಶೇಖ್ ಅಫ್ರಿದಿಯು, ಒಸಾಮಾ ಬಿನ್ ಲಾದೆನ್‌ನ ಗುರುತನ್ನು ದೃಢಪಡಿಸಿಕೊಳ್ಳಲು ಸಿಐಎಗೆ ನೆರವಾಗುವುದಕ್ಕಾಗಿ ನಕಲಿ ಲಸಿಕೆ ಅಭಿಯಾನವನ್ನು ನಡೆಸಿ, ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದನೆಂದು ಪಾಕ್ ಆರೋಪಿಸಿದೆ.

ಲಾದೆನ್ ಹತ್ಯೆಯ ಬೆನ್ನಲ್ಲೇ ಅಫ್ರಿದಿಯನ್ನು ಪಾಕ್ ಭದ್ರತಾ ಅಧಿಕಾರಿಗಳು ಬಂಧಿಸಿದ್ದು, ಆತನಿಗೆ ಭಯೋತ್ಪಾದಕ ಗುಂಪುಗಳೊಂದಿಗೆ ನಂಟಿತ್ತೆಂಬ ಆರೋಪವನ್ನು ಹೊರಿಸಿದ್ದರು.

ಅಫ್ರಿದಿಯು ಕಾನೂನು ಹಾಗೂ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡಿದ್ದ, ನೆಲದ ಕಾನೂನಿನ ಅಡಿ ಆತ ಅಪರಾಧವನ್ನು ಎಸಗಿದ್ದಾನೆ ಹಾಗೂ ಈಗ ವಿಚಾರಣೆಯನ್ನು ಎದುರಿಸುತ್ತಿದ್ದಾನೆಂದು ಪಾಕ್ ಸರಕಾರವು, ಅಮೆರಿಕದ ಮುಂದೆ ಪುನರುಚ್ಚರಿಸುತ್ತಲೇ ಬಂದಿದೆ ಎಂದು ಝಹೀರ್ ಹಮೀದ ಸದನಕ್ಕೆ ತಿಳಿಸಿದರು.

ತಾನು ಅಧಿಕಾರಕ್ಕೇರಿದ ಕೇವಲ ಎರಡು ನಿಮಿಷಗಳಲ್ಲಿ ಆಫ್ರಿದಿಯನ್ನು ಬಂಧಮುಕ್ತಗೊಳಿಸುವೆನೆಂದು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಅಧ್ಯಕ್ಷೀಯ ಅಭ್ಯರ್ಥಿ ಚುನಾವಣಾ ಪ್ರಚಾರದ ವೇಳೆ ಹೇಳಿರುವುದನ್ನು ಪಾಕ್ ಬಲವಾಗಿ ಟೀಕಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X