ಕೇರಳ ಮುಖ್ಯಮಂತ್ರಿ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮಂಗಳೂರು , ಜ.19 : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ದ ಬಿಜೆಪಿ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆ ನಡೆಸಿದ ಘಟನೆ ಕಂಕನಾಡಿ (ಪಡೀಲ್) ರೈಲ್ವೆ ನಿಲ್ದಾಣದಲ್ಲಿ ನಡೆಯಿತು .
ತಿರುವನಂತಪುರಂ ಗೆ ತೆರಳಲು ಮಂಗಳೂರಿಗೆ ಆಗಮಿಸಿದ ಕೇರಳ ಸಿ ಎಂ ವಿರುದ್ಧ ರೈಲ್ವೆ ನಿಲ್ದಾಣ ದ ಹೊರಗೆ ಕಪ್ಪುಬಾವುಟ ಪ್ರದರ್ಶನ ಮಾಡುವ ಮೂಲಕ ಕೇರಳದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ರ ಹತ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ನಂತರ ಪಿಣರಾಯಿ ವಿಜಯನ್ ಅಲ್ಲಿಂದ ತೆರಳಿದರು.
Next Story





